AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ಧರಾಮಯ್ಯ ಸಿಎಂ ಆಗೋ ತಿರುಕನ ಕನಸು ಕಾಣುತ್ತಿದ್ದಾರೆ: ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ

ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ​ ಅಡ್ರೆಸ್ ಇಲ್ಲದಂತಾಗಿದೆ. ಕರ್ನಾಟಕದಲ್ಲಿ ಅಡ್ರೆಸ್​​ ಹುಡುಕಲು ಕಾಂಗ್ರೆಸ್ ಪಾದಯಾತ್ರೆ ನಡೆಸಿದೆ. ಅಂಬೇಡ್ಕರ್​ ಹೆಸರು ಹೇಳುವ ಯೋಗ್ಯತೆ ಕಾಂಗ್ರೆಸ್​ಗಿಲ್ಲ.

ಸಿದ್ಧರಾಮಯ್ಯ ಸಿಎಂ ಆಗೋ ತಿರುಕನ ಕನಸು ಕಾಣುತ್ತಿದ್ದಾರೆ: ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ
ಮಾಜಿ ಸಿಎಂ ಯಡಿಯೂರಪ್ಪ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 13, 2022 | 3:07 PM

Share

ವಿಜಯನಗರ: ಸಿದ್ದರಾಮಯ್ಯ (Siddaramaiah) ಸಿಎಂ ಆಗಬೇಕೆಂದು ತಿರುಕನ ಕನಸು ಕಾಣುತ್ತಿದ್ದಾರೆ. ಆ ಕನಸು ನನಸಾಗಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕ ಯಡಿಯೂರಪ್ಪ (Yeddyurappa) ವಾಗ್ದಾಳಿ ಮಾಡಿದರು. ಹೂವಿನಹಡಗಲಿಯಲ್ಲಿ ಬಿಜೆಪಿ ಸಂಕಲ್ಪ ಯಾತ್ರೆ ವೇಳೆ ಅವರು ಮಾತನಾಡಿದರು. ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ​ ಅಡ್ರೆಸ್ ಇಲ್ಲದಂತಾಗಿದೆ. ಕರ್ನಾಟಕದಲ್ಲಿ ಅಡ್ರೆಸ್​​ ಹುಡುಕಲು ಕಾಂಗ್ರೆಸ್ ಪಾದಯಾತ್ರೆ ನಡೆಸಿದೆ. ಅಂಬೇಡ್ಕರ್​ ಹೆಸರು ಹೇಳುವ ಯೋಗ್ಯತೆ ಕಾಂಗ್ರೆಸ್​ಗಿಲ್ಲ. ಚುನಾವಣೆಯಲ್ಲಿ ಅಂಬೇಡ್ಕರ್​​ರನ್ನು 2 ಬಾರಿ ಸೋಲಿಸಿದರು. ಜಗಜೀವನ್​ ರಾಮ್​ರನ್ನು ಪ್ರಧಾನಿಯಾಗುವುದನ್ನ ತಡೆದರು. ಕಾಂಗ್ರೆಸ್​​​ನವರು ನೀಚರು. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಯಡಿಯೂರಪ್ಪ ಹೇಳಿದರು.

ಮೂರು ನಾಲ್ಕು ತಲೆ ಮಾರಿಗಾಗುವಷ್ಟು ಹಣ ಮಾಡಿದ್ದಾರೆಂದು ರಮೇಶ್ ಕುಮಾರ್ ಹೇಳಿದ್ದಾರೆ. ಇದಕ್ಕೆ ಯಾರು ವಿರೋಧ ( ಸೋನಿಯಾ, ರಾಹುಲ್, ಡಿಕೆಶಿ, ಸಿದ್ದರಾಮಯ್ಯ) ವ್ಯಕ್ತಿಪಡಿಸಿಲ್ಲ. ದೇಶವನ್ನು ಎಷ್ಟು ಲೂಟಿ ಮಾಡಿರಬಹುದು. ಅಧಿಕಾರಕ್ಕೆ ಬರೋ ಹಗಲುಗನಸು ಕಾಣೋ ಕೆಲಸ ಕಾಂಗ್ರೆಸ್​ನ್ನು ಸೋಲಿಸಿ. ಬಿಜೆಪಿ ಹಗರಣದ ಬಗ್ಗೆ ಮಾತನಾಡುತ್ತಿದ್ದಾರೆ. ಯುಪಿಎ ಸರ್ಕಾರದಲಯ ಎಷ್ಟು ಹಗರಣ ಮಾಡಿದಿರಿ. 12 ಲಕ್ಷ‌ ಕೋಟಿ‌ ಲೂಟಿ‌ಮಾಡಿದರು. ರಾಬರ್ಟ್ ವಾದ್ರಾ ಎಷ್ಟು ಲೂಟಿಮಾಡಿದ್ದಾರೆ? ನ್ಯಾಶನಲ್ ಹೆರಾಲ್ಡ್ ಹಗರಣಲ್ಲಿ ತಾಯಿ ಮಗ ( ರಾಹುಲ್ ಸೋನಿಯಾ) ವಿಚಾರಣೆ ನಡೆಯುತ್ತಿದೆ ಎಂದರು.

ಮೋದಿ ಜಗತ್ತು ಕಂಡ ಅಪ್ರತಿಮ ನಾಯಕ

ಕಳೆದ ಚುನಾವಣೆ ವೇಳೆ ಹಡಗಲಿ ಕ್ಷೇತ್ರದಲ್ಲಿ‌ ಬಂಡಾಯ ಅಭ್ಯರ್ಥಿಯಿಂದಾಗಿ ಸೋಲಾಯ್ತು. ಓದೋ ಗಂಗಾಪ್ಪ ( ಪಕ್ಷೇತರ ಬಂಡಾಯ) ಚಂದ್ರನಾಯ್ಕ ಬಿಜೆಪಿ ಸೇರಿ 70 ಸಾವಿರ ಮತ ಪಡೆದಿದ್ದರು. ಮೋದಿ ಅವರು ರಾಜ್ಯದಲ್ಲಿ ಕ್ಷೇತ್ರವಾರು ಸರ್ವೆ ಮಾಡಿಸುತ್ತಿದ್ದಾರೆ. ರಾಜ್ಯ ಬಿಜೆಪಿ ಕೂಡ ಸರ್ವೇ ಮಾಡುತ್ತಿದೆ. ಯಾರ ಪರವಾಗಿ ಒಲವು ಬರುತ್ತದೆ ಅವರನ್ನು ಗೆಲ್ಲಿಸಬೇಕು. ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದು ಇದು ಇತಿಹಾಸ. ಮೋದಿ ಜಗತ್ತು ಕಂಡ ಅಪ್ರತಿಮ ನಾಯಕ. ಎಂಟು ವರ್ಷ ವಿಶ್ರಾಂತಿ ಪಡೆಯದೇ ಕೆಲಸ ಮಾಡುತ್ತಿದ್ದಾರೆ. ಮೋದಿ ಮತ್ತು ಬೊಮ್ಮಯಿ ಸರ್ಕಾರದ ಸಾಧನೆ ಜನರಿಗೆ ತಿಳಿಸೋ ಕೆಲಸ ಮಾಡಿ. ಅಭ್ಯರ್ಥಿ ಯಾರೆಂದು ಪಕ್ಷ ಘೋಷಣೆ ಮಾಡುತ್ತದೆ ಅವರನ್ನು ಗೆಲ್ಲಿಸಿ ಎಂದು ಹೇಳಿದರು.

ತಾಂಡಾ ಅಭಿವೃದ್ಧಿಗೆ 100 ಕೋಟಿ ಅನುದಾನ ಒದಗಿಸಿದ್ದೇನೆ: ಸಿಎಂ ಬಸವರಾಜ ಬೊಮ್ಮಾಯಿ

ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಸಿಂಗಟಾಲೂರು ಏತ ನೀರಾವರಿ ಯೋಜನೆ ಪೂರ್ಣವಾಗಿದೆ. ನಾವು ಏತ ನೀರಾವರಿ ಯೋಜನೆ ಪೂರ್ಣಗೊಳಿಸಿದ್ದೇವೆ. ಅಭಿವೃದ್ಧಿಯಲ್ಲಿ ಎಲ್ಲರಿಗೂ ಪಾಲು ಸಿಗಬೇಕು. ತಾಂಡಾ ಅಭಿವೃದ್ಧಿಗೆ 100 ಕೋಟಿ ಅನುದಾನ ಒದಗಿಸಿದ್ದೇನೆ ಎಂದು ಹೇಳಿದರು. ಶಿಕ್ಷಣ, ಉದ್ಯೋಗ ಎಲ್ಲದರಲ್ಲೂ ಪಾಲು ಸಿಗಬೇಕು. ಏನೂ ಮಾಡದಿರುವವರು ಇಂದು ನಮ್ಮನ್ನ ಪ್ರಶ್ನೆ ಮಾಡುತ್ತಾರೆ. 5 ಲಕ್ಷ ಯುವಕರಿಗೆ ಉದ್ಯೋಗ ಕೊಡುವ ಕೆಲಸ ಆಗುತ್ತಿದೆ. ಸಾಮಾಜಿಕ ನ್ಯಾಯದ ಹೆಸರಲ್ಲಿ ಕೆಲವರು ಭಾಷಣ ಮಾಡುತ್ತಾರೆ. ಆದರೆ ನ್ಯಾಯ ಕೊಡುವ ಕೆಲಸವನ್ನು ಮಾತ್ರ ಮಾಡಲಿಲ್ಲ. ಜನರಿಂದ ಮತ ಹಾಕಿಸಿಕೊಂಡು ತಿರುಗಿ ನೋಡದೇ ಹೋದರು. ಈಗ ಮತ್ತೆ ಬರುತ್ತಿದ್ದಾರೆ, ನೀವೆಲ್ಲ ಪ್ರಶ್ನೆ ಮಾಡಬೇಕು ಎಂದರು.

ಬಳ್ಳಾರಿ ಮಣ್ಣಿನಲ್ಲಿ ದುರ್ಗಾದೇವಿಯ ಶಕ್ತಿ ಇದೆ. ಬಳ್ಳಾರಿ ಮಣ್ಣಿನ ಶಕ್ತಿ ಮುಂದಿನ ಚುನಾವಣೆಯಲ್ಲಿ ತೋರಿಸಿ. ಹೈಕಮಾಂಡ್​ಗೆ ಕಪ್ಪ ಕಾಣಿಕೆ ಸಲ್ಲಿಸುವ ಪದ್ಧತಿ ನಮ್ಮಲ್ಲಿಲ್ಲ. ಅಂತಹ ಸಂಪ್ರದಾಯಗಳು ಏನಿದ್ರು ಕಾಂಗ್ರೆಸ್​​ನಲ್ಲಿ ಮಾತ್ರ. ಕರ್ನಾಟಕವನ್ನು ಲೂಟಿ ಮಾಡಿ ಹೈಕಮಾಂಡ್​ಗೆ ಕಪ್ಪಕಾಣಿಕೆ ನೀಡಲಾಗುತ್ತಿದೆ ಎಂದು ಕಾಂಗ್ರೆಸ್​ ವಿರುದ್ಧ ಸಿಎಂ ಬೊಮ್ಮಾಯಿ ಹರಿಹಾಯ್ದರು. ಆ ಭಾಗ್ಯ ಕೊಟ್ಟೆ ಈ ಭಾಗ್ಯ ಕೊಟ್ಟೆ ಎಂದು ಹೇಳುತ್ತಾರೆ. ಇಷ್ಟೆಲ್ಲ ಭಾಗ್ಯ ಕೊಟ್ಟರೂ ಜನರ ಯಾಕೆ ಮನೆಗೆ ಕಳುಹಿಸಿದ್ರು? ಇಂದು ರಾಜ್ಯ ಏನಾದ್ರೂ ಹಿಂದುಳಿದಿದ್ರೆ ಅದಕ್ಕೆ ಕಾರಣ ನೀವು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!