Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ಮಾರಕಾಸ್ತ್ರ ಹಿಡಿದುಕೊಂಡು ಸುಲಿಗೆ, ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Bangalore News: ಮಾರಕಾಸ್ತ್ರ ಬೀಸುತ್ತಾ ಹಾಡಹಗಲೇ ಸುಲಿಗೆ ನಡೆಸುತ್ತಿದ್ದ ದುಷ್ಕಮಿಯೊಬ್ಬನನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ದುಷ್ಕರ್ಮಿ ಮಾರಕಾಸ್ತ್ರ ಬೀಸಿದರೂ ಎದೆಗುಂದದೆ ಅಂಗಡಿ ಮಾಲೀಕ ಮತ್ತು ಸ್ಥಳೀಯರು ಆರೋಪಿಯನ್ನು ಹಿಡಿದಿದ್ದಾರೆ.

ಹಾಡಹಗಲೇ ಮಾರಕಾಸ್ತ್ರ ಹಿಡಿದುಕೊಂಡು ಸುಲಿಗೆ, ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು
ಅಂಗಡಿಯ ಗಲ್ಲಾ ಪೆಟ್ಟಿಗೆಯಿಂದ ಹಣ ಎಗರಿಸಿದ ದುಷ್ಕರ್ಮಿ (ಮೊದಲ ಫೋಟೋ) ಮತ್ತು ಅಂಗಡಿ ಮಾಲೀಕನಿಗೆ ಮಾರಕಾಸ್ತ್ರ ಬೀಸಿದ ದುಷ್ಕರ್ಮಿ (ಎರಡನೇ ಫೋಟೋ)
Follow us
TV9 Web
| Updated By: Rakesh Nayak Manchi

Updated on:Aug 18, 2022 | 8:18 AM

ಬೆಂಗಳೂರು: ನಗರದಲ್ಲಿ ಹಾಡಹಗಲೇ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ದರೋಡೆ, ಸುಲಿಗೆ ನಡೆಸುತ್ತಿದ್ದು, ಜನಜಂಗುಳಿ ನಡುವೆಯೂ ಮಾರಕಾಸ್ತ್ರಗಳನ್ನು ಬೀಸಿ ಅಟ್ಟಹಾಸ ಮೆರೆಯುತ್ತಿದ್ದಾರೆ. ಇಂತಹ ಪುಡಿ ರೌಡಿಗಳ ನಿಗ್ರಹಕ್ಕೆ ಹಾಗೂ ಅಪರಾಧ ಕೃತ್ಯಗಳನ್ನು ತಡೆಯಲು ಪೊಲೀಸರು ಇನ್ನಿಲ್ಲದ ಪ್ರಯತ್ನವನ್ನು ನಡೆಸುತ್ತಿದ್ದಾರೆ. ಇದೀಗ ಮಾರಕಾಸ್ತ್ರ ಬೀಸುತ್ತಾ ಹಾಡಹಗಲೇ ಸುಲಿಗೆ ನಡೆಸುತ್ತಿದ್ದ ದುಷ್ಕಮಿಯೊಬ್ಬನನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಂಗಡಿ ಮಾಲಕಿಯ ಗಮನವನ್ನು ಬೇರೆಡೆಗೆ ಕೊಂಡೊಯ್ದದ ದುಷ್ಕಮಿ, ಏಕಾಏಕಿ ಅಂಗಡಿ ಗಲ್ಲಾ ಪೆಟ್ಟಿಗೆಗೆ ಕೈಹಾಕಿ ಹಣ ಎಗರಿಸಿದ್ದಾನೆ. ಆದರೆ ಮಹಿಳೆ ಸಮಯಪ್ರಜ್ಞೆ, ಮಹಿಳೆಯ ಪತಿಯ ಪ್ರತಿರೋಧಕ್ಕೆ ಸುಲಿಗೆ ವಿಫಲಗೊಂಡಿದ್ದಲ್ಲದೆ ಲಾಂಗ್ ಬೀಸಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಆದರೆ ಪಟ್ಟುಬಿಡದ ಅಂಗಡಿ ಮಾಲೀಕ, ಸ್ಥಳೀಯರೊಂದಿಗೆ ಸೇರಿಕೊಂಡು ದುಷ್ಕರ್ಮಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗಂಗಾ ನಗರದ ಮುಖ್ಯ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ತರಕಾರಿ ಅಂಗಡಿಗೆ ಬಂದ ದುಷ್ಕಮಿಯೊಬ್ಬ ಅಂಗಡಿ ಮಾಲಕಿಯ ಗಮನವನ್ನು ಬೇರೆಕಡೆಗೆ ಸೆಳೆದು ಅಂಗಡಿಯ ಡ್ರವರ್​ ತೆರೆದು ಹಣ ಕದ್ದಿದ್ದಾನೆ. ಈ ವಿಚಾರ ತಿಳಿಯುತ್ತಿದ್ದಂತೆ ಮಹಿಳೆಯ ಪತಿ ಪ್ರತಿರೋಧವೊಡ್ಡಿದ್ದು, ಪರಿಣಾಮವಾಗಿ ದುಷ್ಕಮಿ ಮಾರಕಾಸ್ತ್ರವನ್ನು ಬೀಸುತ್ತಾ ಜನಬಿಡ ಪ್ರದೇಶದಿದ ಕಾಲ್ಕಿತ್ತಿದ್ದಾನೆ. ದುಷ್ಕರ್ಮಿ ಬೀಸಿದ ಮಾರಕಾಸ್ತ್ರದಿಂದ ಶಿವರಾಜ್ ಕೂದಲೆಳೆ ಅಂತದಲ್ಲಿ ಪಾರಾಗಿದ್ದಾರೆ. ಈ ಎಲ್ಲಾ ಘಟನೆಗಳ ದೃಶ್ಯಾವಳಿ ಅಂಗಡಿಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿವೆ.

ಇಷ್ಟಕ್ಕೂ ಸುಮ್ಮನಾಗದ ಅಂಗಡಿ ಮಾಲೀಕ ಶಿವರಾಜ್, ಸ್ಥಳೀಯರ ಸಹಾಯದೊಂದಿಗೆ ಬೆನ್ನಟ್ಟಿ ದುಷ್ಕರ್ಮಿಯನ್ನು ಹಿಡಿದಿದ್ದಾರೆ. ನಂತರ ಆರ್.ಟಿ.ನಗರ ಪೊಲೀಸ್ ಠಾಣೆಗೆ ಆರೋಪಿಯನ್ನು ಒಪ್ಪಿಸಿದ್ದಾರೆ. ಶಾಪ್ ಮಾಲೀಕ ಶಿವರಾಜ್ ದೂರಿನ ಹಿನ್ನಲೆ ಅಪರಾಧ ಪ್ರಕರಣಗಳ ಹಿನ್ನಲೆಯುಳ್ಳ 20-25 ವರ್ಷದ ದುಷ್ಕರ್ಮಿಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:18 am, Thu, 18 August 22

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ