AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಹೊಂಡದಲ್ಲಿದ್ದ ಮೊಸಳೆಯನ್ನು ಬಲೆ ಹಾಕಿ ಹಿಡಿದ ಭೂಪ! ಇಲ್ಲಿದೆ ವಿಡಿಯೋ

ಸಿರಗುಪ್ಪ(Siruguppa) ತಾಲೂಕಿನ 64 ಹಳೆಕೋಟೆ ಗ್ರಾಮದ ವ್ಯಕ್ತಿಯೋರ್ವನ ಕೃಷಿ ಹೊಂಡದಲ್ಲಿ ಮೊಸಳೆ(Crocodile) ಪ್ರತ್ಯಕ್ಷವಾಗಿದ್ದು, ಅದನ್ನು ಬಲೆ ಹಾಕಿ ಹಿಡಿದಿದ್ದಾನೆ. ಮೂರು ದಿನಗಳಿಂದ ಮೊಸಳೆಯೊಂದು ಎರಕಲ್ಲು ದಾರಿ ಪಕ್ಕದಲ್ಲಿನ ಕೃಷಿ ಹೊಂಡದಲ್ಲಿತ್ತು. ಇಂದು ಅರಣ್ಯಾಧಿಕಾರಿಗಳ ಸಹಾಯದೊಂದೊದಿಗೆ ಸೆರೆಹಿಡಿಯಲಾಗಿದೆ.

ವಿನಾಯಕ ಬಡಿಗೇರ್​
| Edited By: |

Updated on:Dec 12, 2023 | 7:44 PM

Share

ಬಳ್ಳಾರಿ, ಡಿ.12: ಜಿಲ್ಲೆಯ ಸಿರಗುಪ್ಪ(Siruguppa) ತಾಲೂಕಿನ 64 ಹಳೆಕೋಟೆ ಗ್ರಾಮದ ವ್ಯಕ್ತಿಯೋರ್ವನ ಕೃಷಿ ಹೊಂಡದಲ್ಲಿ ಮೊಸಳೆ(Crocodile) ಪ್ರತ್ಯಕ್ಷವಾಗಿದ್ದು, ಅದನ್ನು ಬಲೆ ಹಾಕಿ ಹಿಡಿದಿದ್ದಾನೆ. ಮೂರು ದಿನಗಳಿಂದ ಮೊಸಳೆಯೊಂದು  ಎರಕಲ್ಲು ದಾರಿ ಪಕ್ಕದಲ್ಲಿನ ಕೃಷಿ ಹೊಂಡದಲ್ಲಿತ್ತು. ಮೊಸಳೆ ಕಂಡು ಆತಂಕಗೊಂಡಿದ್ದ ಜನರು, ಅರಣ್ಯಧಿಕಾರಿಗಳಿಗೆ ವಿಷಯ ತಿಳಿಸಿದ್ದರು. ಸ್ಥಳಕ್ಕೆ ಬಂದ ಅಧಿಕಾರಿಗಳ ಸಹಕಾರದೊಂದಿಗೆ ವೇಶಗಾರ ಮಲ್ಲ ಎಂಬಾತ ಬಲೆಯ ಮೂಲಕ ಮೊಸಳೆ ಹಿಡಿದು ರಕ್ಷಣೆ ಮಾಡಿದ್ದಾರೆ.

ತುಂಗಭದ್ರಾ ನದಿಯಲ್ಲಿ ಮೊಸಳೆ ಬಿಟ್ಟ ಅರಣ್ಯಾಧಿಕಾರಿಗಳು

ಇನ್ನು ರಕ್ಷಣೆ ಮಾಡಿದ ಮೊಸಳೆಯನ್ನು ಅರಣ್ಯಾಧಿಕಾರಿಗಳ ಜೊತೆಗೆ ವೇಶಗಾರ ಮಲ್ಲ ಸೇರಿ ದಡೇಸೂಗುರಿನ ತುಂಗಭದ್ರಾ ನದಿಯಲ್ಲಿ ಬಿಟ್ಟಿದ್ದಾರೆ. ಈ ವೇಶಗಾರ ಮಲ್ಲ, ಮೊಸಳೆ ಹಿಡಿಯುವುದು ಇದೇ ಮೊದಲಲ್ಲ, ಈವರೆಗೂ 80 ಕ್ಕೂ ಹೆಚ್ಚು ಮೊಸಳೆಗಳನ್ನ ವೇಶಗಾರ ಮಲ್ಲ ಅವರು ಹಿಡಿದು ರಕ್ಷಣೆ ಮಾಡಿದ್ದಾರೆ. ಇದೀಗ ಆತನ ಸಾಹಸಕ್ಕೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನು ಮೊಸಳೆ ರಕ್ಷಣೆಯ ರೋಚಕ ವಿಡಿಯೋ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಇದನ್ನೂ ಓದಿ:ಸರಿಯಾದ ಸಮಯಕ್ಕೆ ಕರೆಂಟ್​​ ನೀಡದ್ದಕ್ಕೆ ಆಕ್ರೋಶ: ವಿದ್ಯುತ್ ವಿತರಣಾ ಘಟಕಕ್ಕೆ ಮೊಸಳೆ ಬಿಟ್ಟ ರೈತರು

ಕೆರೆಯಲ್ಲಿ ಬೃಹತ್ ಆಕಾರದ ಮೊಸಳೆ ಪತ್ತೆ; ಸೆರೆ ಹಿಡಿಯುವಂತೆ ಗ್ರಾಮಸ್ಥರ ಮನವಿ

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ತಾಮ್ರಗುಂಡಿ ಕೆರೆಯಲ್ಲಿ ಬೃಹತ್ ಆಕಾರದ ಮೊಸಳೆ ಪತ್ತೆಯಾಗಿದೆ. ಇನ್ನು ಮೊಸಳೆ ಕಂಡು ಗ್ರಾಮಸ್ಥರು ಭಯಭೀತರಾಗಿದ್ದು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಮೊಸಳೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ. ಕೆರೆಯ ಬಳಿ ಜಾನುವಾರು ಮೇಯಿಸಲು ಹೋಗುವುದರಿಂದ ಅಲ್ಲಿ ಯಾರು ಹೋಗದಂತೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 pm, Tue, 12 December 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ