AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಯಾವಾಗ ಯಾವಾಗ ಗಾಯ ಆಗಿದೆಯೋ, ಕೈ ಮುರಿದಿದೆಯೋ ಆಗೆಲ್ಲಾ ನನಗೆ ಅದೃಷ್ಟ ಒಲಿದಿದೆ! ಕಾಂಗ್ರೆಸ್ ಶಾಸಕ ಇ ತುಕಾರಾಂ

ಸಚಿವ ಸಿ.ಸಿ ಪಾಟೀಲ ಕಾರ್ಯವೈಖರಿಗೆ ಶಾಸಕ ತುಕಾರಾಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವ ಸಿ.ಸಿ ಪಾಟೀಲ್ ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳನ್ನ ಅಳವಡಿಸಿಕೊಂಡ ಸಚಿವರಾಗಿದ್ದಾರೆ.

ನನಗೆ ಯಾವಾಗ ಯಾವಾಗ ಗಾಯ ಆಗಿದೆಯೋ, ಕೈ ಮುರಿದಿದೆಯೋ ಆಗೆಲ್ಲಾ ನನಗೆ ಅದೃಷ್ಟ ಒಲಿದಿದೆ!  ಕಾಂಗ್ರೆಸ್ ಶಾಸಕ ಇ ತುಕಾರಾಂ
ಇ ತುಕಾರಾಂ
TV9 Web
| Edited By: ಆಯೇಷಾ ಬಾನು|

Updated on: Aug 04, 2022 | 3:03 PM

Share

ಬಳ್ಳಾರಿ: ಜಿಲ್ಲೆಯಲ್ಲಿ ಇಂದು ಲೋಕೋಪಯೋಗಿ ನೂತನ ಗೆಸ್ಟ್ ಹೌಸ್ ಉದ್ಘಾಟನೆ ಮಾಡಲಾಗಿದೆ. ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಡೂರು ಶಾಸಕ ಇ ತುಕಾರಾಂ( E Tukaram) ಸಚಿವ ಸಿ.ಸಿ ಪಾಟೀಲರನ್ನು(CC Patil) ಹಾಡಿ ಹೊಗಳಿದ್ದಾರೆ. ಹಾಗೂ ತನ್ನ ಕೈ ಮುರಿತದ ಬಗ್ಗೆ ನಗೆ ಚಟಾಕಿ ಹಾರಿಸಿದ್ದಾರೆ.

ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಇ ತುಕಾರಾಂ, ನನ್ನ ಕೈ ಮುರಿದಿದೆ. ಹೀಗಾಗಿ ಬ್ಯಾಂಡೇಜ್ ಹಾಕಿದ್ದೇನೆ. ನನಗೆ ಯಾವಾಗ ಗಾಯ ಆಗಿದೆಯ್ಯೋ, ಕೈ ಮುರಿದಿದೇಯ್ಯೋ ಆಗೆಲ್ಲಾ ನನಗೆ ಅದೃಷ್ಟ ಒಲಿದಿದೆ. ಇದು ಸಿದ್ದರಾಮೋತ್ಸವದ ಎಪೆಕ್ಟ್ ಅಲ್ಲ. ಹಿಂದೆ ಕೈ ಮುರಿದಾಗ ಸಚಿವ ಆದೆ. ನಂತರ ಸಿದ್ದರಾಮಯ್ಯನವರ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಆದೆ. ಈಗ ಕೈಗೆ ಕ್ರಾಕ್ ಆಗಿದೆ. ಮುಂದೆನೂ ಅದೃಷ್ಟ ಒಲಿಯಬಹುದು ಎಂದು ಶಾಸಕ ಇ ತುಕಾರಾಂ ನಗೆ ಚಟಾಕಿ ಹಾರಿಸಿದ್ರು.

ಸಚಿವ ಸಿ.ಸಿ ಪಾಟೀಲ ಕಾರ್ಯವೈಖರಿಗೆ ಶಾಸಕ ತುಕಾರಾಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವ ಸಿ.ಸಿ ಪಾಟೀಲ್ ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳನ್ನ ಅಳವಡಿಸಿಕೊಂಡ ಸಚಿವರಾಗಿದ್ದಾರೆ. ಸಿ.ಸಿ ಪಾಟೀಲ ಎಲ್ಲ ಪಕ್ಷದ ಶಾಸಕರಿಗೂ ಸಮಾನವಾಗಿ ಅನುದಾನವನ್ನ ನೀಡಿದ್ದಾರೆ. ಬಸವಣ್ಣನವರ ಪ್ರಕಾರ ಕಾಯಕವೇ ಕೈಲಾಸ ಎಂದು ಕಾರ್ಯ ಮಾಡುತ್ತಿದ್ದಾರೆ ಎಂದು ಶಾಸಕ ಇ ತುಕಾರಾಂ ಸಚಿವ ಸಿ.ಸಿ ಪಾಟೀಲ್ರನ್ನ ಹಾಡಿ ಹೊಗಳಿದ್ದಾರೆ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ