AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹುತಿ: ಆಕಸ್ಮಿಕ ಬೆಂಕಿಗೆ ಬಾಳೆ ತೋಟ ಭಸ್ಮ; 90 ಟನ್ ಇಳುವರಿ ನಷ್ಟ ಅನುಭವಿಸಿದ ಕೋಲಾರ ರೈತ

ಸಾಲ ಮಾಡಿ ಬೆಳಿದಿದ್ದ ಬಾಳೆಯನ್ನು ಇನ್ನೇನು ಕಿತ್ತು ಮಾರುಕಟ್ಟೆಗೆ ಮಾರಟ ಮಾಡಬೇಕಿತ್ತು. ಈ ಮಧ್ಯೆ ಫಸಲು ಬಂದು ತಮ್ಮ ಕಷ್ಟಗಳೆಲ್ಲಾ ನಿವಾರಣೆಯಾಗುತ್ತದೆ ಎಂದುಕೊಂಡಿದ್ದ ರೈತನ ಬಾಳೆ ತೋಟ ಬೆಂಕಿಗಾಹುತಿಯಾಗಿದ್ದು, ಇದು ರೈತನನ್ನ ಮತ್ತಷ್ಟು ಸಂಕಷ್ಟಕ್ಕೆ ದೂಡುವಂತೆ ಮಾಡಿದೆ.

ಆಹುತಿ: ಆಕಸ್ಮಿಕ ಬೆಂಕಿಗೆ ಬಾಳೆ ತೋಟ ಭಸ್ಮ; 90 ಟನ್ ಇಳುವರಿ ನಷ್ಟ ಅನುಭವಿಸಿದ ಕೋಲಾರ ರೈತ
ಸುಟ್ಟು ಕರಕಲಾಗಿರುವ ಬಾಳೆ ತೋಟ
sandhya thejappa
|

Updated on: Mar 17, 2021 | 4:49 PM

Share

ಕೋಲಾರ: ಕಟಾವಿಗೆ ಬಂದಿದ್ದ ಬಾಳೆ ಬೆಳೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸುಮಾರು 5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ಬೆಳೆ ಸುಟ್ಟು ಭಸ್ಮವಾಗಿದೆ. ಲಕ್ಷಾಂತರ ರೂಪಾಯಿ ಆದಾಯದ ನಿರೀಕ್ಷೆಯಲ್ಲಿದ್ದ ರೈತರೊಬ್ಬರು ಬೆಳೆಯೂ ಇಲ್ಲದೆ, ಪರಿಹಾರವೂ ಇಲ್ಲದೆ ಕಂಗಾಲಾಗಿದ್ದಾರೆ. ಬಾಳೆ ಬೆಳೆ ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಕೋಲಾರದ ಕಾಕಿನತ್ತ ಗ್ರಾಮದಲ್ಲಿ ನಡೆದಿದೆ. ರೈತ ಕೃಷ್ಣಪ್ಪ ಎಂಬುವವರಿಗೆ ಸೇರಿದ 5 ಎಕರೆ ಬಾಳೆ ತೋಟಕ್ಕೆ ಯಾರೋ ಕಿಡಿಗೇಡಿಗಳು ಪಕ್ಕದ ಜಮೀನಿನಲ್ಲಿ ಬೆಳೆದು ನಿಂತಿದ್ದ ಒಣ ಹುಲ್ಲಿಗೆ ಬೆಂಕಿ ಹೊತ್ತಿಸಿರುವ ಅನುಮಾನವಿದೆ. ಇದರಿಂದ ಆಕಸ್ಮಿಕವಾಗಿ ಬಾಳೆ ತೋಟಕ್ಕೆ ಬೆಂಕಿ ಆವರಿಸಿದ್ದು, 5 ಎಕರೆ ವಿಸ್ತೀರ್ಣದಲ್ಲಿ ಬೆಳೆದಿದ್ದ ಬಾಳೆ ತೋಟ ಬೆಂಕಿಗಾಹುತಿಯಾಗಿದೆ.

ಸಾಲ ಮಾಡಿ ಬೆಳಿದಿದ್ದ ಬಾಳೆಯನ್ನು ಇನ್ನೇನು ಕಿತ್ತು ಮಾರುಕಟ್ಟೆಗೆ ಮಾರಟ ಮಾಡಬೇಕಿತ್ತು. ಈ ಮಧ್ಯೆ ಫಸಲು ಬಂದು ತಮ್ಮ ಕಷ್ಟಗಳೆಲ್ಲಾ ನಿವಾರಣೆಯಾಗುತ್ತದೆ ಎಂದುಕೊಂಡಿದ್ದ ರೈತನ ಬಾಳೆ ತೋಟ ಬೆಂಕಿಗಾಹುತಿಯಾಗಿದ್ದು, ಇದು ರೈತನನ್ನ ಮತ್ತಷ್ಟು ಸಂಕಷ್ಟಕ್ಕೆ ದೂಡುವಂತೆ ಮಾಡಿದೆ.

ಈಗಾಗಲೇ ಜಿಲ್ಲೆಯಲ್ಲಿ ರೈತರು ಮಳೆಯಿಲ್ಲದೆ ಕಂಗಾಲಾಗಿದ್ದಾರೆ. ಇಷ್ಟೆಲ್ಲಾ ಸಂಕಷ್ಟದ ಮಧ್ಯೆ ಬಾಳೆ ಬೆಳೆದು ಲಾಭದ ನಿರೀಕ್ಷೆಯಲ್ಲಿದ್ದ ರೈತನ ಪರಿಸ್ಥಿತಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತ್ತಾಗಿದೆ. ಬಾಳೆ ತೋಟ ಮಾತ್ರವಲ್ಲದೆ ಬಾಳೆ ತೋಟದಲ್ಲಿ ಅಳವಡಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಿಪ್ ಹಾಗೂ ಸ್ಪ್ರಿಂಕ್ಲರ್​ಗಳು ಸಹ ಬೆಂಕಿಗಾಹುತಿಯಾಗಿವೆ. ವಿಷಯ ತಿಳಿದ ಸ್ಥಳೀಯರು ಹಾಗು ಕೃಷ್ಣಪ್ಪ ಬೆಂಕಿ ನಂದಿಸುವ ಕಾರ್ಯ ಮಾಡಿದ್ದರೂ ಬೆಂಕಿಯ ಕೆನ್ನಾಲಿಗೆಯಿಂದ ಸುಮಾರು 90 ಟನ್ನಷ್ಟು ಇಳುವರಿ ನಷ್ಟವಾಗಿದೆ.

ಸುಟ್ಟು ಹೋಗಿರುವ ಬಾಳೆ ಗೊನೆ

5 ಎಕರೆ ವಿಸ್ತೀರ್ಣದಲ್ಲಿ ಬೆಳೆದಿದ್ದ ಬಾಳೆ ತೋಟ ಬೆಂಕಿಗಾಹುತಿಯಾಗಿದೆ

ಸದ್ಯ ಈ ಪ್ರಕರಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ವಿಷಯ ತಿಳಿದ ತೋಟಗಾರಿಕೆ ಇಲಾಖೆ ಅಧಿಕಾರಿಗಳ ತಂಡ ಬಾಳೆ ತೋಟಕ್ಕೆ ಭೇಟಿ ನೀಡಿದೆ. ಉಪ ನಿರ್ದೇಶಕ ಮಂಜುನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ನಷ್ಟಕ್ಕೊಳಗಾದ ತೋಟವನ್ನು ಪರಿಶೀಲನೆ ನಡೆಸಿ ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

ಬೆಂಕಿಯ ಕೆನ್ನಾಲಿಗೆಯಿಂದ ಸುಮಾರು 90 ಟನ್ನಷ್ಟು ಇಳುವರಿ ನಷ್ಟವಾಗಿದೆ

ಇದನ್ನೂ ಓದಿ

ಕರ್ನಾಟಕ ವಿಶ್ವವಿದ್ಯಾಲಯದ ಮೆರುಗನ್ನು ಹೆಚ್ಚಿಸಲಿದೆಯಾ 300 ಕೆಜಿ ತೂಕದ ತಿಮಿಂಗಿಲದ ಅಸ್ಥಿಪಂಜರ?

ಗರ್ಭಪಾತ ಅವಧಿಯ ಮಿತಿ ಹೆಚ್ಚಳದ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ ​; 24 ವಾರಗಳ ಭ್ರೂಣ ತೆಗೆಯಲು ವಿಶೇಷ ಸಂದರ್ಭದಲ್ಲಿ ಅನುಮತಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ