AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಹಾಸ್ಟೆಲ್ ಬಿಟ್ಟು ಹೋಗಿದ್ದ 3 ವಿದ್ಯಾರ್ಥಿಗಳು ನಡುರಾತ್ರಿ ಬೆಂಗಳೂರು ಬಸ್​​ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಸಾವು

ಮಧ್ಯರಾತ್ರಿ 2 ಗಂಟೆ ಸುಮಾರಿಗೆ ರಸ್ತೆ ಕ್ರಾಸ್ ಮಾಡುವ ವೇಳೆ ಬೆಂಗಳೂರಿನಿಂದ ಜೇವರ್ಗಿಗೆ ಹೊರಟಿದ್ದ ಸಾರಿಗೆ ಬಸ್​ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಳ್ಳಾರಿ: ಹಾಸ್ಟೆಲ್ ಬಿಟ್ಟು ಹೋಗಿದ್ದ 3 ವಿದ್ಯಾರ್ಥಿಗಳು ನಡುರಾತ್ರಿ ಬೆಂಗಳೂರು ಬಸ್​​ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 19, 2022 | 11:06 AM

Share

ಬಳ್ಳಾರಿ: ಸಾರಿಗೆ ಬಸ್​ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು(Students) ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಳಾರಿ ತಾಲೂಕಿನ ಹಲಕುಂದಿ ಬಳಿ ತಡರಾತ್ರಿ ಸಂಭವಿಸಿದೆ. ಎಮ್ಮಿಗನೂರಿನ ಕನಕರಾಜು(19), ಮುರುಡಿ ಗ್ರಾಮದ ಶಂಕರ(18), ಸಂಡೂರು ತಾಲೂಕಿನ ನಾಗೇನಹಳ್ಳಿಯ ಹೊನ್ನೂರ(22) ಮೃತ ದುರ್ದೈವಿಗಳು.

ಮಧ್ಯರಾತ್ರಿ 2 ಗಂಟೆ ಸುಮಾರಿಗೆ ರಸ್ತೆ ಕ್ರಾಸ್ ಮಾಡುವ ವೇಳೆ ಬೆಂಗಳೂರಿನಿಂದ ಜೇವರ್ಗಿಗೆ ಹೊರಟಿದ್ದ ಸಾರಿಗೆ ಬಸ್​ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಎಸ್​​​ಸಿ, ಎಸ್​​ಟಿ ಹಾಸ್ಟಲ್ ವಿದ್ಯಾರ್ಥಿಗಳು. ಇವರು 2 ದಿನದ ಹಿಂದೆ ಹಾಸ್ಟಲ್​ ಬಿಟ್ಟು ಹೋಗಿದ್ದರು. ಘಟನೆ ಸಂಬಂಧ ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿಗಳು ಮಧ್ಯರಾತ್ರಿ ಹಲಕುಂದಿ ಬಳಿ ಯಾಕೆ ಹೋಗಿದ್ದರು ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಚುರುಕುಗೊಂಡ ಡಬಲ್ ಮರ್ಡರ್​ ಪ್ರಕರಣದ ತನಿಖೆ; ಆರೋಪಿಗಳ ಬಂಧನಕ್ಕೆ ವಿಶೇಷ ತಂಡಗಳ ರಚನೆ

ಟಾಟಾ ಏಸ್​ಗೆ ಬೈಕ್ ಡಿಕ್ಕಿ ಸವಾರ ಗಂಭಿರ ಗಾಯ

ರಾಮನಗರ ತಾಲೂಕಿನ ಮಾದಾಪುರ ಗ್ರಾಮದ ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಫಘಾತ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿಗೆ ತೆರಳುವಾಗ ಟಾಟಾ ಏಸ್​ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಡಿಕ್ಕಿ ರಭಸಕ್ಕೆ ಬೈಕ್ ಹೊತ್ತಿ ಉರಿದಿದೆ. ಗಾಯಾಳು ಬೈಕ್ ಸವಾರ ರಾಮನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ ಬೈಕ್​ಗೆ ಹೊತ್ತಿಕೊಂಡಿದ್ದ ಬೆಂಕಿ ನಂದಿಸಿದ್ದಾರೆ. ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗದು ಚಿನ್ನ ಕದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಚಿತ್ರದುರ್ಗ ಪೊಲೀಸ್

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ಠಾಣೆ ಪೊಲೀಸರು ಇಬ್ಬರು ಕಳ್ಳರನ್ನು ಬಂಧಿಸಿದ್ದಾರೆ. ಹೊಸದುರ್ಗ ತಾಲೂಕಿನ ಕನ್ನಾಗುಂದಿ ಗ್ರಾಮದ ಈರಪ್ಪ, ಚಿಕ್ಕಮಗಳೂರು ಮೂಲದ ಕಿರಣ್ ಬಂಧಿತ ಆರೋಪಿಗಳು. ಬಂಧಿತರಿಂದ 20 ಗ್ರಾಂ ಚಿನ್ನ, 25 ಸಾವಿರ ನಗದು ಜಪ್ತಿ ಮಾಡಲಾಗಿದೆ. ಈ ಆರೋಪಿಗಳು ಹೊಸದುರ್ಗ ಸೇರಿ ಹಲವೆಡೆ ಮನೆಬೀಗ ಮುರಿದು ಕಳ್ಳತನ ಮಾಡಿದ್ದರು. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:11 am, Mon, 19 December 22

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!