AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಣಾ ಇಲಾಖೆಯ ಮೊರೆ ಹೋದ ಬಿಬಿಎಂಪಿ; ತಾತ್ಕಾಲಿಕ ಫೀಲ್ಡ್ ಆಸ್ಪತ್ರೆ ನಿರ್ಮಾಣಕ್ಕೆ ಮನವಿ

ರಕ್ಷಣಾ ಇಲಾಖೆ ಹಾಗೂ ವಾಯು ಸೇನೆಗೆ ಸೇರಿದ ಕಮಾಂಡೋ ಆಸ್ಪತ್ರೆಯಲ್ಲಿ ಬೆಡ್ ನೀಡುವಂತೆ ಬಿಬಿಎಂಪಿ ಮನವಿ ಮಾಡಿದೆ. ಸರ್ಕಾರದ ಮುಖಾಂತರ ನಗರದಲ್ಲಿ ತಾತ್ಕಾಲಿಕ ಫೀಲ್ಡ್ ಹಾಸ್ಪಿಟಲ್ ನಿರ್ಮಾಣಕ್ಕೆ ಕೂಡ ಬಿಬಿಎಂಪಿ ಕೋರಿದ್ದು, ಇದಕ್ಕೂ ಮುನ್ನ ಬೆಡ್‌ಗಳನ್ನು ನೀಡುವಂತೆ ಮನವಿ ಮಾಡಿದೆ.

ರಕ್ಷಣಾ ಇಲಾಖೆಯ ಮೊರೆ ಹೋದ ಬಿಬಿಎಂಪಿ; ತಾತ್ಕಾಲಿಕ ಫೀಲ್ಡ್ ಆಸ್ಪತ್ರೆ ನಿರ್ಮಾಣಕ್ಕೆ ಮನವಿ
ಪ್ರಾತಿನಿಧಿಕ ಚಿತ್ರ
preethi shettigar
|

Updated on: May 03, 2021 | 9:36 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆಯ ಪ್ರಸರಣ ಅತೀ ವೇಗವಾಗಿದ್ದು, ಸಾವಿನ ಸಂಖ್ಯೆಯಲ್ಲೂ ಕೂಡ ಹೆಚ್ಚಳ ಕಂಡು ಬಂದಿದೆ. ಇನ್ನು ಬೆಂಗಳೂರಿನಲ್ಲಿ ಕೊರೊನಾ ಸೋಂಕು ತೀವ್ರ ರೂಪ ಪಡೆದುಕೊಂಡಿದ್ದು, ಸಿಲಿಕಾನ್ ಸಿಟಿಯಲ್ಲಿ ಆತಂಕ ಮೂಡಿದೆ. ಹೀಗಾಗಿ ಬಿಬಿಎಂಪಿ ಈ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ರಕ್ಷಣಾ ಇಲಾಖೆಯ ಮೊರೆ ಹೋಗಿದೆ. ನಗರದಲ್ಲಿರುವ ಆಸ್ಪತ್ರೆಗಳು ಮತ್ತು ಕೋವಿಡ್ ಕೇರ್ ಸೆಂಟರ್​ಗಳು ಸೋಂಕಿತರಿಂದ ಭರ್ತಿಯಾಗಿವೆ. ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳ ಅಭಾವ ಉಂಟಾಗುವ ಮೊದಲೇ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದು ಬಿಬಿಎಂಪಿ ಈ ನಿರ್ಧಾರ ತೆಗೆದುಕೊಂಡಿದೆ.

ಈ ನಿಟ್ಟಿನಲ್ಲಿ ರಕ್ಷಣಾ ಇಲಾಖೆ ಹಾಗೂ ವಾಯು ಸೇನೆಗೆ ಸೇರಿದ ಕಮಾಂಡೋ ಆಸ್ಪತ್ರೆಯಲ್ಲಿ ಬೆಡ್ ನೀಡುವಂತೆ ಬಿಬಿಎಂಪಿ ಮನವಿ ಮಾಡಿದೆ. ಸರ್ಕಾರದ ಮುಖಾಂತರ ನಗರದಲ್ಲಿ ತಾತ್ಕಾಲಿಕ ಫೀಲ್ಡ್ ಹಾಸ್ಪಿಟಲ್ ನಿರ್ಮಾಣಕ್ಕೆ ಕೂಡ ಬಿಬಿಎಂಪಿ ಕೋರಿದ್ದು, ಇದಕ್ಕೂ ಮುನ್ನ ಬೆಡ್‌ಗಳನ್ನು ನೀಡುವಂತೆ ಮನವಿ ಮಾಡಿದೆ.

ಈಗಾಗಲೇ ಬೆಡ್ ಭರ್ತಿಯಾಗಿದ್ದು, ಐಸಿಯು ಬೆಡ್‌ಗಳ ಸಂಖ್ಯೆ ಕಡಿಮೆ ಇದೆ ಎಂದು ಬಿಬಿಎಂಪಿ ರಕ್ಷಣಾ ಇಲಾಖೆಗೆ ಮಾಹಿತಿ ನೀಡಿದೆ. ಫೀಲ್ಡ್ ಆಸ್ಪತ್ರೆಯನ್ನು ಆದಷ್ಟು ಬೇಗ ನಿರ್ಮಾಣ ಮಾಡಿಕೊಡಿ ಎಂದು ಮನವಿ ಮಾಡಿದೆ. ಆದರೆ ಈಗಾಗಲೇ ಸೇನೆಯಲ್ಲಿರುವ ಸಿಬ್ಬಂದಿ ಹಾಗೂ ಅವರ ಕುಟುಂಬಸ್ಥರಿಗೆ ಬೆಡ್​ಗಳನ್ನು ನೀಡಿದ್ದು, ಹೀಗಾಗಿ ಬೆಡ್ ಭರ್ತಿಯಾಗಿದೆ. ಅಲ್ಲದೇ ಐಸಿಯು ಬೆಡ್​ಗಳ ಸಂಖ್ಯೆ ಕಡಿಮೆ ಇರುವ ಬಗ್ಗೆ ಕೂಡ ಕಮಾಂಡೋ ಆಸ್ಪತ್ರೆ ಮಾಹಿತಿ ನೀಡಿದೆ.

ಈ ನಿಟ್ಟಿನಲ್ಲಿ ಇದಕ್ಕೆ ಪರ್ಯಾಯವಾಗಿ ಫೀಲ್ಡ್ ಹಾಸ್ಪಿಟಲ್​ಗಳನ್ನ ನಿರ್ಮಾಣ ಮಾಡಿ, ಅಗತ್ಯ ಸೇವೆ ನೀಡುವ ವ್ಯವಸ್ಥೆ ಮಾಡಿಕೊಡಲು ರಕ್ಷಣಾ ಇಲಾಖೆಗೆ ಸರ್ಕಾರದ ಮುಖಾಂತರ ಬಿಬಿಎಂಪಿ ಮನವಿ ಮಾಡಿದೆ.

ಇದನ್ನೂ ಓದಿ:

ಜೀವಂತವಾಗಿದೆಯೇ ಬಿಬಿಎಂಪಿ ಆರೋಗ್ಯ ವಿಭಾಗ? ಶವ ದಹನ ಹೊಗೆಯಿಂದ ಕಂಗಾಲಾಗಿದ್ದಾರೆ ಸ್ಥಳೀಯರು

ಖಾಸಗಿ ಆಸ್ಪತ್ರೆಗಳು ಸುಖಾಸುಮ್ಮನೆ ಬೆಡ್ ಇಲ್ಲ ಎನ್ನುವಂತಿಲ್ಲ; ಬಿಬಿಎಂಪಿ ವ್ಯಾಪ್ತಿಯಲ್ಲಿ ‘ಸಿಟಿಜನ್​​ ಹೆಲ್ಪ್​ ಡೆಸ್ಕ್

(Bangalore BBMP Seeking Defense ministry for preparing field Hospital in Bengaluru)

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!