ವಿಜಯನಗರ: ಪೂಜೆ ಮಾಡಿಟ್ಟ ಹಣ 10 ಪಟ್ಟು ಹೆಚ್ಚಾಗುತ್ತೆ ಎಂದು ಗ್ರಾಮಸ್ಥರಿಗೆ 2 ಕೋಟಿ ಪಂಗನಾಮ, ಮೂವರು ಅರೆಸ್ಟ್

1 ಲಕ್ಷಕ್ಕೆ 10 ಲಕ್ಷ ವಾಪಸ್ ನೀಡುವುದಾಗಿ ಹೇಳಿ ಗ್ರಾಮಸ್ಥರಿಂದ ದುಡ್ಡು ಪಡೆದು ಬಳಿಕ ಪೆಟ್ಟಿಗೆಯೊಂದರಲ್ಲಿ ಹಣ ಇಟ್ಟು ಪೂಜೆ ಮಾಡಿ 168 ದಿನಗಳ ಬಳಿಕ ಪೆಟ್ಟಿಗೆ ತೆಗೆದರೆ ಹಣ 10 ಪಟ್ಟು ಹೆಚ್ಚಾಗುತ್ತೆ ಎಂದು ಖದೀಮರು ಗ್ರಾಮಸ್ಥರಿಂದ 2 ಕೋಟಿಗೂ ಅಧಿಕ ಹಣ ದೋಚಿ ಪರಾರಿಯಾಗಿದ್ದಾರೆ. ಅಲ್ಲದೆ ಗ್ರಾಮಕ್ಕೆ ನ್ಯಾಯ ಕೇಳುತ್ತಿದ್ದ ವ್ಯಕ್ತಿಯೂ ಇದರಲ್ಲಿ ಶಾಮೀಲಾಗಿದ್ದು ನಾಪತ್ತೆಯಾಗಿದ್ದಾನೆ.

ವಿಜಯನಗರ: ಪೂಜೆ ಮಾಡಿಟ್ಟ ಹಣ 10 ಪಟ್ಟು ಹೆಚ್ಚಾಗುತ್ತೆ ಎಂದು ಗ್ರಾಮಸ್ಥರಿಗೆ 2 ಕೋಟಿ ಪಂಗನಾಮ, ಮೂವರು ಅರೆಸ್ಟ್
1 ಲಕ್ಷಕ್ಕೆ 10 ಪಟ್ಟು ಹೆಚ್ಚು ಹಣ ನೀಡುವುದಾಗಿ ಗ್ರಾಮಸ್ಥರಿಗೆ 2 ಕೋಟಿ ಮೋಸ
Follow us
| Updated By: ಆಯೇಷಾ ಬಾನು

Updated on: Sep 09, 2024 | 12:00 PM

ವಿಜಯನಗರ, ಸೆ.09: 1 ಲಕ್ಷಕ್ಕೆ 10 ಲಕ್ಷ‌ ಹಣ ಮಾಡಿ ಕೊಡ್ತೀವಿ ಎಂದು ಜನರನ್ನು ನಂಬಿಸಿ ಇಡೀ ಗ್ರಾಮದ‌ 60ಕ್ಕೂ ಹೆಚ್ಚು ಜನರಿಗೆ ಖದೀಮರು ಮೋಸ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಲ್ಲಹಳ್ಳಿ ತಾಂಡಾದಲ್ಲಿ ನಡೆದಿದೆ. ಒಂದಲ್ಲ, ಎರಡಲ್ಲ, ಹತ್ತು ಪಟ್ಟು ದುಡ್ಡು ಡಬ್ಲಿಂಗ್ ಮಾಡಿ ಕೊಡ್ತೀವಿ ಎಂದು ಖದೀಮರು ಪಂಗನಾಮ ಹಾಕಿದ್ದಾರೆ. ಆರು ತಿಂಗಳಲ್ಲಿ ಗ್ರಾಮವೊಂದರಲ್ಲಿ 60ಕ್ಕೂ ಹೆಚ್ಚು ಜನರಿಂದ 2 ಕೋಟಿಗೂ ಅಧಿಕ ಹಣ ಲೂಟಿ ಮಾಡಿದ್ದಾರೆ.

ಪೂಜೆ ಹೆಸರಲ್ಲಿ ಜನರಿಗೆ ಮಂಕು ಬೂದಿ

ನಿಮಗೆ ಕಷ್ಟ ಇದೆಯಾ? ಆರು ತಿಂಗಳಲ್ಲಿ ನಿಮ್ಮ ಕಷ್ಟ ಪರಿಹಾರ ಮಾಡ್ತೀವಿ ಎಂದು ಆಸೆ ತೋರಿಸಿ ವಂಚನೆ ಮಾಡಿದ್ದಾರೆ. ಮತ್ತೊಂದೆಡೆ ಈ ಖದೀಮರು ಮನೆಗೆ ಬಂದು ರಾತ್ರಿ ವೇಳೆ ಪೂಜೆ ಮಾಡಿ ಹಣ ಇಡ್ತಿದ್ರು. ಜನರಿಂದ ಹಣ ಸಂಗ್ರಹಿಸಿ ಎಲ್ಲರ ಸಮ್ಮುಖದಲ್ಲೇ ಎಲ್ಲರ ಮೊಬೈಲ್‌ ಫೋನ್ ಫ್ಲೈಟ್ ಮೂಡಿಗೆ ಹಾಕಿಸಿ, ಲೈಟ್ ಆಫ್ ಮಾಡಿ ಪೂಜೆ ಮಾಡಿ ನಂತರ ಬಾಕ್ಸ್ ವೊಂದರಲ್ಲಿ ಲಕ್ಷಾಂತರ ಹಣ ಇಟ್ಟು ಪ್ಯಾಕ್ ಮಾಡಬಹುದಾ ಎಂದು ಜನರನ್ನು ಕೇಳಿ ಬಳಿಕ ನೀವು ಹೊರಗೆ ಹೋಗಿ ನಾವು ಪೂಜೆ ಮಾಡಿ ಮತ್ತೆ ಪ್ಯಾಕ್ ಮಾಡಬೇಕು ಎಂದು ಜನರನ್ನು ಹೊರಗೆ ಕಳಿಸುತ್ತಿದ್ರು. ಆಮೇಲೆ ಇದನ್ನ 168 ದಿನಗಳವರೆಗೆ ತೆಗೆಯಬಾರದು ಆಮೇಲೆ ಇದರಲ್ಲಿನ ಹಣ 10 ಪಟ್ಟು ಹೆಚ್ಚಾಗುತ್ತೆ ಎಂದು ಹೇಳಿ ಮೋಸ ಮಾಡಿದ್ದಾರೆ. ಬಾಕ್ಸ್ ಓಪನ್ ಮಾಡಿದರೆ ಹಣ 10 ಪಟ್ಟು ಹೆಚ್ಚಾಗಿರುತ್ತೆ ಎಂದು ನಂಬಿದ ಜನ 168 ದಿನಗಳ ಬಳಿಕ ಬಾಕ್ಸ್ ಓಪನ್ ಮಾಡಿ ನೋಡಿದಾಗ ಹಣ ಮಾಯವಾಗಿದೆ. ಬಾಕ್ಸ್​ನಲ್ಲಿ ಊದಿನ ಕಟ್ಟಿಯ ಬಾಕ್ಸ್​ಗಳು ಪತ್ತೆಯಾಗಿವೆ.

 Vijayanagar News 3 arrested for looting 2 Crore money from villagers kannada news

ಇದನ್ನೂ ಓದಿ: ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್

ಇನ್ನು ಈ ಗ್ರಾಮದ ಜನರಿಗೆ ನ್ಯಾಯ ಹೇಳ್ತಿದ್ದವರಿಂದಲೇ ಮಹಾಮೋಸವಾಗಿದೆ ಎನ್ನಲಾಗುತ್ತಿದೆ. ತಾಂಡಾಗಳಲ್ಲಿ ಕಾರುಬಾರಿ ಎನ್ನೋ ಮನೆತನದವ್ರು ತಾಂಡಾದ ಜನ್ರಿಗೆ ನ್ಯಾಯ ಹೇಳುವಂತವರು. ಆ ಮನೆಯವರ ಮಾತು ಕೇಳಿ ಇದೀಗ ತಾಂಡಾದ‌ ನೂರಾರು ಜನರು ಮೋಸಕ್ಕೆ ಒಳಗಾಗಿದ್ದಾರೆ. ಮೋಸ ಹೋದವರಲ್ಲಿ ಒಬ್ಬರಾದ ಕಲ್ಲಹಳ್ಳಿ ತಾಂಡಾದ ಕುಮಾರ ನಾಯ್ಕ್ ಅವರು ಹೊಸಪೇಟೆ ಗ್ರಾಮೀಣ‌ ಠಾಣೆಗೆ‌ ದೂರು ನೀಡಿದ್ದಾರೆ.

ದೂರಿನ ಮೇರೆಗೆ ಮೂವರನ್ನ ಅರೆಸ್ಟ್ ಮಾಡಲಾಗಿದೆ. ರಾಜಸ್ಥಾನ ಮೂಲದ ಜಿತೇಂದ್ರ ಸಿಂಗ್, ಆತನಿಗೆ ಸಹಕರಿಸುತ್ತಿದ್ದ ಕಲ್ಲಹಳ್ಳಿ ಗ್ರಾಮದ ತುಕ್ಯಾ ನಾಯ್ಕ್, ಶಂಕು ನಾಯ್ಕ್ ನನ್ನು ಬಂಧಿಸಿ ಬಂಧಿತರಿಂದ‌ ಬರೋಬ್ಬರಿ 35 ಲಕ್ಷ ನಗದು ಹಣ, ನೋಟು ಎಣಿಸುವ 1 ಯಂತ್ರ, ಟಾವೆಲ್, ಜಮ್ಕಾನ ಜಪ್ತಿ ಮಾಡಲಾಗಿದೆ. ಜಿತೇಂದ್ರನ ಚಿತ್ರದುರ್ಗದ ಮನೆಯಲ್ಲಿಯೂ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಪ್ರಮುಖ ಆರೋಪಿಗಳಾದ ಕಲ್ಲಹಳ್ಳಿ ಗ್ರಾಮದ ಸ್ವಾಮಿ ನಾಯ್ಕ್, ಕಾರುಬಾರಿ ವೆಂಕ್ಯಾ ನಾಯ್ಕ್ ಎಸ್ಕೇಪ್ ಆಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ