Sign In

By signing in or creating an account, you agree with Associated Broadcasting Company's Terms & Conditions and Privacy Policy.

Tv9 Impact: ಟಿವಿ9 ವರದಿ ಬಳಿಕ ಚಿತ್ರಮಂದಿರದಲ್ಲಿ ನಡೆಯುತ್ತಿದ್ದ ವಸತಿ ಶಾಲೆಗೆ ಅಧಿಕಾರಿಗಳ ಭೇಟಿ

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ (Shashidhar Kosambe) ಅವರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಬಳ್ಳಾರಿಯ ಕುರುಗೋಡು ಪಟ್ಟಣದ ಸಿನಿಮಾ ಟಾಕೀಸ್'ನಲ್ಲಿ ನಡೆಯುತ್ತಿರುವ ಗಾಂಧಿತತ್ವ ಆಧಾರಿತ ವಸತಿ ಶಾಲೆಗೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿದರು. ಈ ವೇಳೆ ವಸತಿ ಶಾಲೆಯ ಮೂಲಭೂತ ಸಮಸ್ಯೆ ಕಂಡು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.

Tv9 Impact: ಟಿವಿ9 ವರದಿ ಬಳಿಕ ಚಿತ್ರಮಂದಿರದಲ್ಲಿ ನಡೆಯುತ್ತಿದ್ದ ವಸತಿ ಶಾಲೆಗೆ ಅಧಿಕಾರಿಗಳ ಭೇಟಿ
ವಸತಿ ಶಾಲೆಗೆ ಅಧಿಕಾರಿಗಳ ಭೇಟಿ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಆಯೇಷಾ ಬಾನು

Updated on:Dec 21, 2023 | 10:23 AM

ಬಳ್ಳಾರಿ, ಡಿ.21: ಸಿನಿಮಾ ಟಾಕೀಸ್‌ನಲ್ಲಿ ವಸತಿ ಶಾಲೆ ನಡೆಯುತ್ತಿರುವ ಬಗ್ಗೆ Tv9 ಕನ್ನಡ ವಿಸ್ತೃತ ವರದಿ ಬಿತ್ತಾರ ಮಾಡಿತ್ತು. Tv9 ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು, ವಸತಿ ಶಾಲೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ (Tv9 Impact). ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ (Shashidhar Kosambe) ಅವರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಬಳ್ಳಾರಿಯ ಕುರುಗೋಡು ಪಟ್ಟಣದ ಸಿನಿಮಾ ಟಾಕೀಸ್’ನಲ್ಲಿ ನಡೆಯುತ್ತಿರುವ ಗಾಂಧಿತತ್ವ ಆಧಾರಿತ ವಸತಿ ಶಾಲೆಗೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿದರು. ಕೋಸಂಬೆ ಅವರ ಜೊತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎ.ಕೆ ಜಲಾಲಪ್ಪ ಅವರು ಸಾಥ್ ನೀಡಿದರು.

ಇನ್ನು ವಸತಿ ಶಾಲೆಯ ಮೂಲಭೂತ ಸಮಸ್ಯೆ ಕಂಡು ಗರಂ ಆದರು. ಮಕ್ಕಳಿಗೆ ಯೋಗ್ಯವಲ್ಲದ ಕಟ್ಟಡದಲ್ಲಿ ವಸತಿ ಶಾಲೆ ನಡೆಸಿರುವ ಅಧಿಕಾರಿಗಳಿಗೆ ಶಶಿಧರ್ ಕೋಸಂಬೆ ಅವರು ತರಾಟೆಗೆ ತೆಗೆದುಕೊಂಡರು. ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳೊಂದಿಗೆ ವಸತಿ ಶಾಲೆಯ ಊಟ ಸವಿದು ಪರಿಶೀಲನೆ ನಡೆಸಿದರು. ಹಾಘೂ ತರಗತಿ ಕೊಠಡಿ, ಶಾಲೆಯ ಆವರಣ ಪರಿಶೀಲಿಸಿದರು. ತುರ್ತಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲು ಕೋಸಂಬೆ ಅಧಿಕಾರಿಗೆ ಖಡಕ್ ಸೂಚನೆ ನೀಡಿದ್ದಾರೆ.

TV9 Impact State Commission for Protection of Child Rights officer visits film theatre where girls government residential school run

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ

ಇದನ್ನೂ ಓದಿ: ಸರ್ಕಾರದ ನಿರ್ಲಕ್ಷ್ಯ: ಬಳ್ಳಾರಿಯಲ್ಲಿನ ಒಂದು ಕಾಲದ ಚಿತ್ರಮಂದಿರ ಈಗ ಬಾಲಕಿಯರ ಸರ್ಕಾರಿ ವಸತಿ ಶಾಲೆ

ವರದಿ ಹಿನ್ನೆಲೆ

ಬಳ್ಳಾರಿ ಜಿಲ್ಲೆ ಕುರಗೋಡು ಪಟ್ಟಣದ ಗಾಂಧಿ ತತ್ವ ಆಧಾರಿತ ವಿಧ್ಯಾರ್ಥಿನಿಯರ ವಸತಿ ಶಾಲೆಯನ್ನು ಹಳೆಯ ಸಿನಿಮಾ ಟಾಕೀಸ್​ನಲ್ಲಿ ನಡೆಸಲಾಗುತ್ತಿತ್ತು. 13 ವರ್ಷಗಳಿಂದ ಸ್ವಂತ ಕಟ್ಟಡದ ವ್ಯವಸ್ಥೆ ಇಲ್ಲದೆ ಮಕ್ಕಳು ಬಾಡಿಗೆ ಕಟ್ಟಡದಲ್ಲಿ ವಿದ್ಯಾಭ್ಯಾಸ ಮಾಡುವ ಪರಿಸ್ಥಿತಿ ಇತ್ತು. ಮೊದಲು ಹತ್ತು ವರ್ಷ ಮಠದ ಕಟ್ಟಡದಲ್ಲಿ ಈ ವಸತಿ ಶಾಲೆಯನ್ನ ನಡೆಸಲಾಗುತ್ತಿತ್ತು. ಕಳೆದ ಮೂರು ವರ್ಷಗಳಿಂದ ಪಾಳು ಬಿದ್ದಿದ್ದ ಸುಮಾರು 40 ವರ್ಷ ಹಳೆಯದಾದ ಬಸವೇಶ್ವರ ಚಿತ್ರಮಂದಿರದಲ್ಲಿ ವಸತಿ ಶಾಲೆಯನ್ನ ನಡೆಸಲಾಗುತ್ತಿದೆ. ಈ ವಸತಿ ಶಾಲೆಯಲ್ಲಿ 6 ರಿಂದ 10 ನೇ ತರಗತಿ ವರಗೆ ಸುಮಾರು ‌225 ವಿದ್ಯಾರ್ಥಿಗಳು ಇದ್ಸದಾರೆ. ವಸತಿ ಶಾಲೆಯಾಗಿದ್ದರಿಂದ ಎಲ್ಲ ಮಕ್ಕಳು ಅಲ್ಲಿಯೇ ಮಲಗುತ್ತಾರೆ. ಆದರೆ ಸೂಕ್ತ ಕೊಠಡಿಗಳಿಲ್ಲದೆ ನೆಲದ ಮೇಲೆ ಕಡಿಮೆ ಸ್ಥಳದಲ್ಲಿ ಮಲಗುವ ಪರಿಸ್ಥಿತಿ ಇದೆ. ಸುತ್ತಲೂ ಕಟಂಜರಿ ವ್ಯವಸ್ಥೆ ಇಲ್ಲ. ಅಲ್ಲೆ ಕಾರಿಡಾರ್‌ನಲ್ಲಿ ಮಲಗಬೇಕು, ಅಲ್ಲೆ ಓದಬೇಕು. ಇಂತಹ ಪರಿಸ್ಥಿತಿಯನ್ನ ಎದುರಿಸುತ್ತಿದ್ದ ಗಾಂಧಿ ತತ್ವ ಆಧಾರಿತ ವಿಧ್ಯಾರ್ಥಿನಿಯರ ವಸತಿ ಶಾಲೆ ಬಗ್ಗೆ ಟಿವಿ9 ವರದಿ ಬಿತ್ತರಿಸಿತ್ತು. ಸದ್ಯ ಈಗ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಆದಷ್ಟು ಬೇಗ ಹೊಸ ಕಟ್ಟಡ ಸಿಗುವ ನಿರೀಕ್ಷೆಯಲ್ಲಿ ಮಕ್ಕಳಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:22 am, Thu, 21 December 23

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ