AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ಮಾರಕಾಸ್ತ್ರ ಹಿಡಿದುಕೊಂಡು ಸುಲಿಗೆ, ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Bangalore News: ಮಾರಕಾಸ್ತ್ರ ಬೀಸುತ್ತಾ ಹಾಡಹಗಲೇ ಸುಲಿಗೆ ನಡೆಸುತ್ತಿದ್ದ ದುಷ್ಕಮಿಯೊಬ್ಬನನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ದುಷ್ಕರ್ಮಿ ಮಾರಕಾಸ್ತ್ರ ಬೀಸಿದರೂ ಎದೆಗುಂದದೆ ಅಂಗಡಿ ಮಾಲೀಕ ಮತ್ತು ಸ್ಥಳೀಯರು ಆರೋಪಿಯನ್ನು ಹಿಡಿದಿದ್ದಾರೆ.

ಹಾಡಹಗಲೇ ಮಾರಕಾಸ್ತ್ರ ಹಿಡಿದುಕೊಂಡು ಸುಲಿಗೆ, ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು
ಅಂಗಡಿಯ ಗಲ್ಲಾ ಪೆಟ್ಟಿಗೆಯಿಂದ ಹಣ ಎಗರಿಸಿದ ದುಷ್ಕರ್ಮಿ (ಮೊದಲ ಫೋಟೋ) ಮತ್ತು ಅಂಗಡಿ ಮಾಲೀಕನಿಗೆ ಮಾರಕಾಸ್ತ್ರ ಬೀಸಿದ ದುಷ್ಕರ್ಮಿ (ಎರಡನೇ ಫೋಟೋ)
TV9 Web
| Edited By: |

Updated on:Aug 18, 2022 | 8:18 AM

Share

ಬೆಂಗಳೂರು: ನಗರದಲ್ಲಿ ಹಾಡಹಗಲೇ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ದರೋಡೆ, ಸುಲಿಗೆ ನಡೆಸುತ್ತಿದ್ದು, ಜನಜಂಗುಳಿ ನಡುವೆಯೂ ಮಾರಕಾಸ್ತ್ರಗಳನ್ನು ಬೀಸಿ ಅಟ್ಟಹಾಸ ಮೆರೆಯುತ್ತಿದ್ದಾರೆ. ಇಂತಹ ಪುಡಿ ರೌಡಿಗಳ ನಿಗ್ರಹಕ್ಕೆ ಹಾಗೂ ಅಪರಾಧ ಕೃತ್ಯಗಳನ್ನು ತಡೆಯಲು ಪೊಲೀಸರು ಇನ್ನಿಲ್ಲದ ಪ್ರಯತ್ನವನ್ನು ನಡೆಸುತ್ತಿದ್ದಾರೆ. ಇದೀಗ ಮಾರಕಾಸ್ತ್ರ ಬೀಸುತ್ತಾ ಹಾಡಹಗಲೇ ಸುಲಿಗೆ ನಡೆಸುತ್ತಿದ್ದ ದುಷ್ಕಮಿಯೊಬ್ಬನನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಂಗಡಿ ಮಾಲಕಿಯ ಗಮನವನ್ನು ಬೇರೆಡೆಗೆ ಕೊಂಡೊಯ್ದದ ದುಷ್ಕಮಿ, ಏಕಾಏಕಿ ಅಂಗಡಿ ಗಲ್ಲಾ ಪೆಟ್ಟಿಗೆಗೆ ಕೈಹಾಕಿ ಹಣ ಎಗರಿಸಿದ್ದಾನೆ. ಆದರೆ ಮಹಿಳೆ ಸಮಯಪ್ರಜ್ಞೆ, ಮಹಿಳೆಯ ಪತಿಯ ಪ್ರತಿರೋಧಕ್ಕೆ ಸುಲಿಗೆ ವಿಫಲಗೊಂಡಿದ್ದಲ್ಲದೆ ಲಾಂಗ್ ಬೀಸಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಆದರೆ ಪಟ್ಟುಬಿಡದ ಅಂಗಡಿ ಮಾಲೀಕ, ಸ್ಥಳೀಯರೊಂದಿಗೆ ಸೇರಿಕೊಂಡು ದುಷ್ಕರ್ಮಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗಂಗಾ ನಗರದ ಮುಖ್ಯ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ತರಕಾರಿ ಅಂಗಡಿಗೆ ಬಂದ ದುಷ್ಕಮಿಯೊಬ್ಬ ಅಂಗಡಿ ಮಾಲಕಿಯ ಗಮನವನ್ನು ಬೇರೆಕಡೆಗೆ ಸೆಳೆದು ಅಂಗಡಿಯ ಡ್ರವರ್​ ತೆರೆದು ಹಣ ಕದ್ದಿದ್ದಾನೆ. ಈ ವಿಚಾರ ತಿಳಿಯುತ್ತಿದ್ದಂತೆ ಮಹಿಳೆಯ ಪತಿ ಪ್ರತಿರೋಧವೊಡ್ಡಿದ್ದು, ಪರಿಣಾಮವಾಗಿ ದುಷ್ಕಮಿ ಮಾರಕಾಸ್ತ್ರವನ್ನು ಬೀಸುತ್ತಾ ಜನಬಿಡ ಪ್ರದೇಶದಿದ ಕಾಲ್ಕಿತ್ತಿದ್ದಾನೆ. ದುಷ್ಕರ್ಮಿ ಬೀಸಿದ ಮಾರಕಾಸ್ತ್ರದಿಂದ ಶಿವರಾಜ್ ಕೂದಲೆಳೆ ಅಂತದಲ್ಲಿ ಪಾರಾಗಿದ್ದಾರೆ. ಈ ಎಲ್ಲಾ ಘಟನೆಗಳ ದೃಶ್ಯಾವಳಿ ಅಂಗಡಿಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿವೆ.

ಇಷ್ಟಕ್ಕೂ ಸುಮ್ಮನಾಗದ ಅಂಗಡಿ ಮಾಲೀಕ ಶಿವರಾಜ್, ಸ್ಥಳೀಯರ ಸಹಾಯದೊಂದಿಗೆ ಬೆನ್ನಟ್ಟಿ ದುಷ್ಕರ್ಮಿಯನ್ನು ಹಿಡಿದಿದ್ದಾರೆ. ನಂತರ ಆರ್.ಟಿ.ನಗರ ಪೊಲೀಸ್ ಠಾಣೆಗೆ ಆರೋಪಿಯನ್ನು ಒಪ್ಪಿಸಿದ್ದಾರೆ. ಶಾಪ್ ಮಾಲೀಕ ಶಿವರಾಜ್ ದೂರಿನ ಹಿನ್ನಲೆ ಅಪರಾಧ ಪ್ರಕರಣಗಳ ಹಿನ್ನಲೆಯುಳ್ಳ 20-25 ವರ್ಷದ ದುಷ್ಕರ್ಮಿಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:18 am, Thu, 18 August 22

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ