AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಗುಡಿಯಲ್ಲಿ ದೇವರ ಮೂರ್ತಿ ಕುರಿಸುವ ವಿಚಾರವಾಗಿ ಎರಡು ಸಮುದಾಯದ ನಡುವೆ ಕಲ್ಲು ತೂರಾಟ, ಪಿಎಸ್​ಐಗೆ ಗಾಯ

ಪವಾಡ ಪುರುಷ ಎರ್ರಿತಾತ ಸ್ವಾಮಿಯ ಮೂರ್ತಿ ಕೂರಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ಸಂಭವಿಸಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬಳ್ಳಾರಿ ಜಿಲ್ಲೆ ಕೊಳಗಲ್ ಗ್ರಾಮದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ನಿಯೋಜನೆ ಮಾಡಲಾಗಿದೆ.

ಗರ್ಭಗುಡಿಯಲ್ಲಿ ದೇವರ ಮೂರ್ತಿ ಕುರಿಸುವ ವಿಚಾರವಾಗಿ ಎರಡು ಸಮುದಾಯದ ನಡುವೆ ಕಲ್ಲು ತೂರಾಟ, ಪಿಎಸ್​ಐಗೆ ಗಾಯ
ಕಲ್ಲು ತೂರಾಟ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Edited By: |

Updated on:Apr 08, 2024 | 9:40 AM

Share

ಬಳ್ಳಾರಿ, ಏಪ್ರಿಲ್​ 08: ದೇವರ ಮೂರ್ತಿ ಕುರಿಸುವ ವಿಚಾರವಾಗಿ ಎರಡು ಸಮುದಾಯದ ನಡುವೆ ಶುರುವಾದ ವಾಗ್ವಾದ ವಿಕೋಪಕ್ಕೆ ತಿರುಗಿ, ಕಲ್ಲು ತೂರಾಟವಾಗಿರುವ ಘಟನೆ ಬಳ್ಳಾರಿ (Ballari) ತಾಲೂಕಿನ ಕೊಳಗಲ್ ಗ್ರಾಮದಲ್ಲಿ ನಡೆದಿದೆ. ಪವಾಡ ಪುರುಷ ಎರ್ರಿತಾತಾ ಸ್ವಾಮಿಯ (Chellagurki Shree Yerrithatha Swamy) ಮೂರ್ತಿ ಕೂರಿಸುವ ವಿಚಾರವಾಗಿ ಈ ಗಲಾಟೆ ನಡೆದಿದೆ. 15 ದಿನಗಳ ಹಿಂದೆ ಎರ್ರಿಸ್ವಾಮಿ ಮಠದಲ್ಲಿ ರಾತ್ರೋರಾತ್ರಿ ಮೂರ್ತಿ ಕುರಿಸಲಾಗಿತ್ತು. ಈ ಮೂರ್ತಿಯನ್ನು ತೆರವುಗೊಳಿಸುವಂತೆ ಇನ್ನೊಂದು ಸಮುದಾಯದವರು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ಮೂರ್ತಿ ತೆರವುಗೊಳಿಸಲು ಆದೇಶ ನೀಡಿತ್ತು. ಆದರೆ ಪವಾಡ ಪುರುಷನ ಮೂರ್ತಿಯನ್ನು ತೆರವುಗೊಳಿಸಲ್ಲ ಅಂತ ಮೊತ್ತೊಂದು ಸಮುದಾಯದವರು ಹಠ ಹಿಡಿದ್ದಾರೆ. ಇದರಿಂದ ಎರಡು ಸಮುದಾಯದ ಮಧ್ಯೆ ವಾಗ್ವಾದ ಸಂಭವಿಸಿದೆ. ವಾಗ್ವಾದ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟ ಸಂಭವಿಸಿದೆ. ಈ ವಿಚಾರ ತಿಳಿದು ಗ್ರಾಮಕ್ಕೆ ಪಿಎಸ್ಐ ಸಂತೋಷ್ ಡಬ್ಬಿನ್, ಸಿಪಿಐ ಸತೀಶ್ ಸೇರಿದಂತೆ ಇನ್ನಿತರ ಪೊಲೀಸ್​ ಸಿಬ್ಬಂದಿ ಬಂದಿದ್ದಾರೆ.

ಕಲ್ಲು ತೂರಾಟವನ್ನು ನಿಲ್ಲಿಸಲು ಮುಂದಾದಾಗ ಕಿಡಿಗೇಡಿಗಳು ಪೊಲೀಸರ ಮೇಲೂ ಕಲ್ಲು ಎಸೆದಿದ್ದಾರೆ. ಇದರಿಂದ ಪಿಎಸ್ಐ ಸಂತೋಷ್ ಡಬ್ಬಿನ್ ತಲೆಗೆ, ಸಿಪಿಐ ಸತೀಶ್ ಸೇರಿದಂತೆ ಮೂವರಿಗೆ ಗಾಯವಾಗಿದೆ. ಕೂಡಲೆ ಪಿಎಸ್​ಐ ಸಂತೋಷ್ ಅವರನ್ನು ಬಳ್ಳಾರಿ ಟ್ರಾಮಾ ಕೇಕ್​ಸೆಂಟರ್​ಗೆ ಕರೆದುಕೊಂಡು ಹೋಗಿ, ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ-ಟಿಎಂಸಿ ನಡುವೆ ಘರ್ಷಣೆ; ಕಲ್ಲು ತೂರಾಟ

ಘಟನಾ ಸ್ಥಳಕ್ಕೆ‌ ಎಸ್ಪಿ ಮತ್ತು‌ ಎಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡು ಗುಂಪಿನ ಕಡೆಯಿಂದ 30ಕ್ಕೂ ಹೆಚ್ಚ ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎರ್ರಿಸ್ವಾಮಿ ಮಠದ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಈ ಹಿಂದೆಯೂ ನಡೆದಿತ್ತು ಗಲಾಟೆ

ದೇವರ ಮೂರ್ತಿ ಕೂರಿಸುವ ವಿಚಾರವಾಗಿಯೇ ಎರಡು ಗುಂಪುಗಳ ಮಧ್ಯೆ ವಾಗ್ವಾದ ನಡೆದಿತ್ತು. ಈ ಸಂದರ್ಭದಲ್ಲೂ ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿತ್ತು. ದೇವಸ್ತಾನ ಕಟ್ಟುವ ವಿಚಾರದಲ್ಲಿ ಎರಡು ಗುಂಪುಗಳು ನ್ಯಾಯಾಲಯದ ಮೆಟ್ಟಿಲೇರಿದ್ದವು. ನ್ಯಾಯಾಲಯ ಸದ್ಯಕ್ಕೆ ದೇವಸ್ತಾನದ ಗೋಪುರ ಹಾಗೂ ಕಾಂಪೌಂಡ್ ಕಟ್ಟಲು ಅನುಮತಿ ನೀಡಿತ್ತು. ಆದರೆ ಗೋಪುರ ಕಟ್ಟಿ, ಗರ್ಭಗುಡಿಯೊಳಗೆ ಮೂರ್ತಿ ಸ್ಥಾಪಿಸಲಾಗಿತ್ತು. ಇದಕ್ಕೆ ಇನ್ನೊಂದು ಗುಂಪಿನಿಂದ ಪ್ರಬಲ ವಿರೋಧ ವ್ಯಕ್ತಪಡಿಸಿತ್ತು. ಇದರಿಂದ ಗಲಾಟೆ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:38 am, Mon, 8 April 24

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್