AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿರು ಬಣ್ಣಕ್ಕೆ ತಿರುಗಿದ ತುಂಗಭದ್ರಾ ಜಲಾಶಯ ನೀರು! ಇದು ಇಂದು ನಿನ್ನೆಯ ಕಥೆಯಲ್ಲ

ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಸೇರಿದಂತೆ ಆಂಧ್ರದ ಕೆಲ ಜಿಲ್ಲೆಗಳಿಗೆ ತುಂಗಭದ್ರಾ ಜಲಾಶಯದ ನೀರೇ ಆಧಾರ. ರೈತರ ಜೀವನಾಡಿಯ ಜೊತೆಗೆ ಕುಡಿಯುವ ನೀರನ್ನಾಗಿ ಇದನ್ನೆ ಬಳಸಲಾಗುತ್ತಿದೆ.

ಹಸಿರು ಬಣ್ಣಕ್ಕೆ ತಿರುಗಿದ ತುಂಗಭದ್ರಾ ಜಲಾಶಯ ನೀರು! ಇದು ಇಂದು ನಿನ್ನೆಯ ಕಥೆಯಲ್ಲ
ಹಸಿರು ಬಣ್ಣಕ್ಕೆ ತಿರುಗಿದ ನೀರು
TV9 Web
| Edited By: sandhya thejappa|

Updated on:Aug 28, 2021 | 3:05 PM

Share

ಬಳ್ಳಾರಿ: ನೀರು ಜೀವ ಜಲ ಎಂಬ ಮಾತು ಸವಕಲು ಎದ್ದು ಹೋಗಿದೆ. ಇಂತಹದೊಂದು ಭಾವನೆ ಬರಲು ಕಾರಣ ಜಲಮೂಲಗಳನ್ನು ರಕ್ಷಿಸಿಕೊಳ್ಳಲು ವಿಫಲರಾಗಿರುವುದು. ಕಳೆದ ಹಲವು ವರ್ಷಗಳಿಂದ ಕಲ್ಯಾಣ ಕರ್ನಾಟದ ಜಲಾಶಯವೊಂದರ ನೀರು ವಿಷಕಾರಿಯಾಗುತ್ತಿದೆ. ಈ ಭಾಗದ ಜನರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ನೀರು ಹಸಿರು ಬಣ್ಣಕ್ಕೆ ತಿರುಗುವುದು ಜನರ ಆತಂಕಕ್ಕೆ ಕಾರಣವಾಗಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯ, ಕರ್ನಾಟಕ ಆಂಧ್ರ ಸೇರಿದಂತೆ ಏಳೆಂಟು ಜಿಲ್ಲೆಗಳ ಜೀವನಾಡಿ. ಗಂಗಾ ಸ್ನಾನ ತುಂಗಾ ಪಾನ ಎಂಬ ಮಾತಿದೆ. ಆದರೆ ತುಂಗಭದ್ರಾ ಜಲಾಶಯದ ನೀರೇ ಈಗ ವಿಷವಾಗಿದೆ. ಇದು ಇಂದು ನಿನ್ನೆಯ ಕಥೆಯಲ್ಲ. ಜಲಾಶಯ ತುಂಬುವುದೊಂದೇ ತಡ ಒಂದು ತಿಂಗಳು ಕಳೆಯುತ್ತಿದ್ದಂತೆ ಇಡೀ ನೀರು ಹಸಿರು ಬಣ್ಣಕ್ಕೆ ತಿರುಗುತ್ತದೆ. ಜಲಾಶಯದ ಹಿನ್ನೀರು ಪ್ರದೇಶದಲ್ಲಿ ನೀರೆಲ್ಲಾ ಹಸಿರು ಬಣ್ಣಕ್ಕೆ ತಿರುಗಿ ನೀರು ಸಂಪೂರ್ಣವಾಗಿ ವಿಷಕಾರಿಯಾಗುತ್ತಿದೆ. ಪ್ರತಿ ವರ್ಷ ಅಕ್ಟೋಬರ್, ನವೆಂಬರ್ ತಿಂಗಳಲ್ಲಿ ಜಲಾಶಯ ನೀರು ಹಸಿರಾಗುತ್ತಿತ್ತು. ಆದರೆ ಈ ವರ್ಷ ಆಗಸ್ಟ್ ತಿಂಗಳಲ್ಲಿಯೇ ನೀರು ಹಸಿರು ಬಣ್ಣಕ್ಕೆ ತಿರುಗಿದೆ.

ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಸೇರಿದಂತೆ ಆಂಧ್ರದ ಕೆಲ ಜಿಲ್ಲೆಗಳಿಗೆ ತುಂಗಭದ್ರಾ ಜಲಾಶಯದ ನೀರೇ ಆಧಾರ. ರೈತರ ಜೀವನಾಡಿಯ ಜೊತೆಗೆ ಕುಡಿಯುವ ನೀರನ್ನಾಗಿ ಇದನ್ನೆ ಬಳಸಲಾಗುತ್ತಿದೆ. ಆದರೆ ಜಲಾಶಯದ ಕುಡಿಯುವ ನೀರು ಈಗ ವಿಷಕಾರಿಯಾಗುತ್ತಿದೆ. ಪ್ರತಿ ವರ್ಷ ನೀರು ಹಸಿರು ಬಣ್ಣಕ್ಕೆ ತಿರುಗುವುದು ಜನರ ಆತಂಕಕ್ಕೆ ಕಾರಣವಾಗಿದೆ. ಈ ವಿಷಕಾರಿ ನೀರು ಕೇವಲ ಮನುಷ್ಯರಿಗೆ ಮಾತ್ರ ಅಲ್ಲ, ನೀರಿನಲ್ಲಿರುವ ಜಲಚರಗಳಿಗೂ ಹಸಿರು ಬಣ್ಣದ ನೀರು ಕುತ್ತು ತಂದಿದೆ.

ಪಶ್ಚಿಮ ಘಟ್ಟದಲ್ಲಿ ಜನ್ಮ ತಾಳಿ ಅಲ್ಲಿಂದ ಹಲವು ಜಿಲ್ಲೆಗಳ ಮೂಲಕ ಹರಿದು ನೀರು ಜಲಾಶಯವನ್ನು ಸೇರುತ್ತದೆ. ಈ ನಿಟ್ಟಿನಲ್ಲಿ ಅಲ್ಲಿಂದ ಇಲ್ಲಿವರೆಗೆ ಸಾಕಷ್ಟು ಕಾರ್ಖಾನೆಗಳು ಇವೆ. ಜೊತೆಗೆ ತುಂಗಭದ್ರಾ ನದಿ ಪಾತ್ರದಲ್ಲಿ ಕೃಷಿ ಜಮೀನುಗಳಿವೆ. ಕಾರ್ಖಾನೆಗಳಿಂದ ನದಿಗೆ ಬಿಡುವ ವಿಷಕಾರಿ ತ್ಯಾಜ್ಯ, ಮತ್ತೊಂದೆಡೆ ಜಲಾನಯನ ಪ್ರದೇಶದಲ್ಲಿ ಕೃಷಿ ಭೂಮಿಯಲ್ಲಿ ಅತಿಹೆಚ್ಚು ರಸಗೊಬ್ಬರ ಹಾಗೂ ಔಷಧಿ ಬಳಕೆ ಮಾಡುವುದರಿಂದ ಇದರ ತ್ಯಾಜ್ಯದ ನೀರು ನೇರವಾಗಿ ನದಿಗೆ ಹರಿದು ಬರುತ್ತಿದೆ. ರಸಗೊಬ್ಬರ, ಕ್ರಿಮಿನಾಶಕ ಹಾಗೂ ಕೈಗಾರಿಕೆಗಳ ತ್ಯಾಜ್ಯದಿಂದ ಸಯನೋ ಬ್ಯಾಕ್ಟೀರಿಯಾ (blue green algae) ಉತ್ಪತ್ತಿಯಾಗುತ್ತದೆ.

ಜಲಾಶಯ ಭರ್ತಿಯಾದ ಸಂದರ್ಭದಲ್ಲಿ ಮೋಡ ಕವಿದ ವಾತವಾರಣವಿದ್ದು, ಈ ವೇಳೆ ಬಿರುಬಿಸಿಲು ಬಂದಾಗ ಅತಿಹೆಚ್ಚು ಸಯಾನೋ ಬ್ಯಾಕ್ಟೀರಿಯಾಗಳು ಉತ್ಪತ್ತಿಯಾಗುತ್ತವೆ. ಆಗ ನೀರು ಹಸಿರು ಬಣ್ಣಕ್ಕೆ ತಿರುಗುತ್ತದೆ. ಈ ನೀರನ್ನ ನೇರವಾಗಿ ಜಾನುವಾರು, ಜನರು ಸೇವಿಸಿದರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಜೊತೆಗೆ ಈ ನೀರನ್ನ ಬಳಕೆ ಮಾಡಿದರೆ ಚರ್ಮರೋಗ ಬರುತ್ತದೆ. ಪ್ರತಿ ವರ್ಷ ಜಲಾಶಯದ ನೀರು ಹಸಿರು ಬಣ್ಣಕ್ಕೆ ತಿರುಗುತ್ತದೆ. ಕೈಗಾರಿಕೆಗಳ ತ್ಯಾಜ್ಯ ಹಾಗೂ ಜಲಾನಯನ ಕೃಷಿ ಪ್ರದೇಶದ ರಸಗೊಬ್ಬರ, ಕ್ರಿಮಿನಾಶಕ ತ್ಯಾಜ್ಯದ ನೀರು ನದಿಗೆ ಸೇರುವುದೇ ಇದಕ್ಕೆ ಕಾರಣ ಅಂತ ಪರಿಸರ ಹಾಗೂ ವನ್ಯಜೀವಿ ತಜ್ಞ ಡಾ.ಸಮದ್ ಕೊಟ್ಟೂರು ಹೇಳಿದರು.

ಇದನ್ನೂ ಓದಿ

ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಮುಂಬೈಗೆ ತೆರಳಿದ ಸಂತ್ರಸ್ತೆ; ಮೈಸೂರಿನತ್ತ ಹೊರಟ ಡಿಐಜಿ ಪ್ರವೀಣ್ ಸೂದ್

‘ಮಹಿಳೆ ಧರಿಸುವ ಉಡುಪುಗಳು ರೇಪ್​ಗೆ ಕಾರಣ ಅಲ್ಲ’: ಗ್ಯಾಂಗ್​ ರೇಪ್​ ಪ್ರಕರಣಕ್ಕೆ ಕವಿತಾ ಲಂಕೇಶ್​ ಪ್ರತಿಕ್ರಿಯೆ

(water of the Tungabhadra Reservoir has turned green)

Published On - 10:57 am, Sat, 28 August 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​