ಅವೈಜ್ಞಾನಿಕ ಕ್ರಿಯಾಯೋಜನೆ, ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಕ್ಷೀಣ

ಬಳ್ಳಾರಿ: ಅವೈಜ್ಞಾನಿಕ ಕ್ರಿಯಾಯೋಜನೆ ಹಿನ್ನೆಲೆ ಮೂರು ಜಿಲ್ಲೆಗಳ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಕುಂಠಿತವಾಗಿದೆ. ಬಳ್ಳಾರಿ, ಚಿತ್ರದುರ್ಗ, ತುಮಕೂರಿನ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಹಣ ಬಳಕೆಯಾಗಿಲ್ಲ. ಬಳ್ಳಾರಿ-$13,378 ಕೋಟಿ, ಚಿತ್ರದುರ್ಗ-$3,792 ಕೋಟಿ ಮತ್ತು ತುಮಕೂರು-2,554 ಕೋಟಿ ರೂಪಾಯಿ ಅನುದಾನ ಸೇರಿದಂತೆ ಒಟ್ಟು 24,996.71 ಕೋಟಿ ರೂ. ಕ್ರಿಯಾಯೋಜನೆ ಬಿಡುಗಡೆ ಮಾಡಲಾಗಿತ್ತು. ರಾಜ್ಯ ಸರ್ಕಾರದಿಂದ ಇದುವರೆಗೆ 4-5 ಬಾರಿ ಸುಪ್ರೀಂಕೋರ್ಟ್​ಗೆ ಕ್ರಿಯಾಯೋಜನೆ ಸಲ್ಲಿಕೆಯಾಗಿದೆ. ಆದರೆ ಅವೈಜ್ಞಾನಿಕ ಕ್ರಿಯಾಯೋಜನೆ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್​ನಿಂದ ಇದುವರೆಗೆ ಪುರಸ್ಕೃತ ಗೊಂಡಿಲ್ಲ. ಹೀಗಾಗಿ ಅವೈಜ್ಞಾನಿಕ ಕ್ರಿಯಾಯೋಜನೆಗೆ […]

ಅವೈಜ್ಞಾನಿಕ ಕ್ರಿಯಾಯೋಜನೆ, ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಕ್ಷೀಣ

Updated on: Dec 27, 2019 | 12:27 PM

ಬಳ್ಳಾರಿ: ಅವೈಜ್ಞಾನಿಕ ಕ್ರಿಯಾಯೋಜನೆ ಹಿನ್ನೆಲೆ ಮೂರು ಜಿಲ್ಲೆಗಳ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಕುಂಠಿತವಾಗಿದೆ. ಬಳ್ಳಾರಿ, ಚಿತ್ರದುರ್ಗ, ತುಮಕೂರಿನ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಹಣ ಬಳಕೆಯಾಗಿಲ್ಲ. ಬಳ್ಳಾರಿ-$13,378 ಕೋಟಿ, ಚಿತ್ರದುರ್ಗ-$3,792 ಕೋಟಿ ಮತ್ತು ತುಮಕೂರು-2,554 ಕೋಟಿ ರೂಪಾಯಿ ಅನುದಾನ ಸೇರಿದಂತೆ ಒಟ್ಟು 24,996.71 ಕೋಟಿ ರೂ. ಕ್ರಿಯಾಯೋಜನೆ ಬಿಡುಗಡೆ ಮಾಡಲಾಗಿತ್ತು.

ರಾಜ್ಯ ಸರ್ಕಾರದಿಂದ ಇದುವರೆಗೆ 4-5 ಬಾರಿ ಸುಪ್ರೀಂಕೋರ್ಟ್​ಗೆ ಕ್ರಿಯಾಯೋಜನೆ ಸಲ್ಲಿಕೆಯಾಗಿದೆ. ಆದರೆ ಅವೈಜ್ಞಾನಿಕ ಕ್ರಿಯಾಯೋಜನೆ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್​ನಿಂದ ಇದುವರೆಗೆ ಪುರಸ್ಕೃತ ಗೊಂಡಿಲ್ಲ. ಹೀಗಾಗಿ ಅವೈಜ್ಞಾನಿಕ ಕ್ರಿಯಾಯೋಜನೆಗೆ ಸಮಾಜ ಪರಿವರ್ತನಾ ಸಮುದಾಯದಿಂದ ಸುಪ್ರೀಂ ಕೋರ್ಟ್​ಗೆ ಆಕ್ಷೇಪಣೆ ಸಲ್ಲಿಸಿದೆ. ಆದ್ರೂ ಸಮರ್ಪಕ ಕ್ರಿಯಾಯೋಜನೆ ಸಲ್ಲಿಸದೇ ರಾಜ್ಯ ಸರ್ಕಾರ ಕಾಲಹರಣ ಮಾಡುತ್ತಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us