AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಾಡ ಪ್ರಸಿದ್ಧ ಎರಿತಾತ ಮಠದಲ್ಲಿ ಭಕ್ತರ ಕಾಣಿಕೆ ರಿಜಿಸ್ಟರ್ ಸಮೇತ ಕ್ಯಾಶಿಯರ್ ನಾಪತ್ತೆ; ತನಿಖೆಗೆ ಆದೇಶಿಸಿದ ದತ್ತಿ ಇಲಾಖೆ

ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿಭಾಗಕ್ಕೆ ಹೊಂದಿಕೊಂಡಿರುವ ಇತಿಹಾಸ ಪ್ರಸಿದ್ಧ ಎರಿತಾತ ಮಠ ಎರಿತಾತನವರ ಪವಾಡಗಳ ಸಿದ್ಧಿ ಸ್ಥಳವೆಂದೇ ಖ್ಯಾತಿ ಗಳಿಸಿದೆ. ಸಹಸ್ರಾರು ಸಂಖ್ಯೆಯಲ್ಲಿ ಬರುವ ಭಕ್ತರು, ಕಾಣಿಕೆಯಾಗಿ ಹಣ, ಬೆಳ್ಳಿ, ಬಂಗಾರ ನೀಡ್ತಾರೆ. ಆದ್ರೀಗ ಭಕ್ತರು ನೀಡೋ ಕಾಣಿಕೆ ವಿಚಾರದಲ್ಲಿ ಗೋಲ್ ಮಾಲ್ ನಡೆದಿರುವುದು ಬೆಳಕಿಗೆ ಬಂದಿದೆ.

ಪವಾಡ ಪ್ರಸಿದ್ಧ ಎರಿತಾತ ಮಠದಲ್ಲಿ ಭಕ್ತರ ಕಾಣಿಕೆ ರಿಜಿಸ್ಟರ್ ಸಮೇತ ಕ್ಯಾಶಿಯರ್ ನಾಪತ್ತೆ; ತನಿಖೆಗೆ ಆದೇಶಿಸಿದ ದತ್ತಿ ಇಲಾಖೆ
ಎರಿತಾತ ಮಠ
TV9 Web
| Edited By: |

Updated on:Apr 15, 2022 | 7:47 AM

Share

ಬಳ್ಳಾರಿ: ನೂರಾರು ವರ್ಷಗಳ ಇತಿಹಾಸವಿರುವ ಸಾಕಷ್ಟು ಪ್ರಸಿದ್ಧಿ ಪಡೆದಿರುವ ಎರಿತಾತ ಮಠದಲ್ಲಿ ವಿವಾದವೊಂದು ಹುಟ್ಟಿಕೊಂಡಿದೆ. ಎರಡು ರಾಜ್ಯಗಳ ಗಡಿಭಾಗಕ್ಕೆ ಹೊಂದಿಕೊಂಡಿರುವ ಆ ಮಠಕ್ಕೆ ನಿತ್ಯ ಸಾವಿರಾರು ಭಕ್ತರು ಬರ್ತಾರೆ. ಆದ್ರೆ ಭಕ್ತರು ಲೆಕ್ಕವಿಲ್ಲದಷ್ಟು ಕೊಟ್ಟ ದೇಣಿಗೆ, ಬೆಳ್ಳಿ, ಬಂಗಾರ ನಾಪತ್ತೆಯಾಗಿದ್ದು ದೊಡ್ಡ ವಿವಾದವೇ ಸೃಷ್ಟಿಯಾಗಿದೆ. ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿಭಾಗಕ್ಕೆ ಹೊಂದಿಕೊಂಡಿರುವ ಇತಿಹಾಸ ಪ್ರಸಿದ್ಧ ಎರಿತಾತ ಮಠ ಎರಿತಾತನವರ ಪವಾಡಗಳ ಸಿದ್ಧಿ ಸ್ಥಳವೆಂದೇ ಖ್ಯಾತಿ ಗಳಿಸಿದೆ. ಈ ಮಠಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು, ನಿತ್ಯ ಭಕ್ತರು ಆಗಮಿಸಿ ದರ್ಶನ ಪಡೆದು ಪಾವನರಾಗ್ತಾರೆ. ಸಹಸ್ರಾರು ಸಂಖ್ಯೆಯಲ್ಲಿ ಬರುವ ಭಕ್ತರು, ಕಾಣಿಕೆಯಾಗಿ ಹಣ, ಬೆಳ್ಳಿ, ಬಂಗಾರ ನೀಡ್ತಾರೆ. ಆದ್ರೀಗ ಭಕ್ತರು ನೀಡೋ ಕಾಣಿಕೆ ವಿಚಾರದಲ್ಲಿ ಗೋಲ್ ಮಾಲ್ ನಡೆದಿರುವುದು ಬೆಳಕಿಗೆ ಬಂದಿದೆ.

ಅಂದಹಾಗೆ ಈ ಮಠದ ಟ್ರಸ್ಟ್‌ನ ಅಧ್ಯಕ್ಷರು-ಕ್ಯಾಶಿಯರ್ ನಡುವೆ ಹಲವು ವರ್ಷಗಳಿಂದ ಭಿನ್ನಭಿಪ್ರಾಯ ಇದೆಯಂತೆ. ಇವರಿಬ್ಬರ ಭಿನ್ನಾಭಿಪ್ರಾಯದಿಂದಲೇ ಮಠದಲ್ಲಿ ಈ ಹಗರಣ ಬೆಳಕಿಗೆ ಬಂದಿದೆ. ಮಠಕ್ಕೆ ಕಾಣಿಕೆ, ದೇಣಿಗೆಯಾಗಿ ಬರುವ ಬೆಳ್ಳಿ, ಬಂಗಾರ, ಹಣದ ಲೆಕ್ಕವಿರುವ ರಿಜಿಸ್ಟರ್ ನೊಂದಿಗೆ ಕ್ಯಾಶಿಯರ್ ವಿರುಪಾಕ್ಷಗೌಡ ನಾಪತ್ತೆಯಾಗಿದ್ದಾರೆ ಅಂತಾ ಟ್ರಸ್ಟ್ ನ ಅಧ್ಯಕ್ಷರೇ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಆದ್ರೆ, ಗ್ರಾಮದ ಮುಖಂಡರು ಕ್ಯಾಶಿಯರ್ ವಿರೂಪಾಕ್ಷಗೌಡ ಹಾಗೂ ಮಠದ ಟ್ರಸ್ಟ್ರ್ ಅಧ್ಯಕ್ಷ ಬಾಳನಗೌಡರ ಅಕ್ರಮದ ಬಗ್ಗೆ ತನಿಖೆಯಾಗ ಬೇಕೆಂದು ಧಾರ್ಮಿಕ ದತ್ತಿ ಇಲಾಖೆಗೆ ದೂರು ನೀಡಿದ್ದಾರೆ.

ಗ್ರಾಮದ ಮುಖಂಡರು ನೀಡಿರೋ ದೂರಿನನ್ವಯ ಧಾರ್ಮಿಕ ದತ್ತಿ ಇಲಾಖೆ ತನಿಖೆಗೆ ಆದೇಶಿಸಿದ್ದು, ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಇನ್ನು ಮಠದ ಅಕೌಂಟೆಂಟ್‌ನ ಪ್ರಶ್ನೆ ಮಾಡಿದ್ರೆ, ಹೌದು. ಕ್ಯಾಶಿಯರ್ ನಾಪತ್ತೆ ಆಗಿದ್ದಾರೆ. ಆದ್ರೆ ಎಷ್ಟು ಹಣ ಬೆಳ್ಳಿ ಬಂಗಾರ ಇದೆ ಅನ್ನೋದು ಅಧ್ಯಕ್ಷರು, ಕ್ಯಾಶಿಯರ್‌ಗೆ ಮಾತ್ರ ಗೊತ್ತು ಅಂತಾರೆ. ಒಟ್ನಲ್ಲಿ ಸೂಕ್ತ ತನಿಖೆ ಬಳಿಕ ಯಾರ್ದು ತಪ್ಪು ಯಾರ್ದು ಸತ್ಯ ಅನ್ನೋದು ಬಯಲಾಗಲಿದೆ. ಆಗ ಮಠದ ಅಧ್ಯಕ್ಷರ ಹಾಗೂ ಕ್ಯಾಶಿಯರ್ ನಿಜಬಣ್ಣ ಬೆಳಕಿಗೆ ಬರಲಿದೆ.

ವರದಿ: ವೀರಪ್ಪ, ಟಿವಿ9 ಬಳ್ಳಾರಿ

yerrithatha mutt

ಎರಿತಾತ ಮಠ

ಇದನ್ನೂ ಓದಿ: Bengaluru Rains: ಕಾಮಾಕ್ಯ ಬಡಾವಣೆಯಲ್ಲಿ 50ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ರಾಜಕಾಲುವೆ ನೀರು, ಕೊಚ್ಚಿ ಹೋದ ವಾಹನಗಳು

Gold Price Today: ಚಿನ್ನದ ಬೆಲೆ ಮತ್ತೆ ಕೊಂಚ ಏರಿಕೆ; ಬೆಳ್ಳಿ ದರ 700 ರೂ. ಹೆಚ್ಚಳ

Published On - 7:46 am, Fri, 15 April 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?