AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರದಲ್ಲಿ ಸಫಾರಿ ದರ ಏರಿಕೆ; ಕೊರೊನಾ ನಡುವೆ ದರ ಹೆಚ್ಚಳಕ್ಕೆ ಪ್ರವಾಸಿಗರ ಅಸಮಾಧಾನ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ದರ ಏರಿಸಲಾಗಿದ್ದು, ಕೊರೊನಾ ನಡುವೆ ದರ ಏರಿಕೆ ಮಾಡಿರುವುದಕ್ಕೆ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬಂಡೀಪುರದಲ್ಲಿ ಸಫಾರಿ ದರ ಏರಿಕೆ; ಕೊರೊನಾ ನಡುವೆ ದರ ಹೆಚ್ಚಳಕ್ಕೆ ಪ್ರವಾಸಿಗರ ಅಸಮಾಧಾನ
ಸಂಗ್ರಹ ಚಿತ್ರ
Skanda
| Edited By: |

Updated on: Apr 04, 2021 | 9:18 AM

Share

ಚಾಮರಾಜನಗರ: ಕೊರೊನಾ ದೆಸೆಯಿಂದಾಗಿ ಕಳೆದೊಂದು ವರ್ಷದಿಂದ ಪ್ರವಾಸೋದ್ಯಮ ಇಲಾಖೆ ಹಲವು ಏರುಪೇರುಗಳನ್ನು ಎದುರಿಸುತ್ತಿದೆ. ಈಗ ಕೊರೊನಾ ಎರಡನೇ ಅಲೆ ಭೀತಿ ಎದುರಾಗಿರುವುದರಿಂದ ಮತ್ತೆ ಕೆಲ ಜಿಲ್ಲೆಗಳಲ್ಲಿ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗುತ್ತಿದೆ. ಏತನ್ಮಧ್ಯೆ, ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ದರ ಏರಿಸಲಾಗಿದ್ದು, ಕೊರೊನಾ ನಡುವೆ ದರ ಏರಿಕೆ ಮಾಡಿರುವುದಕ್ಕೆ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬಂಡೀಪುರದಲ್ಲಿ ಸಫಾರಿಗೆಂದು ಬರುವ ಪ್ರಾಣಿಪ್ರಿಯರಿಗೆ ದರ ಏರಿಕೆ ಕೊಂಚ ಬಿಸಿ ಮುಟ್ಟಿಸಿದೆ. ಸಫಾರಿ ದರ ₹350 ರಿಂದ ₹600ಕ್ಕೆ ಏರಿಕೆಯಾಗಿದ್ದು, ವಿದೇಶಿಗರ ಟಿಕೆಟ್ ಬೆಲೆ ₹500ರಿಂದ ₹1000ಕ್ಕೆ ಏರಿದೆ. ಕ್ಯಾಮೆರಾ ಶುಲ್ಕ ₹750ರಿಂದ ₹1,500ಕ್ಕೆ, ಸಫಾರಿ ಜಿಪ್ಸಿ ದರ ₹3,000 ದಿಂದ ₹3,500ಕ್ಕೆ, 9 ಸೀಟ್‌ನ ಕ್ಯಾಂಪರ್ ದರ ₹5000ದಿಂದ ₹7,000ಕ್ಕೆ, ಕಾಟೇಜ್ ಬಾಡಿಗೆ ₹1,500 ರಿಂದ ₹2,000ಕ್ಕೆ ಹಾಗೂ ಗಣ್ಯರ ಗಜೇಂದ್ರ ಕೊಠಡಿ ದರ ₹2,500ರಿಂದ ₹3,000ಕ್ಕೆ ಏರಿಕೆಯಾಗಿದೆ. ನಾಲ್ಕು ವರ್ಷಗಳ ಬಳಿಕ ದರ ಪಟ್ಟಿಯನ್ನು ಅರಣ್ಯ ಇಲಾಖೆ ಪರಿಷ್ಕರಿಸಿದ್ದು, ಕೊರೊನಾ ನಡುವೆಯೇ ದರ ಏರಿಕೆ ಮಾಡಿದೆ.

ಶ್ರೀಗಂಧದ ಮರಗಳು ಕಳ್ಳರ ಪಾಲು ಕೋಲಾರ: ಉದ್ಯಾನವನದಲ್ಲಿದ್ದ ಸುಮಾರು ಹದಿನೈದು ವರ್ಷಗಳಷ್ಟು ಹಳೆಯ ಎರಡು ಶ್ರೀಗಂಧ ಮರಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ನಗರದ ಸರ್ವಜ್ಞ ಪಾರ್ಕ್​ನಲ್ಲಿ ನಡೆದಿದೆ. ಲಕ್ಷಾಂತರ ಮೌಲ್ಯದ ಎರಡು ಶ್ರೀಗಂಧದ ಮರಗಳಿಗೆ ಕಳ್ಳರು ಕನ್ನ ಹಾಕಿದ್ದು, ಬೆಳ್ಳಂಬೆಳಗ್ಗೆ ವಾಯುವಿಹಾರಕ್ಕೆ ಬಂದ ಜನರು ಕಂಗಾಲಾಗಿದ್ದಾರೆ. ಕೋಲಾರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸಿನಿಮಾ ಹೀರೋಗಾಗಿ ಬಂಡೀಪುರದಲ್ಲಿ ರಾತ್ರಿ ಸಫಾರಿ! ಕಾನೂನುಬಾಹಿರ ವಿಡಿಯೋ ವೈರಲ್ 

ರೈಲ್ವೆ ಕಂಬಿಗಳ ಬೇಲಿ ನಿರ್ಮಾಣ; ಆನೆಗಳ ಉಪಟಳವನ್ನು ನಿಲ್ಲಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ನೂತನ ಪ್ರಯೋಗ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ