AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ರಾಜ್ಯಮಟ್ಟದ ಬೃಹತ್ ST ಸಮಾವೇಶಕ್ಕೆ ಸಿಎಂ ಬೊಮ್ಮಾಯಿ ಆಗಮನ; ಬೊಮ್ಮಾಯಿ ಸರ್ಕಾರವನ್ನು ಹೊಗಳಿದ ಬಾಲಚಂದ್ರ ಜಾರಕಿಹೊಳಿ

SC/ST ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿರುವ ಸರ್ಕಾರ ಮೊದಲ ಬಾರಿಗೆ ರಾಜ್ಯ ಮಟ್ಟದ ಬೃಹತ್ ST ಸಮಾವೇಶ ಆಯೋಜನೆ ಮಾಡಿದೆ. ಬಳ್ಳಾರಿಯ ಬೆಳಗಲ್ ರಸ್ತೆಯ ಜಿ ಸ್ಕ್ವೇರ್ ಲೇಔಟ್ ನಲ್ಲಿ ಸಮಾವೇಶ ನಡೆಯುತ್ತಿದೆ.

ಬಳ್ಳಾರಿ: ರಾಜ್ಯಮಟ್ಟದ ಬೃಹತ್ ST ಸಮಾವೇಶಕ್ಕೆ ಸಿಎಂ ಬೊಮ್ಮಾಯಿ ಆಗಮನ; ಬೊಮ್ಮಾಯಿ ಸರ್ಕಾರವನ್ನು ಹೊಗಳಿದ ಬಾಲಚಂದ್ರ ಜಾರಕಿಹೊಳಿ
ರಾಜ್ಯಮಟ್ಟದ ಬೃಹತ್ ST ಸಮಾವೇಶ
TV9 Web
| Edited By: |

Updated on: Nov 20, 2022 | 1:06 PM

Share

ಬಳ್ಳಾರಿ: ಗಣಿ ನಾಡು ಬಳ್ಳಾರಿಯಲ್ಲಿ ಇಂದು (ನ.20) ರಾಜ್ಯಮಟ್ಟದ ಬೃಹತ್ STಸಮಾವೇಶ ನಡೆಯುತ್ತಿದೆ. SC/ST ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿರುವ ಸರ್ಕಾರ ನವಶಕ್ತಿ ಸಮಾವೇಶ ಆಯೋಜಿಸಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಸಿ‌ಎಂ ಬಸವರಾಜ ಬೊಮ್ಮಾಯಿ ಅವರಿಗೆ ಧಾರ್ಮಿಕ ಗ್ರಂಥ ನೀಡಿ ಬಿಜೆಪಿ ಕಾರ್ಯಕರ್ತರು ಸಮಾವೇಶಕ್ಕೆ ಸ್ವಾಗತಿಸಿದರು. ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್​, ಸಿ.ಟಿ.ರವಿ, ಸಚಿವರಾದ ಶ್ರೀರಾಮುಲು, ಕಾರಜೋಳ, ಶಾಸಕ ರಾಜುಗೌಡ, ಕರುಣಾಕರ ರೆಡ್ಡಿ, ಲಕ್ಷ್ಮಣ ಸವದಿ ಸೇರಿದಂತೆ ಹಲವರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.

ಎಸ್​​ಟಿ ಸಮಾವೇಶದಿಂದ ದೂರ ಉಳಿದ ರಮೇಶ್​ ಜಾರಕಿಹೊಳಿ

ರಮೇಶ್​ ಜಾರಕಿಹೊಳಿ ತಮ್ಮ ಸಮುದಾಯದ ಕಾರ್ಯಕ್ರಮಕ್ಕೂ ಗೈರಾಗಿದ್ದಾರೆ. ಮಂತ್ರಿ ಸ್ಥಾನ ಸಿಗದಿರುವುದಕ್ಕೆ ತೀವ್ರ ಬೇಸರಗೊಂಡಿರುವ ರಮೇಶ್ ಬಳ್ಳಾರಿ ಎಸ್​ಟಿ ಸಮಾವೇಶಕ್ಕೆ ಹಾಜರಾಗಿಲ್ಲ.

ಬಸವರಾಜ ಬೊಮ್ಮಾಯಿ ಸರ್ಕಾರ ದೊಡ್ಡ ಉಪಕಾರ ಮಾಡಿದೆ

ಇನ್ನು ಸಮಾವೇಶದಲ್ಲಿ ಭಾಷಣ ಮಾಡಿದ ಬಾಲಚಂದ್ರ ಜಾರಕಿಹೊಳಿ, ನಮ್ಮ ವಾಲ್ಮೀಕಿ ಸಮುದಾಯದ ಜನತೆಗೆ ವಂದನೆಗಳು. ಬಸವರಾಜ ಬೊಮ್ಮಾಯಿ ಸರ್ಕಾರ ನಮ್ಮ ಸಮುದಾಯಕ್ಕೆ ದೊಡ್ಡ ಉಪಕಾರ ಮಾಡಿದೆ. ನಾವೂ ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಬಲರಾಗಿರಬೇಕು. ನಾವೂ ಉಪಕಾರವನ್ನ ಏಪ್ರಿಲ್, ಮೇನಲ್ಲಿ ತೀರಿಸಬೇಕು. ನಮ್ಮ ಪಾರ್ಟಿ ಮೇಲೆ ನಿಮ್ಮ ಆಶೀರ್ವಾದ ಇರಬೇಕು ಅಂತಾ ಹೇಳಿ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಮಾತನ್ನ ಮುಗಿಸಿದರು.

ಮೀಸಲಾತಿ ಹೆಚ್ಚಿಸಿದ್ದಕ್ಕೆ ಕಾಂಗ್ರೆಸ್​ ಹೊಟ್ಟೆಕಿಚ್ಚು ಪಡುತ್ತಿದೆ

ಬಿಜೆಪಿ ಎಸ್​ಟಿ ಸಮಾವೇಶದಲ್ಲಿ ಸಿ.ಟಿ.ರವಿ ಮಾತನಾಡಿದ್ದು ಬಿಜೆಪಿ ಸರ್ಕಾರ ಇಚ್ಛಾ ಶಕ್ತಿಯಿಂದ ಎಸ್​​ಟಿ ಮೀಸಲು ಹೆಚ್ಚಿಸಿದೆ.ಎಸ್​ಟಿ ಮೀಸಲಾತಿಗಾಗಿ ಸಮುದಾಯದ ಸ್ವಾಮೀಜಿ ಹೋರಾಟ ಮಾಡಿದರು. ಎಸ್​​ಟಿ ಸಮುದಾಯದ ನಾಯಕರು ಒತ್ತಡ ಹಾಕಿದ್ರು. ಸರ್ಕಾರದ ಇಚ್ಛಾಶಕ್ತಿಯಿಂದ ಎಸ್​ಟಿ ಮೀಸಲಾತಿ ಹೆಚ್ಚಳ ಮಾಡಿದೆ. ಎಸ್​ಟಿ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಏರಿಸಲಾಗಿದೆ. ಮೀಸಲಾತಿ ಹೆಚ್ಚಿಸಿದ್ದಕ್ಕೆ ಕಾಂಗ್ರೆಸ್​ ಹೊಟ್ಟೆಕಿಚ್ಚು ಪಡುತ್ತಿದೆ. ಹೊಟ್ಟೆಕಿಚ್ಚಿಗೆ ಯಾವುದೇ ಔಷಧ ಇಲ್ಲ ಎಂದರು.

ಸಾರಿಗೆ ಸಚಿವ ಶ್ರೀರಾಮುಲು ಸಿಎಂ ಅಗಬೇಕು

ಇನ್ನು ಸಮಾವೇಶಕ್ಕೆ ಚಾಮರಾಜನಗರ, ಬೀದರ್, ಕಲಬುರಗಿ, ಕೊಪ್ಪಳ, ಗದಗ, ವಿಜಯನಗರ, ಚಿತ್ರದುರ್ಗ ಜಿಲ್ಲೆ ಸೇರಿದಂತೆ ಅನೇಕ ಕಡೆಯಿಂದ ಸಾವಿರಾರು ಬಸ್​ಗಳ ಮೂಲಕ ಹರಿದು ಬಂದ ಜನ ಬಿಜೆಪಿ ಹೈಕಮಾಂಡ್ ನಮ್ಮ ಸಮುದಾಯದ ನಾಯಕನನ್ನ ಸಿಎಂ ಮಾಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ಸಾರಿಗೆ ಸಚಿವ ಶ್ರೀರಾಮುಲು ಸಿಎಂ ಅಗಬೇಕು ಎಂಬ ಘೋಷಣೆಗಳು ಕೇಳಿಸಿದವು.

SC/ST ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿರುವ ಸರ್ಕಾರ ಮೊದಲ ಬಾರಿಗೆ ರಾಜ್ಯ ಮಟ್ಟದ ಬೃಹತ್ ST ಸಮಾವೇಶ ಆಯೋಜನೆ ಮಾಡಿದೆ. ಬಳ್ಳಾರಿಯ ಬೆಳಗಲ್ ರಸ್ತೆಯ ಜಿ ಸ್ಕ್ವೇರ್ ಲೇಔಟ್ ನಲ್ಲಿ ಸಮಾವೇಶ ನಡೆಯುತ್ತಿದೆ. 130 ಎಕರೆ ಪ್ರದೇಶದ ಲೇಔಟ್ ನಲ್ಲಿ ದೊಡ್ಡ ಪೆಂಡಾಲ್, ಮೂರು ಮುಖ್ಯ ವೇದಿಕೆ ನಿರ್ಮಾಣ ಮಾಡಲಾಗಿದೆ. ಸಮಾವೇಶಕ್ಕಾಗಿ ಬರುವ ಜನರಿಗೆ ಹಳ್ಳಿ ಹಳ್ಳಿಗಳಿಂದ 8 ಸಾವಿರ ಸಾರಿಗೆ ಬಸ್. 25 ಸಾವಿರ ಟ್ರಾಕ್ಸ್ ಗಳನ್ನ ವ್ಯವಸ್ಥೆ ಮಾಡಲಾಗಿದೆ. 300 ಊಟದ ಕೌಂಟರ್ ನಿರ್ಮಾಣ ಮಾಡಿದ್ದಾರೆ. ಸಮಾವೇಶಕ್ಕೆ ಬರುವ ಜನರಿಗೆ ಪಲಾವ್. ಮೊಸರನ್ನ ಗೋದಿಹುಗ್ಗಿ ವ್ಯವಸ್ಥೆ ಮಾಡಲಾಗಿದೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ