AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲುವೆಗೆ ಆಟೋ ಪಲ್ಟಿಯಾಗಿ ಮೂವರು ಕಾರ್ಮಿಕರ ಸಾವು, ಹಲವರಿಗೆ ಗಾಯ

ಕೊಳಗಲ್ ಗ್ರಾಮದಿಂದ‌‌ ಆಟೋದಲ್ಲಿ 9 ಕಾರ್ಮಿಕರು ಕೂಲಿ‌ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ತುಂಗಭದ್ರಾ ಕಾಲುವೆಗೆ ಆಟೋ ಪಲ್ಟಿಯಾಗಿದೆ.

ಕಾಲುವೆಗೆ ಆಟೋ ಪಲ್ಟಿಯಾಗಿ ಮೂವರು ಕಾರ್ಮಿಕರ ಸಾವು, ಹಲವರಿಗೆ ಗಾಯ
ಕಾಲುವೆಗೆ ಆಟೋ ಪಲ್ಟಿ
TV9 Web
| Edited By: ಆಯೇಷಾ ಬಾನು|

Updated on:Sep 14, 2022 | 1:26 PM

Share

ಬಳ್ಳಾರಿ: ಕಾಲುವೆಗೆ ಆಟೋ ಪಲ್ಟಿಯಾಗಿ ಮೂವರು ಕೂಲಿ ಕಾರ್ಮಿಕರು ಮೃತಪಟ್ಟ ಘಟನೆ ಬಳ್ಳಾರಿ ತಾಲೂಕಿನ ಕೊಳಗಲ್​ ಬಳಿ ನಡೆದಿದೆ. ಕೊಳಗಲ್ ಗ್ರಾಮದಿಂದ‌‌ ಆಟೋದಲ್ಲಿ 9 ಕಾರ್ಮಿಕರು ಕೂಲಿ‌ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ತುಂಗಭದ್ರಾ ಕಾಲುವೆಗೆ ಆಟೋ ಪಲ್ಟಿಯಾಗಿದೆ.

ಘಟನೆ ಸಂಬಂಧ ನಿಂಗಮ್ಮ, ದುರ್ಗಮ್ಮ, ಪುಷ್ಪಾವತಿ ಎಂಬುವವರ ಮೃತದೇಹಗಳು ಪತ್ತೆಯಾಗಿದ್ದು ಹೇಮಾವತಿ, ಶಿಲ್ಪಾ, ಮಹೇಶ್, ಭೀಮಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಟೋ ಚಾಲಕನ ನಿರ್ಲಕ್ಷ್ಯವೇ ಅಪಘಾತ ಸಂಭವಿಸಲು ಕಾರಣ ಎಂದು ಕೆಲವರು ಆರೋಪಿಸಿದ್ದಾರೆ. ಕಲ್ಲು ತಪ್ಪಿಸಲು ಹೋಗಿ ಕಾಲುವೆಗೆ ಆಟೋ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಬಳ್ಳಾರಿ ಗ್ರಾಮಾಂತರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾರು ಪಲ್ಟಿಯಾಗಿ ಮೂವರು ಸ್ಥಳದಲ್ಲೇ ದುರ್ಮರಣ

ಹುಬ್ಬಳ್ಳಿ ತಾಲೂಕಿನ ವರೂರು ಬಳಿ ಭೀಕರ ಅಪಘಾತ ಸಂಭವಿಸಿದೆ. ಕಾರು ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಾರುಖ್, ಸೋಹೆಲ್, ಸುಶೀಲಾ ಮೃತ ದುರ್ದೈವಿಗಳು. ಮೃತ ಶಾರುಖ್, ಸೋಹೆಲ್ ದಾವಣಗೆರೆ ಮೂಲದವರು. ದಾವಣಗೆರೆಯಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ಕಾರು ಅತಿವೇಗವಾಗಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುಂಡು ಹಾರಿಸಿಕೊಂಡು ದುರ್ಗಾ ಗ್ರಾ.ಪಂ ಸದಸ್ಯ ಆತ್ಮಹತ್ಯೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ದುರ್ಗಾ ಗ್ರಾ.ಪಂ ಸದಸ್ಯ ಭಾಸ್ಕರ್ ಹೆಗ್ಡೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಭಾಸ್ಕರ್ ಹೆಗ್ಡೆ, ಸಾವಯವ ಕೃಷಿಕರಾಗಿಯೂ ಹೆಸರು ಮಾಡಿದ್ದರು. ಆರ್ಥಿಕ ಸಮಸ್ಯೆಯೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.

Published On - 11:09 am, Wed, 14 September 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ