AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್ ಕರ್ಪ್ಯೂನಿಂದ ವ್ಯಾಪಾರ ವಿಲ್ಲದೆ ಅಜ್ಜಿಯ ಪರದಾಟ; ಟಿವಿ9 ವರದಿ ಕಂಡು ಸಹಾಯಕ್ಕೆ ಮುಂದಾದ ಬಳ್ಳಾರಿ ನಿವಾಸಿ

ಬಳ್ಳಾರಿ ಬಸ್ ‌ನಿಲ್ದಾಣದ ಮುಂಭಾಗ ಹಣ್ಣಿನ ವ್ಯಾಪಾರ ಮಾಡುತ್ತಿರುವ ಸಂಧ್ಯಾಬಾಯಿ‌, ಮುಂಜಾನೆ ಇಂದ ಕೂತರು ವ್ಯಾಪಾರ ಆಗಿಲ್ಲ ಎಂದು ಟಿವಿ9 ಮುಂದೆ ಅಳಲು ತೋಡಿಕೊಂಡಿದ್ದರು. ಇವರ ನೋವನ್ನು ಆಲಿಸಿದೆ ತಾಜುದ್ದೀನ್​ 15 ಕೆ.ಜಿ ಅಕ್ಕಿ, 2 ಕೆ.ಜಿ.ತೊಗರಿಬೇಳೆ, ಒಳ್ಳೆಎಣ್ಣೆ, ಸಕ್ಕರೆ ಸೇರಿ ಒಂದು ತಿಂಗಳಿಗೆ ಬೇಕಾಗಿರುವ ರೇಷನ್ ನೀಡಿದ್ದಾರೆ.

ವೀಕೆಂಡ್ ಕರ್ಪ್ಯೂನಿಂದ ವ್ಯಾಪಾರ ವಿಲ್ಲದೆ ಅಜ್ಜಿಯ ಪರದಾಟ; ಟಿವಿ9 ವರದಿ ಕಂಡು ಸಹಾಯಕ್ಕೆ ಮುಂದಾದ ಬಳ್ಳಾರಿ ನಿವಾಸಿ
ಸಂಧ್ಯಾಬಾಯಿ
TV9 Web
| Edited By: |

Updated on:Jan 15, 2022 | 1:39 PM

Share

ಬಳ್ಳಾರಿ: ಕೊರೊನಾ ಮೂರನೇ ಅಲೆ ಮತ್ತು ಒಮಿಕ್ರಾನ್​ (Omicron) ಆತಂಕ ಹೆಚ್ಚಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದೆ. ಆದರೆ ಕೊರೊನಾ ಮೊದಲ ಅಲೆ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಜಾರಿಗೆ ತಂದ ಲಾಕ್​ಡೌನ್​ನಿಂದಾಗಿ (Lockdown) ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಇನ್ನೂ ಕೂಡ ಜನರು ಇದರಿಂದ ಹೊರಬಂದಿಲ್ಲ. ಹೀಗಿರುವಾಗಲೇ ಮತ್ತೆ ವಿಕೆಂಡ್​ ಕರ್ಫ್ಯೂ (Weekend curfew) ಜಾರಿಯಾಗಿದೆ. ಸದ್ಯ ಇದರಿಂದ ಬೀದಿ ಬದಿ ವ್ಯಾಪಾರಿಗಳ ವಹಿವಾಟಿಗೆ ಮತ್ತೆ ಕೊಡಲಿ ಏಟು ಬಿದ್ದಂತೆ ಆಗಿದೆ. ಅದರಲ್ಲೂ ಬಳ್ಳಾರಿ ಜಿಲ್ಲೆಯಲ್ಲಿ ವ್ಯಾಪಾರವಿಲ್ಲದೆ ಅಜ್ಜಿ ಪರದಾಟ ನಡೆಸುವಂತಾಗಿದ್ದು, ಇದನ್ನು ಟಿವಿ9ನಲ್ಲಿ ವರದಿ ಮಾಡಲಾಗಿತ್ತು. ಇದನ್ನು ನೋಡಿದ ಬಳ್ಳಾರಿ ನಗರದ ನಿವಾಸಿ ತಾಜುದ್ದೀನ್ ಅಜ್ಜಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.

ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಅಜ್ಜಿಯ ಕಷ್ಟ ಅರಿತ ತಾಜುದ್ದೀನ್​​ ಒಂದು ತಿಂಗಳಿಗೆ ಆಗುವಷ್ಟು ರೇಷನ್ ನೀಡಿದ್ದಾರೆ. ಬಳ್ಳಾರಿ ಬಸ್ ‌ನಿಲ್ದಾಣದ ಮುಂಭಾಗ ಹಣ್ಣಿನ ವ್ಯಾಪಾರ ಮಾಡುತ್ತಿರುವ ಸಂಧ್ಯಾಬಾಯಿ‌, ಮುಂಜಾನೆ ಇಂದ ಕೂತರು ವ್ಯಾಪಾರ ಆಗಿಲ್ಲ ಎಂದು ಟಿವಿ9 ಮುಂದೆ ಅಳಲು ತೋಡಿಕೊಂಡಿದ್ದರು. ಇವರ ನೋವನ್ನು ಆಲಿಸಿದೆ ತಾಜುದ್ದೀನ್​ 15 ಕೆ.ಜಿ ಅಕ್ಕಿ, 2 ಕೆ.ಜಿ.ತೊಗರಿಬೇಳೆ, ಒಳ್ಳೆಎಣ್ಣೆ, ಸಕ್ಕರೆ ಸೇರಿ ಒಂದು ತಿಂಗಳಿಗೆ ಬೇಕಾಗಿರುವ ರೇಷನ್ ನೀಡಿದ್ದಾರೆ.

ನಾನು 40 ವರ್ಷಗಳಿಂದ ಹಣ್ಣಿನ ವ್ಯಾಪಾರ ಮಾಡುತ್ತಿದ್ದೇನೆ. ಇವತ್ತು ಮುಂಜಾನೆ ಇಂದ ಕುತರೂ 100 ರೂಪಾಯಿ ವ್ಯಾಪಾರ ಆಗಿರಲಿಲ್ಲ. ಮಕ್ಕಳಿದ್ರೂ ನೋಡಲ್ಲ. ನಾನೇ ದುಡಿದು ನಾನೇ ತಿನಬೇಕು. ಟಿವಿ9 ನವರು ಬಂದು ಹೋಗಿದ್ರು, ಇದೀಗ ತಾಜುದ್ದೀನ್​ ಅಕ್ಕಿ, ಬೇಳೆ ತಂದಿದ್ದಾರೆ. ಅವರು ಖುಷಿಯಾಗಿರಲಿ, ದೇವರು ಚೆನ್ನಾಗಿಟ್ಟಿರಲಿ. ಬಹಳ ಕಷ್ಟ ಆಗಿತ್ತು. ನಮಗೆ ದೇವರ ತರಹ ಬಂದು ರೇಷನ್ ಕೊಟ್ಟಿದ್ದಾರೆ. ನಾನು ಮೊಮ್ಮಕ್ಕಳು ಎಲ್ಲರೂ ಊಟ ಮಾಡುತ್ತೀ ವಿಎಂದು ಸಂಕಷ್ಟಕ್ಕೆ ಸಿಲುಕಿದ ಅಜ್ಜಿ ಸಂಧ್ಯಾಬಾಯಿ ಅಭಿಪ್ರಾಯಪಟ್ಟಿದ್ದಾರೆ.

ವೀಕೆಂಡ್ ಕರ್ಪ್ಯೂ ಹಿನ್ನಲೆ ಹಣ್ಣಿನ ವ್ಯಾಪಾರಿ ಅಜ್ಜಿ ಸಂಕಷ್ಟವನ್ನು ನಾನು ಟಿವಿ9 ನಲ್ಲಿ ನೋಡಿದೆ. ಅಜ್ಜಿ ಸಂಕಷ್ಟ ಕೇಳಿ ಮನಸ್ಸು ಕರಗಿ ನಾನು ಸಹಾಯ ಮಾಡುತ್ತಿದ್ದೇನೆ. ಕಳೆದ ಎರಡು ಬಾರಿ ಲಾಕ್​ಡೌನ್​ ಅವಧಿಯಲ್ಲಿ ಬಡವರಿಗೆ ಸಹಾಯ ಮಾಡಿದ್ದೇನೆ. ಈ ಬಾರಿ ಮೊದಲ ಸಲ ಟಿವಿ9 ವರದಿ ನೋಡಿ ಅಜ್ಜಿಗೆ ಸಹಾಯ ಮಾಡುತ್ತಿದ್ದು, ಒಂದು ತಿಂಗಳಿಗೆ ಅಗೋ ಅಷ್ಟು ರೇಶನ್ ಕೊಡಿಸುತ್ತಿದ್ದೇನೆ. ಲಾಕ್​ಡೌನ್​ ಹಾಗೂ ಕರ್ಪ್ಯೂನಿಂದ ಅನೇಕ ಜನ ಬೀದಿ ಬದಿ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ‌‌‌. ಸರಕಾರ ಅವರಿಗೆ ಸಹಾಯ ಮಾಡಬೇಕು. ಅಲ್ಲದೆ ಕೊರೊನಾ ಹೆಚ್ಚಳ ಇರುವ ಜಿಲ್ಲೆಯಲ್ಲಿ ಮಾತ್ರ ವೀಕೆಂಡ್ ಕರ್ಪ್ಯೂ ಅಥವಾ ಲಾಕ್​ಡೌನ್​ ಮಾಡಬೇಕು. ಅಜ್ಜಿಗೆ ಸುಮಾರು 2000 ರೂಪಾಯಿ ಅಕ್ಕಿ, ತೊಗರಿ ಬೇಳೆ, ಅಡುಗೆ ಎಣ್ಣೆ, ಸಕ್ಕರೆ ಕೊಡಿಸಿದ್ದೇನೆ ಎಂದು ಸಹಾಯ ಮಾಡಿದ ತಾಜುದ್ದೀನ್ ತಿಳಿಸಿದ್ದಾರೆ.

ಇದನ್ನೂ ಓದಿ: 2022ರಲ್ಲಿ ನೀವು ಹೆಚ್ಚು ಲಾಂಗ್​ ವೀಕೆಂಡ್​ಗಳನ್ನು ಪಡೆಯಬಹುದು: ಹೇಗೆ ಅಂತೀರಾ? ಇಲ್ಲಿದೆ ಮಾಹಿತಿ

Weekend Curfew: ಕರ್ನಾಟಕದಲ್ಲಿ 2ನೇ ವಾರದ ವೀಕೆಂಡ್ ಕರ್ಫ್ಯೂ: ರಸ್ತೆಗಳಿದ ಪೊಲೀಸರಿಂದ ಅಂಗಡಿ, ಮುಂಗಟ್ಟು ಬಂದ್

Published On - 1:32 pm, Sat, 15 January 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ