AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಾಡ ಪ್ರಸಿದ್ಧ ಎರಿತಾತ ಮಠದಲ್ಲಿ ಭಕ್ತರ ಕಾಣಿಕೆ ರಿಜಿಸ್ಟರ್ ಸಮೇತ ಕ್ಯಾಶಿಯರ್ ನಾಪತ್ತೆ; ತನಿಖೆಗೆ ಆದೇಶಿಸಿದ ದತ್ತಿ ಇಲಾಖೆ

ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿಭಾಗಕ್ಕೆ ಹೊಂದಿಕೊಂಡಿರುವ ಇತಿಹಾಸ ಪ್ರಸಿದ್ಧ ಎರಿತಾತ ಮಠ ಎರಿತಾತನವರ ಪವಾಡಗಳ ಸಿದ್ಧಿ ಸ್ಥಳವೆಂದೇ ಖ್ಯಾತಿ ಗಳಿಸಿದೆ. ಸಹಸ್ರಾರು ಸಂಖ್ಯೆಯಲ್ಲಿ ಬರುವ ಭಕ್ತರು, ಕಾಣಿಕೆಯಾಗಿ ಹಣ, ಬೆಳ್ಳಿ, ಬಂಗಾರ ನೀಡ್ತಾರೆ. ಆದ್ರೀಗ ಭಕ್ತರು ನೀಡೋ ಕಾಣಿಕೆ ವಿಚಾರದಲ್ಲಿ ಗೋಲ್ ಮಾಲ್ ನಡೆದಿರುವುದು ಬೆಳಕಿಗೆ ಬಂದಿದೆ.

ಪವಾಡ ಪ್ರಸಿದ್ಧ ಎರಿತಾತ ಮಠದಲ್ಲಿ ಭಕ್ತರ ಕಾಣಿಕೆ ರಿಜಿಸ್ಟರ್ ಸಮೇತ ಕ್ಯಾಶಿಯರ್ ನಾಪತ್ತೆ; ತನಿಖೆಗೆ ಆದೇಶಿಸಿದ ದತ್ತಿ ಇಲಾಖೆ
ಎರಿತಾತ ಮಠ
TV9 Web
| Edited By: |

Updated on:Apr 15, 2022 | 7:47 AM

Share

ಬಳ್ಳಾರಿ: ನೂರಾರು ವರ್ಷಗಳ ಇತಿಹಾಸವಿರುವ ಸಾಕಷ್ಟು ಪ್ರಸಿದ್ಧಿ ಪಡೆದಿರುವ ಎರಿತಾತ ಮಠದಲ್ಲಿ ವಿವಾದವೊಂದು ಹುಟ್ಟಿಕೊಂಡಿದೆ. ಎರಡು ರಾಜ್ಯಗಳ ಗಡಿಭಾಗಕ್ಕೆ ಹೊಂದಿಕೊಂಡಿರುವ ಆ ಮಠಕ್ಕೆ ನಿತ್ಯ ಸಾವಿರಾರು ಭಕ್ತರು ಬರ್ತಾರೆ. ಆದ್ರೆ ಭಕ್ತರು ಲೆಕ್ಕವಿಲ್ಲದಷ್ಟು ಕೊಟ್ಟ ದೇಣಿಗೆ, ಬೆಳ್ಳಿ, ಬಂಗಾರ ನಾಪತ್ತೆಯಾಗಿದ್ದು ದೊಡ್ಡ ವಿವಾದವೇ ಸೃಷ್ಟಿಯಾಗಿದೆ. ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿಭಾಗಕ್ಕೆ ಹೊಂದಿಕೊಂಡಿರುವ ಇತಿಹಾಸ ಪ್ರಸಿದ್ಧ ಎರಿತಾತ ಮಠ ಎರಿತಾತನವರ ಪವಾಡಗಳ ಸಿದ್ಧಿ ಸ್ಥಳವೆಂದೇ ಖ್ಯಾತಿ ಗಳಿಸಿದೆ. ಈ ಮಠಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು, ನಿತ್ಯ ಭಕ್ತರು ಆಗಮಿಸಿ ದರ್ಶನ ಪಡೆದು ಪಾವನರಾಗ್ತಾರೆ. ಸಹಸ್ರಾರು ಸಂಖ್ಯೆಯಲ್ಲಿ ಬರುವ ಭಕ್ತರು, ಕಾಣಿಕೆಯಾಗಿ ಹಣ, ಬೆಳ್ಳಿ, ಬಂಗಾರ ನೀಡ್ತಾರೆ. ಆದ್ರೀಗ ಭಕ್ತರು ನೀಡೋ ಕಾಣಿಕೆ ವಿಚಾರದಲ್ಲಿ ಗೋಲ್ ಮಾಲ್ ನಡೆದಿರುವುದು ಬೆಳಕಿಗೆ ಬಂದಿದೆ.

ಅಂದಹಾಗೆ ಈ ಮಠದ ಟ್ರಸ್ಟ್‌ನ ಅಧ್ಯಕ್ಷರು-ಕ್ಯಾಶಿಯರ್ ನಡುವೆ ಹಲವು ವರ್ಷಗಳಿಂದ ಭಿನ್ನಭಿಪ್ರಾಯ ಇದೆಯಂತೆ. ಇವರಿಬ್ಬರ ಭಿನ್ನಾಭಿಪ್ರಾಯದಿಂದಲೇ ಮಠದಲ್ಲಿ ಈ ಹಗರಣ ಬೆಳಕಿಗೆ ಬಂದಿದೆ. ಮಠಕ್ಕೆ ಕಾಣಿಕೆ, ದೇಣಿಗೆಯಾಗಿ ಬರುವ ಬೆಳ್ಳಿ, ಬಂಗಾರ, ಹಣದ ಲೆಕ್ಕವಿರುವ ರಿಜಿಸ್ಟರ್ ನೊಂದಿಗೆ ಕ್ಯಾಶಿಯರ್ ವಿರುಪಾಕ್ಷಗೌಡ ನಾಪತ್ತೆಯಾಗಿದ್ದಾರೆ ಅಂತಾ ಟ್ರಸ್ಟ್ ನ ಅಧ್ಯಕ್ಷರೇ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಆದ್ರೆ, ಗ್ರಾಮದ ಮುಖಂಡರು ಕ್ಯಾಶಿಯರ್ ವಿರೂಪಾಕ್ಷಗೌಡ ಹಾಗೂ ಮಠದ ಟ್ರಸ್ಟ್ರ್ ಅಧ್ಯಕ್ಷ ಬಾಳನಗೌಡರ ಅಕ್ರಮದ ಬಗ್ಗೆ ತನಿಖೆಯಾಗ ಬೇಕೆಂದು ಧಾರ್ಮಿಕ ದತ್ತಿ ಇಲಾಖೆಗೆ ದೂರು ನೀಡಿದ್ದಾರೆ.

ಗ್ರಾಮದ ಮುಖಂಡರು ನೀಡಿರೋ ದೂರಿನನ್ವಯ ಧಾರ್ಮಿಕ ದತ್ತಿ ಇಲಾಖೆ ತನಿಖೆಗೆ ಆದೇಶಿಸಿದ್ದು, ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಇನ್ನು ಮಠದ ಅಕೌಂಟೆಂಟ್‌ನ ಪ್ರಶ್ನೆ ಮಾಡಿದ್ರೆ, ಹೌದು. ಕ್ಯಾಶಿಯರ್ ನಾಪತ್ತೆ ಆಗಿದ್ದಾರೆ. ಆದ್ರೆ ಎಷ್ಟು ಹಣ ಬೆಳ್ಳಿ ಬಂಗಾರ ಇದೆ ಅನ್ನೋದು ಅಧ್ಯಕ್ಷರು, ಕ್ಯಾಶಿಯರ್‌ಗೆ ಮಾತ್ರ ಗೊತ್ತು ಅಂತಾರೆ. ಒಟ್ನಲ್ಲಿ ಸೂಕ್ತ ತನಿಖೆ ಬಳಿಕ ಯಾರ್ದು ತಪ್ಪು ಯಾರ್ದು ಸತ್ಯ ಅನ್ನೋದು ಬಯಲಾಗಲಿದೆ. ಆಗ ಮಠದ ಅಧ್ಯಕ್ಷರ ಹಾಗೂ ಕ್ಯಾಶಿಯರ್ ನಿಜಬಣ್ಣ ಬೆಳಕಿಗೆ ಬರಲಿದೆ.

ವರದಿ: ವೀರಪ್ಪ, ಟಿವಿ9 ಬಳ್ಳಾರಿ

yerrithatha mutt

ಎರಿತಾತ ಮಠ

ಇದನ್ನೂ ಓದಿ: Bengaluru Rains: ಕಾಮಾಕ್ಯ ಬಡಾವಣೆಯಲ್ಲಿ 50ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ರಾಜಕಾಲುವೆ ನೀರು, ಕೊಚ್ಚಿ ಹೋದ ವಾಹನಗಳು

Gold Price Today: ಚಿನ್ನದ ಬೆಲೆ ಮತ್ತೆ ಕೊಂಚ ಏರಿಕೆ; ಬೆಳ್ಳಿ ದರ 700 ರೂ. ಹೆಚ್ಚಳ

Published On - 7:46 am, Fri, 15 April 22

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!