AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijayanagara district: ಇಂದು ಕನ್ನಡ ನಾಡಿಗೆ ಸಂಭ್ರಮ- 6 ತಾಲೂಕಿನ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಗೆ ಅಧಿಕೃತ ಚಾಲನೆ

ನೂತನ ವಿಜಯನಗರ ಜಿಲ್ಲೆ ಉದ್ಘಾಟನೆ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ವಿದ್ಯುತ್ ದೀಪ ಅಲಂಕಾರದಿಂದ ಹೊಸಪೇಟೆ ನಗರ ಕಂಗೊಳಿಸುತ್ತಿದೆ. ಕಾರ್ಯಕ್ರಮ ವೀಕ್ಷಣೆಗೆ ಎಲ್ಇಡಿ ವ್ಯವಸ್ಥೆ ಮಾಡಲಾಗಿದೆ. ವಿಜಯನಗರ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿಯೂ ಎಲ್ಇಡಿ ವ್ಯವಸ್ಥೆ ಮಾಡಲಾಗಿದೆ.

Vijayanagara district: ಇಂದು ಕನ್ನಡ ನಾಡಿಗೆ ಸಂಭ್ರಮ- 6 ತಾಲೂಕಿನ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಗೆ ಅಧಿಕೃತ ಚಾಲನೆ
vijayanagara district: ಇಂದು ಕನ್ನಡ ನಾಡಿಗೆ ಸಂಭ್ರಮ- 6 ತಾಲೂಕುಗಳ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಗೆ ಅಧಿಕೃತ ಚಾಲನೆ
TV9 Web
| Edited By: |

Updated on:Oct 02, 2021 | 9:13 AM

Share

ಬಳ್ಳಾರಿ: ಇಂದು ದೇಶಾದ್ಯಂತ 153ನೇ ಗಾಂಧಿ ಜಯಂತಿ ಮತ್ತು ಲಾಲ್‌ ಬಹದ್ದೂರ್ ಶಾಸ್ತ್ರಿಯವರ 117ನೇ ಜಯಂತಿ ಆಚರಣೆ ಆಯೋಜಿಸಲಾಗಿದೆ. ಇದೇ ವೇಳೆ ರಾಜ್ಯದ 31 ನೇ ಜಿಲ್ಲೆಯಾಗಿ ನೂತನ ವಿಜಯನಗರ ಜಿಲ್ಲೆ ಇಂದು ಅಧಿಕೃತವಾಗಿ ಉದಯವಾದ ಸಂದರ್ಭವಾಗಿದೆ. 6 ತಾಲೂಕುಗಳ ರಾಜ್ಯದ 31 ನೇ ಜಿಲ್ಲೆಯಾಗಿ, ನೂತನ ವಿಜಯನಗರ ಜಿಲ್ಲೆಗೆ ಇಂದು ಅಧಿಕೃತ ಚಾಲನೆ ಸಿಗಲಿದೆ. ವಿಜಯನಗರ ಜಿಲ್ಲಾ ಉತ್ಸವ ಮತ್ತು ವಿಜಯನಗರ ಜಿಲ್ಲಾ ಉದ್ಘಾಟನಾ ಸಮಾರಂಭ ಇಂದು ಸಂಜೆ ಹೊಸಪೇಟೆಯ‌ ಜಿಲ್ಲಾ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆಯಲಿದೆ.

ಅದ್ದೂರಿ ಕಾರ್ಯಕ್ರಮಕ್ಕೆ ಹಂಪಿಯ ಮಾದರಿಯಲ್ಲಿ ಬೃಹತ್ ವೇದಿಕೆ ಸಿದ್ದಗೊಂಡಿದೆ. ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ನೂತನ ಜಿಲ್ಲೆಗೆ ಚಾಲನೆ ಸಿಗಲಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು, ಮಠಾಧೀಶರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸಂಜೆ‌ ವಡಕರಾಯ ದೇವಸ್ಥಾನದಿಂದ ರಥಬೀದಿಯಲ್ಲಿ‌ ವಿಜಯನಗರ ‌ವೈಭವ ಮೆರವಣಿಗೆ ಸಾಗಲಿದೆ. 80ಕ್ಕೂ‌ ಹೆಚ್ಚು ಕಲಾತಂಡಗಳು‌ ಭಾಗಿಯಾಗಲಿವೆ. ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಅವರಿಂದ‌ ಮೆರವಣಿಗೆಗೆ ಚಾಲನೆ ಸಿಗಲಿದೆ. ವಿಜಯನಗರ ಜಿಲ್ಲೆ ಉದ್ಘಾಟನೆ ಬಳಿಕ ರಾಜ್ಯ- ಹೊರ ರಾಜ್ಯದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ.

ನೂತನ ವಿಜಯನಗರ ಜಿಲ್ಲೆ ಉದ್ಘಾಟನೆ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ವಿದ್ಯುತ್ ದೀಪ ಅಲಂಕಾರದಿಂದ ಹೊಸಪೇಟೆ ನಗರ ಕಂಗೊಳಿಸುತ್ತಿದೆ. ಕಾರ್ಯಕ್ರಮ ವೀಕ್ಷಣೆಗೆ ಎಲ್ಇಡಿ ವ್ಯವಸ್ಥೆ ಮಾಡಲಾಗಿದೆ. ವಿಜಯನಗರ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿಯೂ ಎಲ್ಇಡಿ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆಗೂ ಅವಕಾಶ ಕಲ್ಪಿಸಲಾಗಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇಂದಿನಿಂದ Vijayanagara ‘ಸಾಮ್ರಾಜ್ಯ’ ದರ್ಬಾರ್! ವಿಜಯನಗರ ಜಿಲ್ಲೆಗೆ ಇಂದು CM Bommai ಚಾಲನೆ

Published On - 8:36 am, Sat, 2 October 21

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?