AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ನಗರ ಪೊಲೀಸ್ ಆಯುಕ್ತರಿಂದ ಹೊಸ ಆದೇಶ; ಹೊಟೇಲ್ ಮಾಲೀಕರಿಗೆ ಅಸಮಾಧಾನ, ರೆಸ್ಟೋರೆಂಟ್ ಮಾಲೀಕರಿಗೆ ಸಂತಸ

ರಾತ್ರಿ 1 ಗಂಟೆ ನಂತರ ಹೊಟೇಲ್ ತೆರೆಯದಂತೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಇದಕ್ಕೆ ಹೊಟೇಲ್ ಮಾಲಿಕರು ಅಸಮಾಧಾನ ಹೊರಹಾಕುತ್ತಿದ್ದು, ಮುಂದಿನ ದಿನಗಳಲ್ಲಿ ಸಿಎಂ ಜೊತೆ ಚರ್ಚಿಸಲು ತೀರ್ಮಾನಿಸಿದ್ದಾರೆ.

Bangalore: ನಗರ ಪೊಲೀಸ್ ಆಯುಕ್ತರಿಂದ ಹೊಸ ಆದೇಶ; ಹೊಟೇಲ್ ಮಾಲೀಕರಿಗೆ ಅಸಮಾಧಾನ, ರೆಸ್ಟೋರೆಂಟ್ ಮಾಲೀಕರಿಗೆ ಸಂತಸ
ಬೆಂಗಳೂರು ನಗರ ಪೊಲೀಸ್ ಆಯುಕ್ತರಿಂದ ಹೊಸ ಆದೇಶ
TV9 Web
| Edited By: Rakesh Nayak Manchi|

Updated on:Oct 15, 2022 | 12:28 PM

Share

ಬೆಂಗಳೂರು: ನಗರದಲ್ಲಿ ಮಧ್ಯರಾತ್ರಿ 1 ಗಂಟೆಯವರೆಗೆ ಹೋಟೆಲ್ ತೆರೆಯಲು ಮಾತ್ರ ಅವಕಾಶ ನೀಡಿರುವ ಕ್ರಮಕ್ಕೆ ಬೆಂಗಳೂರು ಹೊಟೇಲ್ ಮಾಲೀಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ನಗರದಲ್ಲಿ ರಾತ್ರಿ 1 ಗಂಟೆ ನಂತರ ಹೊಟೇಲ್ ತೆರೆಯದಂತೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಬೇಸರ ವ್ಯಕ್ತಪಡಿಸಿದ ನಿಸರ್ಗ ಹೋಟೆಲ್ ಮಾಲೀಕ ಕೃಷ್ಣರಾಜ್, ದಿನದ 24 ಗಂಟೆಯೂ ಹೋಟೆಲ್​ ತೆರೆಯಲು ಅನುಮತಿ ನೀಡಬೇಕು ಎಂಬ ಬೇಡಿಕೆ ನಮ್ಮದಾಗಿತ್ತು. ಆದರೆ ರಾತ್ರಿ 1 ರವರೆಗೆ ಮಾತ್ರ ಅನುಮತಿ ನೀಡಿರುವುದು ಹೊಸ ಆದೇಶವೇನು ಅಲ್ಲ. 2016ರಲ್ಲೇ ಸರ್ಕಾರ ಈ ಆದೇಶ ಹೊರಡಿಸಿತ್ತು. ಆದರೆ ಕೋವಿಡ್ ನಿಯಮಾವಳಿ ಹಿನ್ನೆಲೆ ಪೊಲೀಸರು ಬೇಗ ಮುಚ್ಚಿಸುತ್ತಿದ್ದರು. ಈಗಿನ ಆದೇಶದಲ್ಲಿ ಹೊಸ ಅಂಶಗಳೇನು ಇಲ್ಲ. ನಮ್ಮ ಬೇಡಿಕೆ 24/7 ಹೋಟೆಲ್ ತೆರೆಯಲು ಅನುಮತಿ ಕೋರಿ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡುವ ಕುರಿತು ಚರ್ಚೆ ಮಾಡಲಾಗುವುದು ಎಂದರು.

ಪೊಲೀಸ್ ಆಯುಕ್ತರಿಂದ ಮತ್ತೊಂದು ಆದೇಶ

ಮಧ್ಯ ಮಾರಟ ನಿಷೇಧ ಅವಧಿ ವೇಳೆಗಳಲ್ಲಿ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ನಗರ ಪೊಲೀಸ್ ಆಯುಕ್ತರು ಹೊಸ ಆದೇಶ ಹೊರಡಿಸಿದ್ದಾರೆ. ವಿಶೇಷ ಸಂದರ್ಭಗಳಲ್ಲಿ ನಗರದ ವಿವಿಧ ಭಾಗಗಳಲ್ಲಿ ಮಧ್ಯ ಮಾರಾಟ ನಿಷೇಧಾಜ್ಞೆ ಜಾರಿ ಮಾಡಲಾಗುತಿತ್ತು. ಈ ಸಂದರ್ಭದಲ್ಲಿ ಬಾರ್ ಮತ್ತು ರೆಸ್ಟೊರೆಂಟ್​ಗಳನ್ನು ಮುಚ್ಚಿಸಲಾಗುತಿತ್ತು. ಆದರೆ ಆಯುಕ್ತರ ಹೊಸ ಆದೇಶದ ಪ್ರಕಾರ, ಬಾರ್ ಮುಚ್ಚುವ ಪ್ರಕ್ರಿಯೆ ಮುಂದುವರಿಯಲಿದೆ. ಆದರೆ ರೆಸ್ಟೋರೆಂಟ್​ಗಳಿಗೆ ಆಹಾರ ಪದಾರ್ಥಗಳ ಸರಬರಾಜಿಗೆ ಅನುಮತಿ ನೀಡಲಾಗಿದೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಡಿಸಿಪಿಗಳಿಗೆ ಸೂಚನೆ ನೀಡಲಾಗಿದೆ.

ಬೆಂಗಳೂರಿಗೆ ಆಗಮಿಸಿದ ಹೊಸ ಮೆಟ್ರೋ ರೈಲು ಕೋಚ್​ಗಳು

ಹೊಸ ಮೆಟ್ರೋ ರೈಲಿನ ಕೋಚ್‌ಗಳು ಇಂದು ಬೆಳಗ್ಗೆ ವೈಟ್ ಫೀಲ್ಡ್ ಡಿಪೋಗೆ ಆಗಮಿಸಿವೆ. ಒಂದು ಕೋಚ್​ಗೆ ಸುಮಾರು 9 ಕೋಟಿ ಬೆಲೆ ಬಾಳುತ್ತವೆ. ಇಂತಹ ಒಟ್ಟು ಆರು ಕೋಚ್​ಗಳನ್ನು ಬಿಇಎಂಎಲ್ ಸಿದ್ದಪಡಿಸಿದ್ದು, ಇವುಗಳನ್ನು ಒಟ್ಟುಗೂಡಿಸಿದರೆ ಒಂದು ಮೆಟ್ರೋ ರೈಲು ಆಗಲಿದೆ. ಸದ್ಯ ಒಂದು ರೈಲಿನ ಕೋಚ್​ಗಳು ಆಗಮಿಸಿದ್ದು, ಇಂತಹ 7 ರೈಲುಗಳನ್ನು‌ ಬಿಇಎಂಎಲ್​ ಸಿದ್ಧಪಡಿಸುತ್ತಿದೆ. ಸದ್ಯ ಅನ್‌ಲೋಡ್ ಮಾಡಲಾದ ಕೋಚ್​ಗಳನ್ನು ಬಿಇಎಂಎಲ್ ಸಿಬ್ಬಂದಿಗಳು ಜೋಡಿಸಲಿದ್ದಾರೆ.

ಮತ್ತಷ್ಟು ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:22 pm, Sat, 15 October 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ