AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ: ಗೂಡ್ಸ್ ರೈಲಿಗೆ ಸಿಲುಕಿ ಕುರಿಗಾಹಿ ಮತ್ತು 18 ಕುರಿಗಳ ದಾರುಣ ಸಾವು

ರೈಲು ಡಿಕ್ಕಿ ಹೊಡೆದ ರಭಸಕ್ಕೆ ಕುರಿಗಾಹಿ ಚೌಟಗಿ ರಮೇಶ ಅವರ ದೇಹ ತುಂಡು ತಂಡಾಗಿ ಅಂಗಾಂಗಗಳು ರೈಲು ಹಳಿ ಬಳಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಅಲ್ಲದೇ ಕುರಿಗಳು ಕೂಡ ಸ್ಥಳದಲ್ಲಿಯೇ ಮೃತಪಟ್ಟಿವೆ.

ವಿಜಯನಗರ: ಗೂಡ್ಸ್ ರೈಲಿಗೆ ಸಿಲುಕಿ ಕುರಿಗಾಹಿ ಮತ್ತು 18 ಕುರಿಗಳ ದಾರುಣ ಸಾವು
ರೈಲು ಡಿಕ್ಕಿ ಹೊಡೆದು ದುರ್ಘಟನೆ
TV9 Web
| Edited By: |

Updated on:Oct 25, 2021 | 12:34 PM

Share

ವಿಜಯನಗರ: ಚಲಿಸುವ ಗೂಡ್ಸ್ ರೈಲಿಗೆ ಸಿಲುಕಿ ಓರ್ವ ಕುರಿಗಾಹಿ ಮತ್ತು 18 ಕುರಿಗಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದ ರೈಲ್ವೆ ಗೇಟ್ ಬಳಿ ಸಂಭವಿಸಿದೆ. ಚೌಟಗಿ ರಮೇಶ್ (24) ಮೃತಪಟ್ಟ ಕುರಿಗಾಹಿ. ಕೊಟ್ಟೂರು ತಾಲ್ಲೂಕಿನ ಹರಾಳು ಗ್ರಾಮದಿಂದ 18ಕ್ಕೂ ಹೆಚ್ಚು ಕುರಿಗಳನ್ನು ತಂದು ಮತ್ತಿಹಳ್ಳಿ ಕ್ರಾಸ್ ಬಳಿಯ ರೈಲು ಹಳಿಗಳನ್ನು ದಾಟಿಸಿ, ಮೇಯಿಸಲೇಂದು ಕುರಿಗಾಹಿ ಚೌಟಗಿ ರಮೇಶ್ ತೆರಳುತ್ತಿರುವಾಗ ರೈಲು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

ರೈಲು ಡಿಕ್ಕಿ ಹೊಡೆದ ರಭಸಕ್ಕೆ ಕುರಿಗಾಹಿ ಚೌಟಗಿ ರಮೇಶ ಅವರ ದೇಹ ತುಂಡು ತಂಡಾಗಿ ಅಂಗಾಂಗಗಳು ರೈಲು ಹಳಿ ಬಳಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಅಲ್ಲದೇ ಕುರಿಗಳು ಕೂಡ ಸ್ಥಳದಲ್ಲಿಯೇ ಮೃತಪಟ್ಟಿವೆ.

ಬೆಂಗಳೂರು: ಬೈಕ್‌ಗೆ ಟಿಪ್ಪರ್ ಡಿಕ್ಕಿ; ತಾಯಿ, ಮಗು ಸ್ಥಳದಲ್ಲೇ ಸಾವು ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದು ತಾಯಿ, ಮಗು ಸ್ಥಳದಲ್ಲೇ ಮೃತಪಟ್ಟ ಮನಕಲಕುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ನಡೆದಿದೆ. ತಾಯಿ ಶ್ರೀದೇವಿ(21) ಮತ್ತು ಒಂದು ವರ್ಷದ ಮಗು ದೀಕ್ಷಿತ ಮೃತ ದುರ್ದೈವಿಗಳು.

ಕೆ.ಆರ್. ಪುರಂನಿಂದ ತಮಿಳುನಾಡಿನ ಧರ್ಮಪುರಿಗೆ ಬುಲೆಟ್ನಲ್ಲಿ ತೆರಳುತ್ತಿದ್ದ ವೇಳೆ ಮಾರತ್ತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಟಿಪ್ಪರ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಬೈಕ್ನ ಹಿಂಬದಿ ಕುಳಿತಿದ್ದ ತಾಯಿ-ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಶಿವಕುಮಾರ್ಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಎಎಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ: ಆಯತಪ್ಪಿ ಬಿದ್ದ ಬೈಕ್ ಸವಾರ ಸಾವು ರಸ್ತೆಯಲ್ಲಿ ಬಿದ್ದಿದ್ದ ಗುಂಡಿಯಿಂದ ಆಯತಪ್ಪಿ ಬೈಕ್ ಸವಾರ ಕೆಳಗೆ ಬಿದ್ದಿದ್ದು ಬೈಕ್ ಬೀಳುತ್ತಿದ್ದಂತೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಕೂದಲೆಳೆ‌ ಅಂತರದಲ್ಲಿ ಬೈಕ್ ಸವಾರ ಪಾರಾದ ಘಟನೆ ಹಾಸನ ನಗರದ ಬಿ.ಎಂ.ರಸ್ತೆಯಲ್ಲಿ ನಡೆದಿದೆ. ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಪ್ರತಿನಿತ್ಯ ಸಾವಿರಾರು ವಾಹನಗಳು ಓಡಾಡುವ ಪ್ರಮುಖ ರಸ್ತೆಯಲ್ಲಿ ಬೃಹತ್ ಗುಂಡಿ ಬಿದ್ದಿದ್ದು ಗುಂಡಿ ಮುಚ್ಚದ ನಗರಸಭೆ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಗಾಂಜಾ ಸೇದಲು ಬೆಂಕಿ ಪೊಟ್ಟಣ ನೀಡದಿದ್ದಕ್ಕೆ ಹಲ್ಲೆ; ಕುರಿಗಾಹಿಗಳನ್ನು ಮನಬಂದಂತೆ ಥಳಿಸಿದ ಪುಂಡರು

ನೀರಿನ ಹೊಂಡದಲ್ಲಿ ಕಾಲು ಜಾರಿ ಬಿದ್ದಿದ್ದ ಕುರಿಗಾಹಿ ಬಾಲಕನ ಜೀವ ಉಳಿಸಿ ತಾನು ಬಲಿಯಾದ 16 ವರ್ಷದ ಬಾಲಕಿ

Published On - 12:14 pm, Mon, 25 October 21

Follow Us
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?