AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆ, ವೆಂಟಿಲೇಟರ್ ಸ್ಥಗಿತ: ಮೂವರು ರೋಗಿಗಳ ದಾರುಣ ಸಾವು

Bellary VIMS Hospital; ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆ, ವೆಂಟಿಲೇಟರ್ ಸ್ಥಗಿತ: ಮೂವರು ರೋಗಿಗಳ ದಾರುಣ ಸಾವು

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆ, ವೆಂಟಿಲೇಟರ್ ಸ್ಥಗಿತ: ಮೂವರು ರೋಗಿಗಳ ದಾರುಣ ಸಾವು
ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆ, ವೆಂಟಿಲೇಟರ್ ಸ್ಥಗಿತ: ಮೂವರು ರೋಗಿಗಳ ಸಾವು
TV9 Web
| Edited By: ಸಾಧು ಶ್ರೀನಾಥ್​|

Updated on:Sep 14, 2022 | 9:36 PM

Share

ಬಳ್ಳಾರಿ: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆಯಿಂದ (electricity failure) ವೆಂಟಿಲೇಟರ್ (Ventilator) ಸ್ಥಗಿತಗೊಂಡು, ಮೂವರು ರೋಗಿಗಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ವೆಂಟಿಲೇಟರ್​ ಮೇಲ್ಲಿದ್ದ ರೋಗಿಗಳಾದ ಮೌಲಾ ಹುಸೇನ್ ಹಾಗೂ ಚೆಟ್ಟೆಮ್ಮ ಕೊನೆಯುಸಿರೆಳೆದ ದುರ್ದೈವಿಗಳು. ಮೂತ್ರಕೋಶ ವೈಫಲ್ಯದಿಂದ ಬಳಲುತ್ತಿದ್ದ ಮತ್ತೊಬ್ಬ ರೋಗಿ ಸಹ ಸಾವನ್ನಪ್ಪಿದ್ದಾರೆ. ಐಸಿಯುನಲ್ಲಿದ್ದ 10 ರೋಗಿಗಳ ಪೈಕಿ, ಈ ಮೂವರು ರೋಗಿಗಳು ಅಸುನೀಗಿದ್ದಾರೆ.

ವಿಮ್ಸ್ ಆಸ್ಪತ್ರೆಯ (VIMS Hospital in Bellary) ವಿರುದ್ಧ ಮೃತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಹಿನ್ನೆಲೆಯಲ್ಲಿ ಸಂಭವಿಸಿರುವ ದುರ್ಘಟನೆ ಬಗ್ಗೆ ಸ್ಪಷ್ಟನೆ ನೀಡಲು ವಿಮ್ಸ್ ಆಡಳಿತ ಮಂಡಳಿ ನಿರಾಕರಿಸಿದೆ.

ಆದರೆ ಬಳ್ಳಾರಿ ವಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ಗಂಗಾಧರ ಗೌಡ ಅವರು ಮಾಧ್ಯಮ ಹೇಳಿಕೆ ನೀಡಿದ್ದು, ಮೂವರ ಸಾವಿಗೆ ಬೇರೆಯದ್ದೇ ಕಾರಣ ನೀಡಿದ್ದಾರೆ.

ನಿರ್ದೇಶಕ ಡಾ. ಗಂಗಾಧರ ಗೌಡ ಸ್ಪಷ್ಟನೆ ಹೀಗಿದೆ:

ಈ ದಿನ ವಿಮ್ಸ್ ಆಸ್ಪತ್ರೆಯಲ್ಲಿ ಆಗಿರುವ ಸಾವುಗಳು ವಿವಿಧ ತೀವ್ರತರದ ಆರೋಗ್ಯ ಸಮಸ್ಯೆ ಗಳಿಂದ ಸಂಭವಿಸಿವೆ. ಒಬ್ಬ ರೋಗಿಯು ವಿಷಪೂರಿತ ಹಾವಿನ ಕಡಿತದಿಂದ ದೇಹದಲ್ಲಿ ಆಂತರಿಕ ರಕ್ತಸ್ರಾವವಾಗಿ ಸಾವಿಗೀಡಾಗಿದ್ದರೆ; ಇನ್ನೊಬ್ಬ ಮೃತರು ಬಹು ಅಂಗಾಗ ವೈಫಲ್ಯದಿಂದ ನಮ್ಮ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿ, ಕೊನೆಗೆ ಮೆದುಳಿನ ರಕ್ತಸ್ರಾವದಿಂದ ಮೃತಪಟ್ಟಿರುತ್ತಾರೆ. ಹಾಗೆಯೇ ಮತ್ತೊಬ್ಬ ರೋಗಿಯು ಹಲವಾರು ದಿನಗಳಿಂದ ಮೂತ್ರಕೋಶ ವೈಫಲ್ಯದಿಂದ ಬಳಲುತ್ತಿದ್ದು ಕೊನೆಗೆ ಬಹು ಅಂಗಾಗಳ ಸೋಂಕಿನಿಂದ ಸಹಜ ಸಾವನ್ನಪ್ಪಿದ್ದಾರೆ.

ವಿಮ್ಸ್ ಆಸ್ಪತ್ರೆಯು ಉನ್ನತ ಚಿಕಿತ್ಸಾ ಕೇಂದ್ರವಾಗಿದ್ದು ಎಲ್ಲಾ ಕೇಂದ್ರಗಳಲ್ಲಿ ಚಿಕಿತ್ಸೆ ಫಲಕಾರಿಯಾಗದಿದ್ದಲ್ಲಿ ಕೊನೆಗೆ ಪರಿಸ್ಥಿತಿ ಉಲ್ಬಣಗೊಂಡ ನಂತರ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಬರುವುದರಿಂದ ಸಾವುಗಳು ಆಗುವ ಸಂಭವನೀಯತೆ ಹೆಚ್ಚಾಗುತ್ತದೆ. ಬೆಳಗ್ಗೆ ಅದೇ ಸಮಯದಲ್ಲಿ ವಿದ್ಯುತ್ ಸಂಪರ್ಕ ಕೈಕೊಟ್ಟಿರುವುದು ಕಾಕತಾಳೀಯವಾಗಿದ್ದು, ವಿಮ್ಸ್ ಆಸ್ಪತ್ರೆ ಯಾವಾಗಲೂ ರೋಗಿಗಳ ಹಿತಕ್ಕಾಗಿ ಕಾರ್ಯನಿರ್ವಹಿಸುತ್ತದೆ ಎಂದು ಈ ಮೂಲಕ ಸಾರ್ವಜನಿಕರಿಗೆ ಹಾಗೂ ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡುತ್ತೇನೆ ಎಂದಿದ್ದಾರೆ.

Published On - 9:29 pm, Wed, 14 September 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ