AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tv9 Impact: ಟಿವಿ9 ನಿರಂತರ ವರದಿ ಬಳಿಕ ಎಚ್ಚೆತ್ತ ವಿಜಯನಗರ ಜಿಲ್ಲಾಡಳಿತ, ಮಕರಬ್ಬಿ ಗ್ರಾಮದಲ್ಲಿ ಮತ್ತೆ ತಾತ್ಕಾಲಿಕ ಆಸ್ಪತ್ರೆ ಆರಂಭ

ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಳೆದ ತಿಂಗಳು 23 ರಿಂದ 29 ರವರೆಗೆ ತಾತ್ಕಾಲಿಕ ಆಸ್ಪತ್ರೆ ಆರಂಭವಾಗಿತ್ತು. ಈಗ ಮತ್ತೆ ನಿನ್ನೆಯಿಂದ ಸರ್ಕಾರಿ ಶಾಲೆಯಲ್ಲಿ ತಾತ್ಕಾಲಿಕ ಆಸ್ಪತ್ರೆ ಆರಂಭ ಮಾಡಲಾಗಿದೆ.

Tv9 Impact: ಟಿವಿ9 ನಿರಂತರ ವರದಿ ಬಳಿಕ ಎಚ್ಚೆತ್ತ ವಿಜಯನಗರ ಜಿಲ್ಲಾಡಳಿತ, ಮಕರಬ್ಬಿ ಗ್ರಾಮದಲ್ಲಿ ಮತ್ತೆ ತಾತ್ಕಾಲಿಕ ಆಸ್ಪತ್ರೆ ಆರಂಭ
ಕಲುಷಿತ ನೀರು ಸೇವಿಸಿ ವಾಂತಿ, ಭೇದಿ
TV9 Web
| Edited By: |

Updated on: Oct 06, 2021 | 12:25 PM

Share

ಬಳ್ಳಾರಿ: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ 6 ಜನರ ಸಾವು ಕೇಸ್ಗೆ ಸಂಬಂಧಿಸಿ ಟಿವಿ9 ನಿರಂತರ ವರದಿ ಬಳಿಕ ವಿಜಯನಗರ ಜಿಲ್ಲಾಡಳಿತ ಎಚ್ಚೆತ್ತಿದೆ. ಮಕರಬ್ಬಿ ಗ್ರಾಮದಲ್ಲಿ ಮತ್ತೆ ತಾತ್ಕಾಲಿಕ ಆಸ್ಪತ್ರೆ ಆರಂಭ ಮಾಡಿದೆ.

ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಳೆದ ತಿಂಗಳು 23 ರಿಂದ 29 ರವರೆಗೆ ತಾತ್ಕಾಲಿಕ ಆಸ್ಪತ್ರೆ ಆರಂಭವಾಗಿತ್ತು. ಈಗ ಮತ್ತೆ ನಿನ್ನೆಯಿಂದ ಸರ್ಕಾರಿ ಶಾಲೆಯಲ್ಲಿ ತಾತ್ಕಾಲಿಕ ಆಸ್ಪತ್ರೆ ಆರಂಭ ಮಾಡಲಾಗಿದೆ. ದಿನದ 24 ಗಂಟೆಯೂ ಆರೋಗ್ಯ ಇಲಾಖೆ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತುರ್ತು ಸೇವೆಗೆ ಮಕರಬ್ಬಿ ಗ್ರಾಮದಲ್ಲಿ 2 ಌಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಮನೆಮನೆಯ ಸರ್ವೆ ಮಾಡಲಾಗುತ್ತಿದೆ. ವಾಂತಿ, ಭೇದಿ ಲಕ್ಷಣ ಇದ್ದವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಕೆಲ ದಿನಗಳಿಂದ ಮಕರಬ್ಬಿಯಲ್ಲಿ ಕಲುಷಿತ ನೀರಿನ ಸಮಸ್ಯೆ ಎದುರಾಗಿದೆ. ಕಲುಷಿತ ನೀರು ಸೇವಿಸಿ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿ ಕೆಲ ಕುಟುಂಬಗಳು ಗ್ರಾಮವನ್ನು ತೊರೆದು ಹೋಗಿವೆ. ಕೆಲ ಜನರು ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದಾರೆ. ಅಸ್ವಸ್ಥಗೊಂಡ ಕೆಲವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಹುಬ್ಬಳ್ಳಿ, ದಾವಣಗೆರೆ, ಹಾವೇರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಕರಬ್ಬಿ ಗ್ರಾಮದಲ್ಲಿ ಶಾಲೆಗೆ ತಾತ್ಕಾಲಿಕವಾಗಿ ರಜೆ ಘೋಷಣೆ ಮಾಡಲಾಗಿದೆ.

ವಾಂತಿಭೇದಿಯಿಂದ ಅಸ್ವಸ್ಥರಾಗಬಹುದೆಂಬ ಆತಂಕದಲ್ಲಿ ತಮ್ಮ ತಮ್ಮ ಮಕ್ಕಳನ್ನು ಗ್ರಾಮಸ್ಥರು ಸಂಬಂಧಿಕರ ಮನೆಗಳಿಗೆ ಕಳುಹಿಸಿದ್ದಾರೆ. ಸರಣಿ ಸಾವಿನಿಂದ ಗ್ರಾಮದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ. ಸದ್ಯ ಉಳಿದವರಿಗೆ ಚಿಕಿತ್ಸೆ ಮುಂದುವರಿದಿದ್ದು, ಗ್ರಾಮದ ಸರ್ಕಾರಿ ಶಾಲೆಯಲ್ಲಿ 7-8 ತರಗತಿ ಮಕ್ಕಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್, ಮೃತ ಕುಟುಂಬಗಳಿಗೆ ಸಿಎಂ ಪರಿಹಾರ ನಿಧಿ ಅಡಿ ಪರಿಹಾರ ನೀಡಲು ಚಿಂತನೆ ನಡೆಸಲಾಗಿದೆ. ಈ ಸಂಬಂಧ ವರದಿ ತರಿಸಿಕೊಳ್ಳಲು ಡಿಸಿಗೆ ಸೂಚನೆ ನೀಡಲಾಗುವುದು. ಗ್ರಾಮಕ್ಕೆ ಭೇಟಿ ನೀಡಲು ಡಿಸಿಗೆ ಸೂಚನೆ ನೀಡಲಾಗಿದೆ. ನೀರು ಯಾವ ಕಾರಣಕ್ಕೆ ಕಲುಷಿತವಾಗಿದೆ ಅನ್ನೋ ಬಗ್ಗೆ ಪರಿಶೀಲನೆ ನಡೆಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ನೀರು ಕಲುಷಿತಗೊಳ್ಳಲು ಕಾರಣವೇನು? ಬೋರ್ ವೆಲ್ನಿಂದ ಹೊಸ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು ಈ ವೇಳೆ, ಹಳೆ ಪೈಪ್ ಗಳಿಗೆ ಡ್ಯಾಮೇಜ್ ಆಗಿದೆ. ಡ್ಯಾಮೇಜ್ ಆದ ಪೈಪ್ ನೊಳಗೆ ಚರಂಡಿ ನೀರು ಮಿಶ್ರವಾಗಿದ್ದು, ಇದೇ ನೀರನ್ನು ಮಕರಬ್ಬಿ ಗ್ರಾಮಸ್ಥರು ಸೇವಿಸಿದ್ದಾರೆ. ಸುಮಾರು 2 ಸಾವಿರಕ್ಕೂ ಅಧಿಕ ಜನಸಂಖ್ಯೆ ಇರೋ ಮಕರಬ್ಬಿ ಗ್ರಾಮದಲ್ಲಿ ಈ ಕಾರಣದಿಂದ ಸುಮಾರು 200 ಕ್ಕೂ ಜನರು ವಾಂತಿಬೇಧಿಯಿಂದ ಬಳಲಿದ್ದರು. ಹುಬ್ಬಳ್ಳಿ, ದಾವಣಗೆರೆ, ಹಾವೇರಿ ಆಸ್ಪತ್ರೆಯಲ್ಲಿ ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇದುವರೆಗೆ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹಾಗೂ ಜಿಲ್ಲಾಧಿಕಾರಿಗಳು ಸೇರಿದಂತೆ ಅಧಿಕಾರಿಗಳು ಆಗಮಿಸಿಲ್ಲ. ಈ ಕುರಿತು ಜಿಲ್ಲಾಡಳಿತದ ವಿರುದ್ದ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಜಯನಗರ: ಕಲುಷಿತ ನೀರು ಸೇವಿಸಿ 6 ಜನರ ಸಾವು ಪ್ರಕರಣ, ಇಬ್ಬರು ಅಧಿಕಾರಿಗಳು ಅಮಾನತು

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ