AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ಮಾರಕಾಸ್ತ್ರ ಹಿಡಿದುಕೊಂಡು ಸುಲಿಗೆ, ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Bangalore News: ಮಾರಕಾಸ್ತ್ರ ಬೀಸುತ್ತಾ ಹಾಡಹಗಲೇ ಸುಲಿಗೆ ನಡೆಸುತ್ತಿದ್ದ ದುಷ್ಕಮಿಯೊಬ್ಬನನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ದುಷ್ಕರ್ಮಿ ಮಾರಕಾಸ್ತ್ರ ಬೀಸಿದರೂ ಎದೆಗುಂದದೆ ಅಂಗಡಿ ಮಾಲೀಕ ಮತ್ತು ಸ್ಥಳೀಯರು ಆರೋಪಿಯನ್ನು ಹಿಡಿದಿದ್ದಾರೆ.

ಹಾಡಹಗಲೇ ಮಾರಕಾಸ್ತ್ರ ಹಿಡಿದುಕೊಂಡು ಸುಲಿಗೆ, ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು
ಅಂಗಡಿಯ ಗಲ್ಲಾ ಪೆಟ್ಟಿಗೆಯಿಂದ ಹಣ ಎಗರಿಸಿದ ದುಷ್ಕರ್ಮಿ (ಮೊದಲ ಫೋಟೋ) ಮತ್ತು ಅಂಗಡಿ ಮಾಲೀಕನಿಗೆ ಮಾರಕಾಸ್ತ್ರ ಬೀಸಿದ ದುಷ್ಕರ್ಮಿ (ಎರಡನೇ ಫೋಟೋ)
TV9 Web
| Edited By: |

Updated on:Aug 18, 2022 | 8:18 AM

Share

ಬೆಂಗಳೂರು: ನಗರದಲ್ಲಿ ಹಾಡಹಗಲೇ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ದರೋಡೆ, ಸುಲಿಗೆ ನಡೆಸುತ್ತಿದ್ದು, ಜನಜಂಗುಳಿ ನಡುವೆಯೂ ಮಾರಕಾಸ್ತ್ರಗಳನ್ನು ಬೀಸಿ ಅಟ್ಟಹಾಸ ಮೆರೆಯುತ್ತಿದ್ದಾರೆ. ಇಂತಹ ಪುಡಿ ರೌಡಿಗಳ ನಿಗ್ರಹಕ್ಕೆ ಹಾಗೂ ಅಪರಾಧ ಕೃತ್ಯಗಳನ್ನು ತಡೆಯಲು ಪೊಲೀಸರು ಇನ್ನಿಲ್ಲದ ಪ್ರಯತ್ನವನ್ನು ನಡೆಸುತ್ತಿದ್ದಾರೆ. ಇದೀಗ ಮಾರಕಾಸ್ತ್ರ ಬೀಸುತ್ತಾ ಹಾಡಹಗಲೇ ಸುಲಿಗೆ ನಡೆಸುತ್ತಿದ್ದ ದುಷ್ಕಮಿಯೊಬ್ಬನನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಂಗಡಿ ಮಾಲಕಿಯ ಗಮನವನ್ನು ಬೇರೆಡೆಗೆ ಕೊಂಡೊಯ್ದದ ದುಷ್ಕಮಿ, ಏಕಾಏಕಿ ಅಂಗಡಿ ಗಲ್ಲಾ ಪೆಟ್ಟಿಗೆಗೆ ಕೈಹಾಕಿ ಹಣ ಎಗರಿಸಿದ್ದಾನೆ. ಆದರೆ ಮಹಿಳೆ ಸಮಯಪ್ರಜ್ಞೆ, ಮಹಿಳೆಯ ಪತಿಯ ಪ್ರತಿರೋಧಕ್ಕೆ ಸುಲಿಗೆ ವಿಫಲಗೊಂಡಿದ್ದಲ್ಲದೆ ಲಾಂಗ್ ಬೀಸಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಆದರೆ ಪಟ್ಟುಬಿಡದ ಅಂಗಡಿ ಮಾಲೀಕ, ಸ್ಥಳೀಯರೊಂದಿಗೆ ಸೇರಿಕೊಂಡು ದುಷ್ಕರ್ಮಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗಂಗಾ ನಗರದ ಮುಖ್ಯ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ತರಕಾರಿ ಅಂಗಡಿಗೆ ಬಂದ ದುಷ್ಕಮಿಯೊಬ್ಬ ಅಂಗಡಿ ಮಾಲಕಿಯ ಗಮನವನ್ನು ಬೇರೆಕಡೆಗೆ ಸೆಳೆದು ಅಂಗಡಿಯ ಡ್ರವರ್​ ತೆರೆದು ಹಣ ಕದ್ದಿದ್ದಾನೆ. ಈ ವಿಚಾರ ತಿಳಿಯುತ್ತಿದ್ದಂತೆ ಮಹಿಳೆಯ ಪತಿ ಪ್ರತಿರೋಧವೊಡ್ಡಿದ್ದು, ಪರಿಣಾಮವಾಗಿ ದುಷ್ಕಮಿ ಮಾರಕಾಸ್ತ್ರವನ್ನು ಬೀಸುತ್ತಾ ಜನಬಿಡ ಪ್ರದೇಶದಿದ ಕಾಲ್ಕಿತ್ತಿದ್ದಾನೆ. ದುಷ್ಕರ್ಮಿ ಬೀಸಿದ ಮಾರಕಾಸ್ತ್ರದಿಂದ ಶಿವರಾಜ್ ಕೂದಲೆಳೆ ಅಂತದಲ್ಲಿ ಪಾರಾಗಿದ್ದಾರೆ. ಈ ಎಲ್ಲಾ ಘಟನೆಗಳ ದೃಶ್ಯಾವಳಿ ಅಂಗಡಿಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿವೆ.

ಇಷ್ಟಕ್ಕೂ ಸುಮ್ಮನಾಗದ ಅಂಗಡಿ ಮಾಲೀಕ ಶಿವರಾಜ್, ಸ್ಥಳೀಯರ ಸಹಾಯದೊಂದಿಗೆ ಬೆನ್ನಟ್ಟಿ ದುಷ್ಕರ್ಮಿಯನ್ನು ಹಿಡಿದಿದ್ದಾರೆ. ನಂತರ ಆರ್.ಟಿ.ನಗರ ಪೊಲೀಸ್ ಠಾಣೆಗೆ ಆರೋಪಿಯನ್ನು ಒಪ್ಪಿಸಿದ್ದಾರೆ. ಶಾಪ್ ಮಾಲೀಕ ಶಿವರಾಜ್ ದೂರಿನ ಹಿನ್ನಲೆ ಅಪರಾಧ ಪ್ರಕರಣಗಳ ಹಿನ್ನಲೆಯುಳ್ಳ 20-25 ವರ್ಷದ ದುಷ್ಕರ್ಮಿಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:18 am, Thu, 18 August 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು