AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಚ್ಚಿಬಿದ್ದ ಬಳ್ಳಾರಿ: ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತನ ಬರ್ಬರ ಕೊಲೆ

ಬಳ್ಳಾರಿಯಲ್ಲಿ ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತ ನಬಿ ರಸೂಲ್ ರಿಸೆಪ್ಷನ್ ಮುಗಿದ ಕೆಲವೇ ಗಂಟೆಗಳಲ್ಲಿ ಬರ್ಬರವಾಗಿ ಕೊಲೆಯಾಗಿದ್ದಾರೆ. ರಾತ್ರಿ 11.30ರ ಸುಮಾರಿಗೆ ಸ್ನೇಹಿತ ಕರೆದ ಅಂತಾ ರಸೂಲ್​​ ಹೊರಹೋಗಿದ್ದರು. ಆದರೆ ಅವರು ರಾತ್ರಿ 2 ಗಂಟೆ ಆದ್ರೂ ಬಂದಿರಲಿಲ್ಲ. ಹೀಗಾಗಿ ಮನೆ ಸುತ್ತ ಪೋಷಕರು ಮತ್ತು ಸಂಬಂಧಿಕರು ಹುಡುಕಾಡಿದಾಗ ಮನೆಯಿಂದ 700 ಮೀಟರ್ ದೂರದಲ್ಲಿ ರಸೂಲ್ ಶವ ಪತ್ತೆಯಾಗಿದೆ.

ಬೆಚ್ಚಿಬಿದ್ದ ಬಳ್ಳಾರಿ: ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತನ ಬರ್ಬರ ಕೊಲೆ
ನವ ವಿವಾಹಿತನ ಕೊಲೆImage Credit source: tv9 Kannada
ವಿನಾಯಕ ಬಡಿಗೇರ್​
| Edited By: |

Updated on:Jul 17, 2026 | 12:10 PM

Share

ಮುಖ್ಯಾಂಶಗಳು

  • ಪ್ರೀತಿಸಿ ಮದುವೆ ಆಗಿದ್ದ ನವವಿವಾಹಿತನ ಬರ್ಬರ ಕೊಲೆ
  • ಬಳ್ಳಾರಿ ನಗರದ ಬಟ್ಟಿ ಏರಿಯಾದಲ್ಲಿ ನಿನ್ನೆ ನಡೆದ ಘಟನೆ
  • ರಿಸೆಪ್ಷನ್ ಮುಗಿದ ಕೆಲವೇ ಹೊತ್ತಿನಲ್ಲಿ ಹೆಣವಾದ ಯುವಕ

ಬಳ್ಳಾರಿ, ಜುಲೈ 17: ಪ್ರೀತಿಸಿ ಮದುವೆ ಆಗಿದ್ದ ನವವಿವಾಹಿತನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಳ್ಳಾರಿ ನಗರದ ಬಟ್ಟಿ ಏರಿಯಾದಲ್ಲಿ ನಿನ್ನೆ (ಜುಲೈ 16) ರಾತ್ರಿ ನಡೆದಿದೆ. ನಬಿ ರಸೂಲ್​​​ ಮೃತ ವ್ಯಕ್ತಿಯಾಗಿದ್ದು, ದುರ್ದೈವ ಅಂದರೆ ಮದುವೆಯ ರಿಸೆಪ್ಷನ್ ಕಾರ್ಯಕ್ರಮ ಮುಗಿದ ಕೆಲವೇ ಹೊತ್ತಿನಲ್ಲಿ ಇವರ ಉಸಿರು ನಿಂತಿದೆ. ರಾತ್ರಿ 11 ಗಂಟೆಗೆ ಮನೆಯಿಂದ ಹೊರಹೋಗಿದ್ದ ರಸೂಲ್​​​​ ಶವವಾಗಿ ಪತ್ತೆಯಾಗಿದ್ದಾರೆ.

ನಬಿ ರಸೂಲ್​​​​​ ವಿಚ್ಛೇದಿತ ಮಹಿಳೆಯೋರ್ವಳನ್ನು ಪ್ರೀತಿಸುತ್ತಿದ್ದು, 15 ದಿನಗಳ ಹಿಂದೆ ಆಕೆಯನ್ನು ಕರೆದೊಯ್ದಿದ್ದರು. ಕೆಲವು ದಿನಗಳ ಬಳಿಕ ಇಬ್ಬರು ಮನೆಗೆ ವಾಪಸ್ ಆಗಿದ್ದರು. ಈ ವೇಳೆ ರಸೂಲ್​​ ಸಂಬಂಧಿಕರು ಒಪ್ಪಿ ಇವರ ಮದುವೆ ಮಾಡಿಸಿದ್ದರು. ನಿನ್ನೆ ಮನೆಯಲ್ಲಿಯೇ ರಸೂಲ್​ ಮದುವೆ ನಡೆದಿತ್ತು. ಸಂಭ್ರಮದಿಂದ ಮದುವೆ ಮತ್ತು ರಿಸೆಪ್ಷನ್ ಕಾರ್ಯಕ್ರಮ ನಡೆದ ಕೆಲ ಸಮಯದ ಬಳಿಕ ಅಂದರೆ, ರಾತ್ರಿ 11.30ರ ಸುಮಾರಿಗೆ ಸ್ನೇಹಿತ ಕರೆದ ಅಂತಾ ರಸೂಲ್​​ ಹೊರಹೋಗಿದ್ದರು. ಆದರೆ ಅವರು ರಾತ್ರಿ 2 ಗಂಟೆ ಆದ್ರೂ ಬಂದಿರಲಿಲ್ಲ. ಹೀಗಾಗಿ ಮನೆ ಸುತ್ತ ಪೋಷಕರು ಮತ್ತು ಸಂಬಂಧಿಕರು ಹುಡುಕಾಡಿದಾಗ ಮನೆಯಿಂದ 700 ಮೀಟರ್ ದೂರದಲ್ಲಿ ರಸೂಲ್ ಶವ ಪತ್ತೆಯಾಗಿದೆ.

ಇದನ್ನೂ ಓದಿ: ಬಿ.ಸಿ.ರೋಡ್​ ಬಸ್​ ನಿಲ್ದಾಣದಲ್ಲಿ ತಲ್ವಾರ್​ನಿಂದ ಯುವತಿಯ ಹತ್ಯೆ! ಮಗಳನ್ನು ಕೊಂದು ತಂದೆಗೆ ಕರೆ ಮಾಡಿದ ಪಾಗಲ್ ಪ್ರೇಮಿ ಪೊಲೀಸರ ವಶ

ಮಹಿಳೆಯ ಪೋಷಕರಿಂದ ಈ ಮದುವೆಗೆ ವಿರೋಧವಿತ್ತು, ಆಕೆಯ ಸಂಬಂಧಿಕರು ಈ‌ ಹಿಂದೆ ರಸೂಲ್‌ಗೆ ವಾರ್ನಿಂಗ್ ಕೂಡ ಕೊಟ್ಟಿದ್ದರು ಎಂಬ ವಿಚಾರವೂ ಬಯಲಾಗಿದೆ. ಹೀಗಾಗಿ ವಿಚ್ಛೇದಿತ ಮಹಿಳೆಯನ್ನ ಮದುವೆಯಾಗಿದ್ದೇ ಕೊಲೆಗೆ ಕಾರಣವಾಗಿರಬುದೆಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಎಸ್​​​ಪಿ ಸುಮನ್.ಡಿ ಪನ್ನೇಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೌಲ್​ ಬಜಾರ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:49 am, Fri, 17 July 26

Follow Us