AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲೀಕರಣಕ್ಕೆ ಮುಂದಾದ ಕಂದಾಯ ಇಲಾಖೆ: ಬಳ್ಳಾರಿ ಜಿಲ್ಲೆಗೆ ಮೊದಲ ಸ್ಥಾನ

ಕಂದಾಯ ಇಲಾಖೆಯ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ಮುಂದಾಗಿದೆ. ವಿಶೇಷವೆಂದರೆ, ರಾಜ್ಯದಲ್ಲಿ ಡಿಜಿಟಲೀಕರಣ ಮಾಡುವುದರಲ್ಲಿ ಬಳ್ಳಾರಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಇಚ್ಚಾಶಕ್ತಿಯಿಂದ ಇಡೀ ಇಲಾಖೆಯ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ಮುಂದಾಗಿದೆ.

ಡಿಜಿಟಲೀಕರಣಕ್ಕೆ ಮುಂದಾದ ಕಂದಾಯ ಇಲಾಖೆ: ಬಳ್ಳಾರಿ ಜಿಲ್ಲೆಗೆ ಮೊದಲ ಸ್ಥಾನ
ದಾಖಲೆ ಡಿಜಿಟಲೀಕರಣ
ವಿನಾಯಕ ಬಡಿಗೇರ್​
| Edited By: |

Updated on: Nov 27, 2023 | 3:02 PM

Share

ಬೀಳ್ಳಾರಿ​, ನವೆಂಬರ್​​ 27: ಜಿಲ್ಲೆಯಲ್ಲಿ ಕಂದಾಯ ಇಲಾಖೆ (Revenue Department) ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದು, ಕಂದಾಯ ಇಲಾಖೆಯ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ಹೊರಟಿದೆ. ವಿಶೇಷವೆಂದರೆ ರಾಜ್ಯದಲ್ಲಿ ಡಿಜಿಟಲೀಕರಣ ಮಾಡುವುದರಲ್ಲಿ ಬಳ್ಳಾರಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಕಂಪ್ಯೂಟರ್ ಬಂದ ಮೇಲೆ ಮೊದಲು ಖಾಸಗಿ ಸಂಸ್ಥೆಗಳು ಇದೀಗ ಸರ್ಕಾರದ ಎಲ್ಲ ಇಲಾಖೆಗಳು ಆಧುನಿಕತೆಗೆ ತಕ್ಕಂತೆ ಎಲ್ಲ ರೀತಿಯ ತಂತ್ರಾಂಶವನ್ನು ಬದಲಾವಣೆ ಮಾಡಿಕೊಂಡಿವೆ. ಆದರೆ, ಈ ವಿಚಾರದಲ್ಲಿ ಕಂದಾಯ ಇಲಾಖೆ ಮಾತ್ರ ಬಹಳ ಹಿಂದೆ ಬಿದ್ದಿತ್ತು. ಇದೀಗ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಇಚ್ಚಾಶಕ್ತಿಯಿಂದ ಇಡೀ ಇಲಾಖೆಯ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ಮುಂದಾಗಿದೆ.

ಬ್ರಿಟಿಷರ, ನಿಜಾಮರ ಕಾಲದ ದಾಖಲೆ ಸೇರಿದಂತೆ ದಶಕಗಳಿಂದಲೂ ಕಂದಾಯ ಇಲಾಖೆ ಯಲ್ಲಿ ಕಾಗದದ ರೂಪದಲ್ಲಿರೋ ಎಲ್ಲಾ ದಾಖಲೆಗಳನ್ನು ಇಂದಿನ ದಿನಮಾನಕ್ಕೆ ತಕ್ಕಂತೆ ಬದಲಾವಣೆ ಮಾಡುವುದರ ಜೊತೆ ಎಲ್ಲವನ್ನು ಸ್ಕಾನಿಂಗ್ ಮಾಡಿ ಸಂಗ್ರಹ ಮಾಡುವ ಕೆಲಸ ಮಾಡಲಾಗುತ್ತಿದೆ. ಈ ರೀತಿಯಲ್ಲಿ ಡಿಜಿಟಲೀಕರಣ ಮಾಡುವುದರಿಂದ ಇಲಾಖೆಗೂ ಸೇರಿದಂತೆ ಸಾರ್ವಜನಿಕರಿಗೂ ದಾಖಲೆಗಳು ಬೇಕಾದಾಗ ಲಭ್ಯವಿರುತ್ತದೆ. ವಿಶೇಷವೆಂದರೆ ಈಗಾಗಲೇ 80ರಷ್ಟು ಡಿಜಿಟಲೀಕರಣ ಮಾಡುವ ಮೂಲಕ ರಾಜ್ಯದಲ್ಲಿಯೇ ಬಳ್ಳಾರಿ ಮೊದಲ ಸ್ಥಾನದಲ್ಲಿದೆ.

ಇದನ್ನೂ ಓದಿ: ಬೀದರ್​ನಲ್ಲಿ ಅಕ್ರಮ ಕೆಂಪು ಮಣ್ಣು ಸಾಗಾಟ ದಂಧೆ: ಕಂಡು ಕಾಣದಂತೆ ಕುಳಿತ ಅಧಿಕಾರಿಗಳು

ಕಾಗದದ ರೂಪದಲ್ಲಿರೋ ದಾಖಲೆಗಳನ್ನು ಅದೆಷ್ಟೋ ಬಾರಿ ತಿರುಚಿದ್ದಾರೆ. ಕೆಲವೊಮ್ಮೆ ದಾಖಲೆಗಳನ್ನು ಸುಟ್ಟಿವೆ. ಕಳೆದು ಹೋಗಿವೆ ಎನ್ನುವ ಸಿದ್ಧ ಉತ್ತರವನ್ನು ಅಧಿಕಾರಿಗಳು ನೀಡಿದ ಉದಾಹರಣೆಗಳಿವೆ. ಹೀಗಾಗಿ ಈ ರೀತಿಯಲ್ಲಿ ಎಲ್ಲಾ ದಾಖಲೆಗಳನ್ನು ಡಿಜಿಟಿಲಿಕರಣ ಮಾಡಿ ಸಾಫ್ಟವೇರ್ಗಳಿಗೆ ಅಪ್ಲೋಡ ಮಾಡಿಟ್ಟರೇ ಕಂದಾಯ ಇಲಾಖೆ ದಾಖಲೆಗಳು ಶಾಶ್ವತವಾಗಿ ಸುರಕ್ಷಿತವಾಗಿರತ್ತವೆ ಅನ್ನೋದು ಸರ್ಕಾರದ ಲೆಕ್ಕಾಚಾರ. ಅಲ್ಲದೇ ಹಣಕ್ಕಾಗಿ ಕೆಲ ಬ್ರೋಕರ್ಗಳು ದಾಖಲೆಗಳನ್ನು ಮರುಸೃಷ್ಠಿ ಮಾಡಿ ಸರ್ಕಾರಿ ಸ್ಥಳವನ್ನು ಕಬಳಿಸೋದು ತಪ್ಪುತ್ತದೆ.

ಇದನ್ನೂ ಓದಿ: ಬಿಸಿ ಊಟ ಯೋಜನೆಗೆ ಹಣ ನೀಡಿದ ಸರ್ಕಾರ: ಸ್ವಂತ ದುಡ್ಡಲ್ಲಿ ಶಿಕ್ಷಕರಿಂದ ಮಕ್ಕಳಿಗೆ ಊಟ

ಇದು ಕೇವಲ ಅಕ್ರಮ ತಡೆಯೋದು ಮಾತ್ರವಲ್ಲದೇ ಎಲ್ಲರಿಗೂ ಎಲ್ಲ ಕಾಲಕ್ಕೂ ದಾಖಲೆಗಳು ಅವಶಕತೆಗೆ ತಕ್ಕಂತೆ ಶೀಘ್ರದಲ್ಲಿ ಸಿಗುತ್ತದೆ. ಅಲ್ಲದೇ ದಶಕಗಳ ದಾಖಲೆಗಳನ್ನು ಶಾಶ್ವತವಾಗಿ ಉಳಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆ ತೆಗೆದುಕೊಂಡಿರೋ ಕ್ರಮ ನಿಜಕ್ಕೂ ವಿಷೇಶವಾಗಿದೆ.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ