AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂಧೆ, ಭ್ರಷ್ಟಾಚಾರ ಆರೋಪ: ಕೊಡಿಗೇಹಳ್ಳಿ ಠಾಣೆ ಇನ್​ಸ್ಪೆಕ್ಟರ್ ವಿರುದ್ಧ ದೂರು ನೀಡಿದ ಠಾಣೆ ಸಿಬ್ಬಂದಿ

ತನ್ನ ವಿರುದ್ಧ ಡಿಸಿಪಿಗೆ ದೂರು ನೀಡಿದ ಠಾಣೆ ಸಿಬ್ಬಂದಿಗಳ ಬಳಿ ಕೊಡಿಗೆಹಳ್ಳಿ ಇನ್​ಸ್ಪೆಕ್ಟರ್, ಡಿಸಿಪಿಯನ್ನೇ ಎತ್ತಂಗಡಿ ಮಾಡಿಸುವುದಾಗಿ ಸವಾಲು ಹಾಕಿದ್ದಾರೆ.

ದಂಧೆ, ಭ್ರಷ್ಟಾಚಾರ ಆರೋಪ: ಕೊಡಿಗೇಹಳ್ಳಿ ಠಾಣೆ ಇನ್​ಸ್ಪೆಕ್ಟರ್ ವಿರುದ್ಧ ದೂರು ನೀಡಿದ ಠಾಣೆ ಸಿಬ್ಬಂದಿ
ಇಸ್ಪೀಟ್​ ಅಡ್ಡೆ ನಡೆಸುತ್ತಿದ್ದವನಿಂದ 2 ಲಕ್ಷ ವಸೂಲಿ ಕೊಡಿಗೆಹಳ್ಳಿ ಠಾಣೆ ಇನ್​ಸ್ಪೆಕ್ಟರ್ ವಿರುದ್ಧ ದೂರು ನೀಡಿದ ಸಿಬ್ಬಂದಿ
TV9 Web
| Edited By: Rakesh Nayak Manchi|

Updated on: Nov 04, 2022 | 12:43 PM

Share

ಬೆಂಗಳೂರು: ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಇನ್​ಸ್ಪೆಕ್ಟರ್​ ರಾಜಣ್ಣನವರು ನಡೆಸುತ್ತಿರುವ ದಂಧೆಗಳು ಮತ್ತು ಭ್ರಷ್ಟಾಚಾರದ ಬಗ್ಗೆ ಅದೇ ಠಾಣೆಯ ಸಿಬ್ಬಂದಿಯೊಬ್ಬರು ಡಿಸಿಪಿಗೆ ದೂರು ನೀಡಿದ್ದಾರೆ. ಈ ವಿಚಾರ ತಿಳಿದ ರಾಜಣ್ಣ, ಡಿಸಿಪಿಯನ್ನೇ ಎತ್ತಂಗಡಿ ಮಾಡಿಸುವುದಾಗಿ ಸವಾಲು ಹಾಕಿದ್ದಾರೆ. ಡಿಸಿಪಿ ಅನೂಪ್ ಶೆಟ್ಟಿ ಎತ್ತಂಗಡಿ ಮಾಡಿಸಿ ಅವರ ಸ್ಥಾನಕ್ಕೆ ಸಾರಾ ಫಾತಿಮಾ ಅವರನ್ನು ಕೂರಿಸುವುದಾಗಿ ಸವಾಲು ಹಾಕಿದ್ದಾರೆ. ಸದ್ಯದಲ್ಲೇ ಡಿಸಿಪಿ ಅನೂಪ್ ಶೆಟ್ಟಿ ವರ್ಗಾವಣೆ ಆಗುತ್ತದೆ, ನಂತರ ನಾನು ಹೇಗೆ ಬೇಕಾದರೂ ಇರಬಹುದು, ಡಿಸಿಪಿ ವರ್ಗಾವಣೆ ಮಾಡಿಸುತ್ತಿರುವುದು ನಾನೇ ಎಂದು ರಾಜಣ್ಣ ಹೇಳಿರುವುದಾಗಿ ಹೆಸರು ಹೇಳಲಿಚ್ಚಿಸದ ಪೊಲೀಸ್ ಠಾಣಾ ಸಿಬ್ಬಂದಿಗಳಿಂದಲೇ ಮಾಹಿತಿ ಹೊರಬಿದ್ದಿದೆ.

ಬೆಂಗಳೂರಿನ ಕೆನರಾ ಬ್ಯಾಂಕ್​ ಲೇಔಟ್​ನಲ್ಲಿರುವ ಇಸ್ಪೀಟ್​ ಅಡ್ಡೆ ನಡೆಸುತ್ತಿದ್ದ ವೆಂಕಟೇಶ್​ನಿಂದ ರಾಜಣ್ಣ 2ಲಕ್ಷ ಪಡೆದ ಆರೋಪವಿದೆ. ಅಲ್ಲದೆ ಕೇಬಲ್ ತಗುಲಿ ವ್ಯಕ್ತಿ ಮೃತಪಟ್ಟಿದ್ದ ಪ್ರಕರಣದಲ್ಲಿ ಏರ್​ಟೆಲ್​ ಬ್ರಾಡ್​ಬ್ಯಾಂಡ್​ ಉಸ್ತುವಾರಿ ಸುರೇಶ್​ಗೆ ಬೆದರಿಕೆ ಹಾಕಿದ್ದಲ್ಲದೆ 15 ಲಕ್ಷ ಹಣ ಕೊಡದಿದ್ದರೆ ಕೊಲೆ ಕೇಸ್ ದಾಖಲಿಸುವುದಾಗಿ ಧಮ್ಕಿ ಹಾಕಿದ್ದಾರೆ. ಈ ವೇಳೆ ಮೃತನ ಕುಟುಂಬಕ್ಕೆ 10 ಲಕ್ಷ, ನಿಮಗೆ 5 ಲಕ್ಷ ಕೊಡುವೆ ಎಂದು ಸುರೇಶ್ ಹೇಳಿದ್ದಾರೆ. ಇದಕ್ಕೆ ನನಗೆ 10 ಲಕ್ಷ, ಮೃತನ ಕುಟುಂಬಕ್ಕೆ 5 ಲಕ್ಷ ಕೊಡು ಎಂದು ರಾಜಣ್ಣ ಹೇಳಿದ್ದಾನೆ. ಇದರಿಂದ ಬೇಸತ್ತ ಸುರೇಶ್, ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದಾಳಿ ನಡೆಸುವ ದಿನ ಲೋಕಾಯುಕ್ತ ಸಂಸ್ಥೆಯಿಂದ ಯಾರೋ ಒಬ್ಬರು ಕರೆ ಮಾಡಿ ಮಾಹಿತಿ ನೀಡುತ್ತಿದ್ದಂತೆ ರಾಜಣ್ಣ, ಸುರೇಶ್​ನನ್ನು ಯಾರು ಕೂಡ ಮಾತನಾಡಿಸಬಾರದು ಎಂದು ಠಾಣೆ ಸಿಬ್ಬಂದಿಗೆ ಸೂಚಿಸಿದ್ದಾರೆ. ಈ ವಿಚಾರವಾಗಿ ಠಾಣೆ ಸಿಬ್ಬಂದಿಯೊಬ್ಬರು ಡಿಸಿಪಿ ಅನೂಪ್​ ಶೆಟ್ಟಿಗೆ ದೂರು ನೀಡಿದ್ದಾರೆ.

ದೂರು ನೀಡಿದ ವಿಚಾರ ತಿಳಿದ ರಾಜಣ್ಣ, ಡಿಸಿಪಿ ಅನೂಪ್​ ಶೆಟ್ಟಿಯನ್ನು ಎತ್ತಂಗಡಿ ಮಾಡಿಸುತ್ತೇನೆ, ಅವರ ಜಾಗಕ್ಕೆ ಸಾರಾ ಫಾತಿಮಾರನ್ನು ಕೂರಿಸುತ್ತೇವೆ. ಸದ್ಯದಲ್ಲೇ ಡಿಸಿಪಿ ಅನೂಪ್ ಶೆಟ್ಟಿ ವರ್ಗಾವಣೆ ಆಗುತ್ತದೆ. ವರ್ಗಾವಣೆ ಮಾಡಿಸುವುದೇ ನಾನು, ನಂತರ ನಾನು ಹೇಗೆ ಬೇಕಾದರೂ ಇರಬಹುದು ಎಂದು ರಾಜಣ್ಣ ಹೇಳಿದ್ದಾರೆ. ಸದ್ಯ ರಾಜಣ್ಣ ವಿರುದ್ಧ ದೂರು ಡಿಸಿಪಿ ಅನೂಪ್ ಶೆಟ್ಟಿ ಕೈ ಸೇರಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ