AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮಿಕಿ ನಿಗಮ ಹಗರಣ: ಬಳ್ಳಾರಿಯಲ್ಲಿ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಮತ್ತೆ ಇಡಿ ದಾಳಿ

ಕರ್ನಾಟಕದ ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದ ವಾಲ್ಮಿಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಚಾರ್ಜ್​ಶೀಟ್ ಸಲ್ಲಿಕೆಯ ಸಮಯ ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಇಡಿ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಬಳ್ಳಾರಿಯಲ್ಲಿ ದಾಳಿ ನಡೆಸಿದ್ದಾರೆ.

ವಾಲ್ಮಿಕಿ ನಿಗಮ ಹಗರಣ: ಬಳ್ಳಾರಿಯಲ್ಲಿ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಮತ್ತೆ ಇಡಿ ದಾಳಿ
ವಾಲ್ಮಿಕಿ ನಿಗಮ ಹಗರಣ: ಬಳ್ಳಾರಿಯಲ್ಲಿ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಮತ್ತೆ ಇಡಿ ದಾಳಿ
ವಿನಾಯಕ ಬಡಿಗೇರ್​
| Edited By: |

Updated on: Aug 28, 2024 | 10:35 AM

Share

ಬಳ್ಳಾರಿ, ಆಗಸ್ಟ್ 28: ವಾಲ್ಮಿಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಬಳ್ಳಾರಿಯ ವಿವಿಧೆಡೆ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಮತ್ತೊಮ್ಮೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ನಾಗೇಂದ್ರ ಸಂಬಂಧಿ ಎರ್ರಿಸ್ವಾಮಿ ಮನೆ ಸೇರಿದಂತೆ ಕೆಲ ಆಪ್ತ ಸಹಾಯಕರು ಮತ್ತು ಆಪ್ತರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪ್ರಕರಣದಲ್ಲಿ ಇಡಿ ಜಾರ್ಜ್​​ಶೀಟ್ ಸಲ್ಲಿಕೆಗೆ ಸಮಯ ಹತ್ತಿರ ಬಂದಿರುವುದರಿಂದ ಅಧಿಕಾರಿಗಳು ದಾಳಿ ಚುರುಕುಗೊಳಿಸಿದ್ದಾರೆ ಎನ್ನಲಾಗಿದೆ.

ಹಗರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಅಧಿಕಾರಿಗಳು ಕಳೆದ ತಿಂಗಳಷ್ಟೇ ಬೆಂಗಳೂರು, ರಾಯಚೂರು, ಬಳ್ಳಾರಿ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ದಾಳಿ ನಡೆಸಿ ಮಾಹಿತಿ ಕಲೆಹಾಕಿದ್ದರು. ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ಗಸನಗೌಡ ದದ್ದಲ್ (ನಿಗಮದ ಅಧ್ಯಕ್ಷ, ಕಾಂಗ್ರೆಸ್ ಶಾಸಕ) ನಿವಾಸ, ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್​ ಶಾಸಕ ನಾಗೇಂದ್ರ (ಮಾಜಿ ಸಚಿವ) ಮನೆ ಮೇಲೂ ದಾಳಿ ನಡೆಸಿದ್ದರು.

ಬೆಂಗಳೂರಿನ ಡಾಲರ್ಸ್‌ ಕಾಲೋನಿಯ ಬಿ.ನಾಗೇಂದ್ರ ಫ್ಲ್ಯಾಟ್‌ ಸೇರಿದಂತೆ ಏಕಕಾಲಕ್ಕೆ 18 ಕಡೆ ದಾಳಿ ನಡೆದಿತ್ತು. ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಕಚೇರಿಯನ್ನೂ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.

ಏನಿದು ವಾಲ್ಮೀಕಿ ನಿಗಮ ಹಗರಣ?

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಣಕಾಸು ವಂಚನೆ ಪ್ರಕರಣವಾಗಿದೆ. ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆಯ ನಂತರ ಹಗರಣ ಬೆಳಕಿಗೆ ಬಂದಿತ್ತು. ಚಂದ್ರಶೇಖರನ್ ಡೆತ್​ನೋಟ್​​​ನಲ್ಲಿ ಭ್ರಷ್ಟಾಚಾರ ಸಂಬಂಧಿತ ಮಾಹಿತಿಗಳು ಹಾಗೂ ಹಲವಾರು ಅಧಿಕಾರಿಗಳ ಹೆಸರು ಉಲ್ಲೇಖವಾಗಿತ್ತು.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಬಸನಗೌಡ ದದ್ದಲ್, ಮಾಜಿ ಸಚಿವ ನಾಗೇಂದ್ರ ಮನೆ ಸೇರಿ 18 ಕಡೆ ಇ.ಡಿ ದಾಳಿ

ಹಗರಣವು ರಾಜ್ಯದಲ್ಲಿ ತೀವ್ರ ರಾಜಕೀಯ ಕೋಲಾಹಲಕ್ಕೂ ಕಾರಣವಾಗಿದೆ. ಸದ್ಯ ಎಸ್​ಐಟಿ, ಇಡಿ ಹಾಗೂ ಸಿಬಿಐ ಕೂಡ ಪ್ರಕರಣದ ತನಿಖೆ ನಡೆಸುತ್ತಿವೆ. ಎಸ್​ಐಟಿ ಈಗಾಗಲೇ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದು, ದದ್ದಲ್ ಹಾಗೂ ನಾಗೇಂದ್ರ ಹೆಸರನ್ನು ಉಲ್ಲೇಖಿಸಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinayak Badiger
Vinayak Badiger
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ