AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದಕರ ನಂಟು ಆರೋಪ: ಬಳ್ಳಾರಿಯ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಭಯೋತ್ಪಾದಕ ನಂಟು ಆರೋಪದ ಮೇಲೆ ಬಳ್ಳಾರಿಯ ಯುವಕ ಸೇರಿ ದೇಶದ 12 ಮಂದಿಯನ್ನು ಆಂಧ್ರ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮೂಲಭೂತವಾದಿ ಐಎಸ್‌ಐಎಸ್ ಸಿದ್ಧಾಂತವನ್ನು ಪ್ರಚಾರ ಮಾಡುತ್ತಿದ್ದ ಇವರು, ಯುವಕರನ್ನು ಜಿಹಾದ್‌ಗೆ ಪ್ರೇರೇಪಿಸುತ್ತಿದ್ದರು. 'ಅಲ್ ಮಾಲಿಕ್ ಇಸ್ಲಾಮಿಕ್ ಯೂತ್' ಎಂಬ ಗುಂಪು ರಚಿಸಿ ಕರ್ನಾಟಕ, ಆಂಧ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಕ್ರಿಯವಾಗಿತ್ತು ಎನ್ನಲಾಗಿದೆ.

ಭಯೋತ್ಪಾದಕರ ನಂಟು ಆರೋಪ: ಬಳ್ಳಾರಿಯ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ
ಬಂಧಿತ ಆರೋಪಿ ಅಬ್ದುಲ್ ಸಲಾಮ್Image Credit source: Tv9 Kannada
ವಿನಾಯಕ ಬಡಿಗೇರ್​
| Edited By: |

Updated on: Mar 26, 2026 | 12:30 PM

Share

ಬಳ್ಳಾರಿ, ಮಾರ್ಚ್​​ 26: ಮೂಲಭೂತವಾದದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಹಾಗೂ ಭಯೋತ್ಪಾದಕರ ನಂಟು ಶಂಕೆ ಹಿನ್ನೆಲೆ ಬಳ್ಳಾರಿ ಮೂಲದ ಓರ್ವ ಯುವಕ ಸೇರಿದಂತೆ ದೇಶದ ವಿವಿಧ ರಾಜ್ಯದ 12 ಮಂದಿಯನ್ನು ಆಂಧ್ರ ಪ್ರದೇಶದ ವಿಜಯವಾಡ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ನಗರದ ಅಬ್ದುಲ್ ಸಲಾಮ್ (36) ರಾಜ್ಯದಲ್ಲಿ ಅರೆಸ್ಟ್​​ ಆಗಿರುವ ಆರೋಪಿ. ಕರ್ನಾಟಕ ಸೇರಿದಂತೆ ಆಂಧ್ರ, ಬಿಹಾರ, ಮಹಾರಾಷ್ಟ್ರ ಒಳಗೊಂಡು ವಿವಿಧ ರಾಜ್ಯಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಸಲಾಮ್ ಕುರಿತ ಖಚಿತ ಮಾಹಿತಿ ಆಧರಿಸಿ ಬಳ್ಳಾರಿಗೆ ಬಂದಿದ್ದ ಆಂಧ್ರ ಪ್ರದೇಶ ಪೊಲೀಸರು, ಕೌಲ್ ಬಜಾರ್ ಪೊಲೀಸ್ ಠಾಣೆಯ ಸಿಬ್ಬಂದಿ ನೆರವಿನೊಂದಿಗೆ ಸಲಾಮ್ ಬಂಧಿಸಿದ್ದಾರೆ. ಪಂಚನಾಮೆ ಬಳಿಕ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸಿ ಹೆಚ್ಚಿನ ವಿಚಾರಣೆ ಅಗತ್ಯವಿರುವ ಹಿನ್ನೆಲೆ ಆಂಧ್ರ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಉಗ್ರವಾದ ಹರಡುವುದು ಮತ್ತು ಭಯೋತ್ಪದನಾ ಸಂಘಟನೆಗಳ ನಂಟು ಹೊಂದಿರುವವರ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಪೊಲೀಸರು, ಈ ಬಗ್ಗೆ ಮಾರ್ಚ್ 23ರಂದು ವಿಜಯವಾಡ ಟೌನ್ ಠಾಣೆಯಲ್ಲಿ FIR ದಾಖಲಿಸಿ ತನಿಖೆ ಆರಂಭಿಸಿದ್ದರು.

ಇದನ್ನೂ ಓದಿ: ಆಂಧ್ರದ ಮಾರ್ಕಪುರಂನಲ್ಲಿ ಹೊತ್ತಿ ಉರಿದ ಬಸ್; 10 ಜನ ಸಜೀವದಹನ

ಸರ್ಚ್ ವಾರೆಂಟ್ ಪಡೆದು ಕಾರ್ಯಾಚರಣೆಗಿಳಿದಿದ್ದ ಖಾಕಿ ಟೀಂ, ವಿಜಯವಾಡದ ವಿಂಚ್‌ಪೇಟ್​​ನಲ್ಲಿ ಪ್ರಮುಖ ಅರೋಪಿ ಮೊಹಮ್ಮದ್ ರೆಹಮತುಲ್ಲಾ ಷರೀಫ್ (23) ಎಂಬಾತನನ್ನು ಬಂಧಿಸಿದ್ದರು. ಈ ವೇಳೆ ಸಾಮಾಜಿಕ ಮಾಧ್ಯಮಗಳ ಮೂಲಕ ಸಿದ್ದಾಂತ ಮತ್ತು ಮೂಲಭೂತವಾದಿ ಐಎಸ್‌ಐಎಸ್ ಸಂಘಟನೆಗಳ ವಿಚಾರಧಾರೆ ಪ್ರಚಾರ ನಿರತರ ಬಗ್ಗೆ ಆತ ನೀಡಿದ್ದ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿ 12 ಮಂದಿಯನ್ನು ಬಂಧಿಸಲಾಗಿದೆ.

ತನಿಖೆಯಲ್ಲಿ ತಿಳಿದುಬಂದಂತೆ, ಅಲ್ ಮಾಲಿಕ್ ಇಸ್ಲಾಮಿಕ್ ಯೂತ್ ಎಂಬ ಗುಂಪನ್ನು ರಚಿಸಿ ಯುವಕರನ್ನ ಜಿಹಾದ್‌ಗೆ ಪ್ರೇರೇಪಿಸುವುದಕ್ಕೂ ಪ್ರಯತ್ನಿಸುತ್ತಿದ್ದರು. ಸಾಮಾಜಿಕ ಜಾಲತಾಣಗಳ ಮೂಲಕ ಅತಿರೇಕದ ವಿಷಯಗಳನ್ನು ಹಂಚಿಕೊಂಡು ತಮ್ಮ ಜಾಲವನ್ನು ವಿಸ್ತರಿಸಿದ್ದರು. ಈ ಗುಂಪು ಬಿಹಾರ, ದೆಹಲಿ, ಪಶ್ಚಿಮ ಬಂಗಾಳ, ರಾಜಸ್ಥಾನ, ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವಿವಿಧ ವ್ಯಕ್ತಿಗಳೊಂದಿಗೆ ಸಂಪರ್ಕ ಸಾಧಿಸಿ ಕಾರ್ಯಚಟುವಟಿಕೆ ನಡೆಸುತ್ತಿತ್ತು ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ