AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಚ್ಚಿಬಿದ್ದ ಬಳ್ಳಾರಿ: ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತನ ಬರ್ಬರ ಕೊಲೆ

ಬಳ್ಳಾರಿಯಲ್ಲಿ ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತ ನಬಿ ರಸೂಲ್ ರಿಸೆಪ್ಷನ್ ಮುಗಿದ ಕೆಲವೇ ಗಂಟೆಗಳಲ್ಲಿ ಬರ್ಬರವಾಗಿ ಕೊಲೆಯಾಗಿದ್ದಾರೆ. ರಾತ್ರಿ 11.30ರ ಸುಮಾರಿಗೆ ಸ್ನೇಹಿತ ಕರೆದ ಅಂತಾ ರಸೂಲ್​​ ಹೊರಹೋಗಿದ್ದರು. ಆದರೆ ಅವರು ರಾತ್ರಿ 2 ಗಂಟೆ ಆದ್ರೂ ಬಂದಿರಲಿಲ್ಲ. ಹೀಗಾಗಿ ಮನೆ ಸುತ್ತ ಪೋಷಕರು ಮತ್ತು ಸಂಬಂಧಿಕರು ಹುಡುಕಾಡಿದಾಗ ಮನೆಯಿಂದ 700 ಮೀಟರ್ ದೂರದಲ್ಲಿ ರಸೂಲ್ ಶವ ಪತ್ತೆಯಾಗಿದೆ.

ಬೆಚ್ಚಿಬಿದ್ದ ಬಳ್ಳಾರಿ: ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತನ ಬರ್ಬರ ಕೊಲೆ
ನವ ವಿವಾಹಿತನ ಕೊಲೆImage Credit source: tv9 Kannada
ವಿನಾಯಕ ಬಡಿಗೇರ್​
| Edited By: |

Updated on:Jul 17, 2026 | 12:10 PM

Share

ಮುಖ್ಯಾಂಶಗಳು

  • ಪ್ರೀತಿಸಿ ಮದುವೆ ಆಗಿದ್ದ ನವವಿವಾಹಿತನ ಬರ್ಬರ ಕೊಲೆ
  • ಬಳ್ಳಾರಿ ನಗರದ ಬಟ್ಟಿ ಏರಿಯಾದಲ್ಲಿ ನಿನ್ನೆ ನಡೆದ ಘಟನೆ
  • ರಿಸೆಪ್ಷನ್ ಮುಗಿದ ಕೆಲವೇ ಹೊತ್ತಿನಲ್ಲಿ ಹೆಣವಾದ ಯುವಕ

ಬಳ್ಳಾರಿ, ಜುಲೈ 17: ಪ್ರೀತಿಸಿ ಮದುವೆ ಆಗಿದ್ದ ನವವಿವಾಹಿತನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಳ್ಳಾರಿ ನಗರದ ಬಟ್ಟಿ ಏರಿಯಾದಲ್ಲಿ ನಿನ್ನೆ (ಜುಲೈ 16) ರಾತ್ರಿ ನಡೆದಿದೆ. ನಬಿ ರಸೂಲ್​​​ ಮೃತ ವ್ಯಕ್ತಿಯಾಗಿದ್ದು, ದುರ್ದೈವ ಅಂದರೆ ಮದುವೆಯ ರಿಸೆಪ್ಷನ್ ಕಾರ್ಯಕ್ರಮ ಮುಗಿದ ಕೆಲವೇ ಹೊತ್ತಿನಲ್ಲಿ ಇವರ ಉಸಿರು ನಿಂತಿದೆ. ರಾತ್ರಿ 11 ಗಂಟೆಗೆ ಮನೆಯಿಂದ ಹೊರಹೋಗಿದ್ದ ರಸೂಲ್​​​​ ಶವವಾಗಿ ಪತ್ತೆಯಾಗಿದ್ದಾರೆ.

ನಬಿ ರಸೂಲ್​​​​​ ವಿಚ್ಛೇದಿತ ಮಹಿಳೆಯೋರ್ವಳನ್ನು ಪ್ರೀತಿಸುತ್ತಿದ್ದು, 15 ದಿನಗಳ ಹಿಂದೆ ಆಕೆಯನ್ನು ಕರೆದೊಯ್ದಿದ್ದರು. ಕೆಲವು ದಿನಗಳ ಬಳಿಕ ಇಬ್ಬರು ಮನೆಗೆ ವಾಪಸ್ ಆಗಿದ್ದರು. ಈ ವೇಳೆ ರಸೂಲ್​​ ಸಂಬಂಧಿಕರು ಒಪ್ಪಿ ಇವರ ಮದುವೆ ಮಾಡಿಸಿದ್ದರು. ನಿನ್ನೆ ಮನೆಯಲ್ಲಿಯೇ ರಸೂಲ್​ ಮದುವೆ ನಡೆದಿತ್ತು. ಸಂಭ್ರಮದಿಂದ ಮದುವೆ ಮತ್ತು ರಿಸೆಪ್ಷನ್ ಕಾರ್ಯಕ್ರಮ ನಡೆದ ಕೆಲ ಸಮಯದ ಬಳಿಕ ಅಂದರೆ, ರಾತ್ರಿ 11.30ರ ಸುಮಾರಿಗೆ ಸ್ನೇಹಿತ ಕರೆದ ಅಂತಾ ರಸೂಲ್​​ ಹೊರಹೋಗಿದ್ದರು. ಆದರೆ ಅವರು ರಾತ್ರಿ 2 ಗಂಟೆ ಆದ್ರೂ ಬಂದಿರಲಿಲ್ಲ. ಹೀಗಾಗಿ ಮನೆ ಸುತ್ತ ಪೋಷಕರು ಮತ್ತು ಸಂಬಂಧಿಕರು ಹುಡುಕಾಡಿದಾಗ ಮನೆಯಿಂದ 700 ಮೀಟರ್ ದೂರದಲ್ಲಿ ರಸೂಲ್ ಶವ ಪತ್ತೆಯಾಗಿದೆ.

ಇದನ್ನೂ ಓದಿ: ಬಿ.ಸಿ.ರೋಡ್​ ಬಸ್​ ನಿಲ್ದಾಣದಲ್ಲಿ ತಲ್ವಾರ್​ನಿಂದ ಯುವತಿಯ ಹತ್ಯೆ! ಮಗಳನ್ನು ಕೊಂದು ತಂದೆಗೆ ಕರೆ ಮಾಡಿದ ಪಾಗಲ್ ಪ್ರೇಮಿ ಪೊಲೀಸರ ವಶ

ಮಹಿಳೆಯ ಪೋಷಕರಿಂದ ಈ ಮದುವೆಗೆ ವಿರೋಧವಿತ್ತು, ಆಕೆಯ ಸಂಬಂಧಿಕರು ಈ‌ ಹಿಂದೆ ರಸೂಲ್‌ಗೆ ವಾರ್ನಿಂಗ್ ಕೂಡ ಕೊಟ್ಟಿದ್ದರು ಎಂಬ ವಿಚಾರವೂ ಬಯಲಾಗಿದೆ. ಹೀಗಾಗಿ ವಿಚ್ಛೇದಿತ ಮಹಿಳೆಯನ್ನ ಮದುವೆಯಾಗಿದ್ದೇ ಕೊಲೆಗೆ ಕಾರಣವಾಗಿರಬುದೆಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಎಸ್​​​ಪಿ ಸುಮನ್.ಡಿ ಪನ್ನೇಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೌಲ್​ ಬಜಾರ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:49 am, Fri, 17 July 26

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ