AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಬಳ್ಳಾರಿಯಲ್ಲೇ 20 ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಶಂಕೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಬಗೆದಷ್ಟು ಬಯಲಾಗುತ್ತಿದೆ. ಈಗಾಗಲೇ ಎಸ್ಐಟಿ ಮತ್ತು ಇಡಿ ಹಗರಣದ ಬೆನ್ನತ್ತಿ ಹಲವು ಮಹತ್ವದ ದಾಖಲೆಗಳನ್ನು ಕಲೆಹಾಕಿವೆ. ಅದರಲ್ಲಿ, ಬಳ್ಳಾರಿ ಜಿಲ್ಲೆಯ ಸುಮಾರು 20ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳಿಗೆ ಲಕ್ಷಾಂತರ ರೂಪಾಯಿ ಹಣ ವರ್ಗಾವಣೆ ಆಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಬಳ್ಳಾರಿಯಲ್ಲೇ 20 ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಶಂಕೆ
ವಾಲ್ಮೀಕಿ ನಿಗಮ ಹಗರಣ: ಕಮಿಷನ್ ಆಸೆಗೆ ಅಕೌಂಟ್​ಗೆ ಹಣ ವರ್ಗಾಯಿಸಿಕೊಂಡಿದ್ದವರಿಗೆ ಶಾಕ್
ವಿನಾಯಕ ಬಡಿಗೇರ್​
| Edited By: |

Updated on: Jul 17, 2024 | 11:33 AM

Share

ಬಳ್ಳಾರಿ, ಜುಲೈ 17: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಭ್ರಷ್ಟಾಚಾರ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಈಗಾಗಲೇ ಎಸ್‌ಐಟಿ ಮತ್ತು ಇಡಿ ತನಿಖೆ ನಡೆಸುತ್ತಿದ್ದು ಹಲವು ಮಹತ್ವದ ದಾಖಲೆಗಳನ್ನ ಕಲೆಹಾಕಿವೆ. ಹೈದರಾಬಾದ್ ಮೂಲದ ಖಾಸಗಿ ಬ್ಯಾಂಕನಿಂದ ಬಳ್ಳಾರಿಗೆ 20.19 ಕೋಟಿ ರೂಪಾಯಿ ಹಣ ವರ್ಗಾವಣೆಯಾಗಿರುವುದನ್ನು ಎಸ್‌ಐಟಿ ಪತ್ತೆ ಮಾಡಿದೆ. ಬಳ್ಳಾರಿ, ರಾಯಚೂರು, ತುಮಕೂರು ಸೇರಿದಂತೆ ಸುಮಾರು 77 ಬ್ಯಾಂಕ್ ಅಕೌಂಟ್​​​ಗಳಿಗೆ ಕೋಟಿ ಕೋಟಿ ಹಣ ವರ್ಗಾವಣೆ ಯಾಗಿರುವ ಬಗ್ಗೆ ಇಡಿ ಪತ್ತೆ ಹಚ್ಚಿದೆ. ಹೀಗಾಗಿ ಮತ್ತಷ್ಟು ಬಿಗಿ ಪಟ್ಟು ಹಿಡಿದು ವಾಲ್ಮೀಕಿ ಹಗರಣದ ತನಿಖೆ ಬಹುತೇಕ ಮಾಜಿ ಸಚಿವ ನಾಗೇಂದ್ರಗೆ ಸಂಕಷ್ಟ ತಂದೊಡ್ಡುವುದು ಪಕ್ಕಾ ಆಗಿದೆ.

ನಾಲ್ಕು ದಿನಗಳ ಹಿಂದೆ ಬಳ್ಳಾರಿಗೆ ಬಂದಿದ್ದ ಇಡಿ, ಮಾಜಿ ಸಚಿವ ನಾಗೇಂದ್ರ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿ ಹಲವು ಮಹತ್ವದ ದಾಖಲೆಗಳನ್ನ ಕಲೆ ಹಾಕಿದೆ. ಬಳ್ಳಾರಿಗೆ ಬಂದಿರುವ ಹಣದ ಮೂಲದ ಬಗ್ಗೆ ಪತ್ತೆ ಹಚ್ಚಿದೆ.

ಕಮಿಷನ್ ಆಸೆಗೆ ಖಾತೆಗೆ ಹಣ ವರ್ಗಾಯಿಸಿಕೊಂಡಿದ್ದವರಿಗೆ ಶಾಕ್

ಲೋಕಸಭಾ ಚುನಾವಣೆ ವೇಳೆ ಬಳ್ಳಾರಿಗೆ ಬಂದಿದ್ದ 20.19 ಕೋಟಿ‌ ಹಣ ಚುನಾವಣೆಗೆ ಬಳಕೆಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಕಾರಣ ಪಂಚಾಯತಿ ಮಟ್ಟದಲ್ಲಿ ಕುರಿಗಾಹಿಗಳ, ಆಭರಣ ಅಂಗಡಿಗಳ, ಮಧ್ಯದ ಅಂಗಡಿಗಳ, ರೈತರ ಅಕೌಂಟ್‌ಗಳಿಗರ ಲಕ್ಷ ಲಕ್ಷ ಹಣ ವರ್ಗಾವಣೆ ಮಾಡಿ ತೆಗಿಸಿಕೊಳ್ಳಲಾಗಿದೆ ಎಂಬ ಶಂಕೆ ಇದೆ. ಇಪ್ಪತ್ತು ಪರ್ಸೆಂಟ್ ಕಮಿಷನ್ ಆಸೆಗೆ ಹಣ ಹಾಕಿಸಿಕೊಂಡಿದ್ದವರಿಗೆ ಇಡಿ ಮತ್ತು ಎಸ್‌ಐಟಿ ಶಾಕ್ ನೀಡಿವೆ. ಹಾಕಿರುವ ಹಣ ವಾಪಾಸ್ ನೀಡುವಂತೆ ತಾಕಿತು ಮಾಡಿವೆ. ಇನ್ನು ಬ್ಯಾಂಕ್ ಅಕೌಂಟ್‌ಗೆ ಹಣ ಜಮೆಯಾದ ದಿನವೇ ಕಮಿಷನ್ ಪಡೆದು ಹಣ ಡ್ರಾ ಮಾಡಿಕೊಟ್ಟವರಿಗೂ ಹಣ ವಾಪಾಸ್ ನೀಡುವಂತೆ ಎಸ್‌ಐಟಿ ಮತ್ತು ಇಡಿ ನೋಟೀಸ್ ನೀಡಿದೆ ಹೀಗಾಗಿ ಅವರೆಲ್ಲ ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಎಂಪಿ ಎಲೆಕ್ಷನ್​ಗೆ ನಿಗಮದ 20 ಕೋಟಿ ರೂ. ಬಳಕೆ ಮಾಡಿಕೊಂಡ್ರಾ ನಾಗೇಂದ್ರ? ಪುಷ್ಟಿ ನೀಡುತ್ತಿದೆ ಹಗರಣದ ಟೈಮ್ ಲೈನ್

ಒಟ್ಟಿನಲ್ಲಿ ಕೋಟ್ಯಾಂತರ ರೂಪಾಯಿ ಹಗರಣ ಜಾಡನ್ನು ಪೂರ್ಣವಾಗಿ ಬಯಲಿಗೆಳೆಯಲು ಇಡಿ ಮತ್ತು ಎಸ್‌ಐಟಿ ಅಧಿಕಾರಿಗಳು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ