AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟ ಮೃಗಾಲಯದಲ್ಲಿ ಮೂರು ಹುಲಿಗಳು ಸಾವು; ವಿಚಿತ್ರ ಸೋಂಕು ಹರಡಿರುವ ಶಂಕೆ

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಹುಲಿಗಳು ಸಾವನ್ನಪ್ಪಿವೆ. ಬೆಂಗಾಲ್ ಟೈಗರ್​ಗಳಿಗೆ ತಗುಲಿರುವ ವಿಚಿತ್ರ ಸೋಂಕು ಇಲ್ಲಿಗೂ ಹರಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಇತರ ಹುಲಿಗಳಿಗೂ ಹರಡುವ ಭೀತಿ ಎದುರಾಗಿದೆ.

ಬನ್ನೇರುಘಟ್ಟ ಮೃಗಾಲಯದಲ್ಲಿ ಮೂರು ಹುಲಿಗಳು ಸಾವು; ವಿಚಿತ್ರ ಸೋಂಕು ಹರಡಿರುವ ಶಂಕೆ
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಮೂರು ಹುಲಿಗಳು ಸಾವು (ಚಿತ್ರ: ಬನ್ನೇರುಘಟ್ಟ ಮೃಗಾಲಯದ ಹುಲಿ)
TV9 Web
| Updated By: Rakesh Nayak Manchi|

Updated on:Sep 17, 2022 | 12:48 PM

Share

ಆನೇಕಲ್: ಭಾರತದಲ್ಲಿರುವ ಮೃಗಗಳ ಜೀವಕ್ಕೆ ಸೋಂಕಿನ ಭೀತಿ ಎದುರಾಗಿದ್ದು, ಮೃಗಾಲಯದಲ್ಲಿನ ಹುಲಿಗಳು ಸಾವನ್ನಪ್ಪುತ್ತಿವೆ. ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಸುಮಾರು 22ಕಿ.ಮೀ ದೂರದಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಹುಲಿಗಳು ಸಾವನ್ನಪ್ಪಿವೆ. ಮೃಗಾಲಯದಲ್ಲಿನ ಬೆಂಗಾಲ್ ಟೈಗರ್​ಗಳಿಗೆ ವಿಚಿತ್ರ ಸೋಂಕು ತಗುಲಿದ್ದು, ಬ್ಯಾರೆಕ್ ಒಳಗಡೆ ಹರಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಇತರ ಹುಲಿಗಳಿಗೂ ಸೋಂಕು ಹರಡುವ ಭೀತಿ ಎದುರಾಗಿದೆ.

ಒಂದೆಡೆ ಭಾರತಕ್ಕೆ ವಿದೇಶಗಳಿಂದ ವನ್ಯ ಪ್ರಾಣಿಗಳನ್ನು ತರಲಾಗುತ್ತಿದೆ. ಇದು ಒಳ್ಳೆಯ ಕೆಲಸವಾಗಿದ್ದರೂ ಕೆಲವು ಮೃಗಾಲಯಗಳಲ್ಲಿ ಪ್ರಾಣಿಗಳ ಆರೋಗ್ಯವನ್ನು ನಿರ್ಲಕ್ಷ್ಯಿಸಲಾಗುತ್ತಿದೆ ಎಂಬ ಅನುಮಾನ ಹುಟ್ಟುಹಾಕಿದೆ. ಇದಕ್ಕೆ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಹುಲಿ ಸಾವುಗಳೇ ಸಾಕ್ಷಿ ಎಂಬಂತಿದೆ. ಮೂರು ವರ್ಷ ಕಿರಣ್, ಐದು ವರ್ಷದ ಶಿವು ಸೇರಿದಂತೆ ಒಟ್ಟು ಮೂರು ಹುಲಿಗಳು ಕಳೆದ ಮೂರು ತಿಂಗಳಲ್ಲಿ ಸಾವನ್ನಪ್ಪಿವೆ.

ಸದ್ಯ ಹುಲಿಗಳ ಸಾವಿನ ಪರಿಣಾಮ ದೇಶದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿದೆ. ಹುಲಿಗಳ ಆರೋಗ್ಯಕ್ಕಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗುತ್ತದೆ. ಹಲವು ಗಣ್ಯ ವ್ಯಕ್ತಿಗಳು ಕೆಲವೊಂದು ಹುಲಿಗಳನ್ನು ದತ್ತು ತೆಗೆದುಕೊಂಡಿದ್ದಾರೆ. ಆದರೆ ಹುಲಿಗಳ ಸಾವುಗಳನ್ನು ನೋಡಿದಾಗ ಹುಲಿಗಳಿಗೆ ಮಾಡಬೇಕಾದ ವ್ಯವಸ್ಥೆ ಕುಂಠಿತವಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಹೊಟ್ಟೆ ನೋವು, ಅಜೀರ್ಣ, ಮಲಬದ್ಧತೆಯಿಂದ ನರಳಿದ್ದ ಹುಲಿಗಳ ಆರೋಗ್ಯದ ಬಗ್ಗೆ ಪಾರ್ಕ್ ಆಡಳಿತ ಮಂಡಳಿ ಅಷ್ಟಾಗಿ ತಲೆ ಕೆಡಿಸಿಕೊಳ್ಳದಿರುವುದು ಬೇಸರದ ಸಂಗತಿ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:48 pm, Sat, 17 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ