AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಧಿಕಾರಿಗಳಿಂದ ಬೇಜವಾಬ್ದಾರಿ; ಕೋಟಿ ಕೋಟಿ ಆಸ್ತಿ ಕಾಪಾಡಿಕೊಳ್ಳಲು BDA ವಿಫಲ’

ಕೋಟಿ ಕೋಟಿ ಬೆಲೆಬಾಳುವ ಆಸ್ತಿ ಕಾಪಾಡಿಕೊಳ್ಳಲು ಬಿಡಿಎ ವಿಫಲಗೊಂಡಿದ್ದು, ಆಸ್ತಿ ಕಾಪಾಡಿಕೊಳ್ಳಲು ಬಿಡಿಎ ಅಧಿಕಾರಿಗಳು ಬೇಜವಾಬ್ದಾರಿ ತೋರಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

‘ಅಧಿಕಾರಿಗಳಿಂದ ಬೇಜವಾಬ್ದಾರಿ; ಕೋಟಿ ಕೋಟಿ ಆಸ್ತಿ ಕಾಪಾಡಿಕೊಳ್ಳಲು BDA ವಿಫಲ’
ಪ್ರಾತಿನಿಧಿಕ ಚಿತ್ರ
shruti hegde
| Edited By: |

Updated on: Feb 15, 2021 | 1:16 PM

Share

ಬೆಂಗಳೂರು: ಕೋಟಿ ಕೋಟಿ ಬೆಲೆಬಾಳುವ ಆಸ್ತಿ ಕಾಪಾಡಿಕೊಳ್ಳಲು ಬಿಡಿಎ ವಿಫಲಗೊಂಡಿದ್ದು, ಆಸ್ತಿ ಕಾಪಾಡಿಕೊಳ್ಳಲು ಬಿಡಿಎ ಅಧಿಕಾರಿಗಳು ಬೇಜವಾಬ್ದಾರಿ ತೋರಿದ್ದಾರೆ. ಬೇಕೆಂದೇ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಜಾಗ ಯಾರದ್ದೋ ಪಾಲಾಗಿದ್ದರೂ ಕೈಕಟ್ಟಿ ಕುಳಿತಿರುವ ಆರೋಪ ಕೇಳಿಬರುತ್ತಿದೆ.

ಅಕ್ರಮ ನಡೆಯುತ್ತಿದ್ದರೂ ಬಿಡಿಎ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕೋಟ್ಯಂತರ ಮೌಲ್ಯದ ಆಸ್ತಿ ಉಳಿಸಿಕೊಳ್ಳಲು ಬಿಡಿಎ ವಿಫಲಗೊಂಡಿದೆ. ನಾಗರಬಾವಿಯಲ್ಲಿ ಕರ್ನಾಟಕ ಐಟಿ ಇಲಾಖೆ ನೌಕರರ ಗೃಹ ನಿರ್ಮಾಣ ಸಂಘಕ್ಕೆ 2015ರಲ್ಲಿ ಬಿಡಿಎನಿಂದ 1 ಎಕರೆ 1 ಗುಂಟೆ ಜಾಗ ಅಲಾಟ್ ಮಾಡಲಾಗಿತ್ತು. ಅಲಾಟ್​ ಮಾಡಿದ ಜಾಗವನ್ನು ಮುನಿರಾಜು ಪಾಲುದಾರಿಕೆಯ ಎಸ್​ಎಸ್​ ಮತ್ತು ಎಸ್​ವಿ ಡೆವಲಪರ್ಸ್​ಗೆ ಜಿಪಿಎ ಮಾಡಿಕೊಟ್ಟಿತ್ತು. ಕಾನೂನು ಬಾಹಿರವಾಗಿ ಜಿಪಿಎ ಮಾಡಿಕೊಟ್ಟಿದ್ದರೂ ಬಿಡಿಎ ನಿರ್ಲಕ್ಷ್ಯ ತೋರಿದೆ. ಬಿಡಿಎ 2017ರಿಂದ ಈವರೆಗೂ ಯಾವುದೇ ಕ್ರಮಕೈಗೊಂಡಿಲ್ಲ.

ಇದನ್ನೂ ಓದಿ: TV9 Kannada Digital Live: ಬಿಡಿಎ ವಿಸರ್ಜನೆಯಿಂದಲೇ ಭ್ರಷ್ಟಾಚಾರ ತಡೆಯಲು ಸಾಧ್ಯ; ತಜ್ಞರ ಅಭಿಮತ

ಬಿಲ್ಡರ್ ಜೊತೆ ಶಾಮೀಲಾಗಿ ಡೀಲ್ ಏನಾದರೂ ಮಾಡಿದ್ದಾರಾ? ಎಂಬ ಅನುಮಾನ ಶುರುವಾಗಿದೆ. ಉಪಕಾರ್ಯದರ್ಶಿಯಾಗಿದ್ದ ಸುಧಾ, ಎಂಎಸ್ಎನ್ ಬಾಬು, ಚಿದಾನಂದ, ಹರೀಶ್ ನಾಯಕ್ ಚಿದಾನಂದ, ಆಯುಕ್ತರಾಗಿದ್ದ ಮಂಜುಳಾ, ಮಹದೇವ್, ಅಂದಿನ ಬಿಡಿಎ ಕಾರ್ಯದರ್ಶಿಗಳಾಗಿದ್ದ ಬಸವರಾಜ್ ಜಗದೀಶ್ ಮತ್ತು ವಾಸಂತಿ ಅಮರ್ ಎಲ್ಲರಿಗೂ ಮಾಹಿತಿಯಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳದೆ ಸುಮ್ಮನೆ ಇರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಬಿಡಿಎಗೆ ಸೇರಿದ ಕೋಟಿ ಕೋಟಿ ಆಸ್ತಿಯನ್ನು ಕಣ್ಣ ಮುಂದೆಯೇ ಲೂಟಿ ಹೊಡೆಯುತ್ತಿದ್ದರು ಕಣ್ಮುಚ್ಚಿ ಕೂತಿರುವುದು ದೊಡ್ಡ ಅನುಮಾನಕ್ಕೆ ಕಾರಣವಾಗಿದೆ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!