AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ಒತ್ತುವರಿ ತೆರವುಗೊಳಿಸುವಂತೆ ತಹಶೀಲ್ದಾರ್ ಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಒತ್ತುವರಿ ತೆರವು ಮಾಡುವಂತೆ ಪೂರ್ವ ಪಾರ್ಕ್ ರಿಡ್ಜ್ ಅಪಾರ್ಟ್ ಮೆಂಟ್ ಮಾಲೀಕರಿಗೆ ಬೆಂಗಳೂರು ತಹಶೀಲ್ದಾರ್ ಕೋರ್ಟ್ ನೀಡಿದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

Bangalore: ಒತ್ತುವರಿ ತೆರವುಗೊಳಿಸುವಂತೆ ತಹಶೀಲ್ದಾರ್ ಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ಒತ್ತುವರಿ ತೆರವುಗೊಳಿಸುವಂತೆ ತಹಶೀಲ್ದಾರ್ ಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
TV9 Web
| Edited By: |

Updated on:Sep 20, 2022 | 9:22 PM

Share

ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವು ವಿಚಾರದಲ್ಲಿ ನಗರದ ಕೆಲವು ಕಡೆಗಳಲ್ಲಿ ಬಿಬಿಎಂಪಿ (BBMP) ಅಧಿಕಾರಿಗಳು ಹಾಗೂ ನಿವಾಸಿಗಳ ನಡುವೆ ಜಟಾಪಟಿಗಳು ನಡೆಯುತ್ತಿವೆ. ಆದರೂ ಅಧಿಕಾರಿಗಳು ಮಾತ್ರ ತೆರವು ಕಾರ್ಯ ನಡೆಸಿಯೇ ಸಿದ್ಧ ಎಂದು ಪಣ ತೊಟ್ಟಿದ್ದಾರೆ. ಅದರಂತೆ ತಹಶೀಲ್ದಾರ್ ಹೈಕೋರ್ಟ್ ಒತ್ತುವರಿ ಮಾಡಿಕೊಂಡವರು ತಮ್ಮ ಸ್ವಂತ ಖರ್ಚಿನಲ್ಲೇ ಒತ್ತುವರಿ ತೆರವು ಮಾಡಬೇಕು ಎಂದು ಪೂರ್ವ ಪಾರ್ಕ್ ರಿಡ್ಜ್ ಅಪಾರ್ಟ್ ಮೆಂಟ್ ಮಾಲೀಕರಿಗೆ ಆದೇಶ ನೀಡಿತ್ತು. ಆದರೆ ಈಗ ತಹಶೀಲ್ದಾರ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಹೈಕೋರ್ಟ್ (High Court) ತಡೆಯಾಜ್ಞೆ ನೀಡಿದೆ. ಮುಂದಿನ ವಿಚಾರಣೆವರೆಗೂ ಯಾವುದೇ ಕಾರ್ಯಾಚರಣೆ, ಕ್ರಮ ಕೈಗೊಳ್ಳದಂತೆ ಕೋರ್ಟ್ ಸೂಚಿಸಿದ್ದು, ಆ ಮೂಲಕ  ಪೂರ್ವ ಪಾರ್ಕ್ ರಿಡ್ಜ್ ಅಪಾರ್ಟ್ ಮೆಂಟ್ ಮಾಲೀಕರಿಗೆ ನಿಟ್ಟುಸಿರುವ ಬಿಡುವಂತಾಗಿದೆ.

ತಹಶೀಲ್ದಾರ್ ಕೋರ್ಟ್ ಆದೇಶ ಏನಿತ್ತು?

ಒತ್ತುವರಿ ತೆರವು ಮಾಡುವಂತೆ ಬೆಂಗಳೂರು ತಹಶೀಲ್ದಾರ್ ಕೋರ್ಟ್ ಆದೇಶ ಮಾಡಿರುವ ಹಿನ್ನೆಲೆ ಬಾಗಮಾನೆ ಟೆಕ್ ಪಾರ್ಕ್ ಮತ್ತು ಪೂರ್ವಾ ಪಾರ್ಕಿಡ್ಜ್ ಸಂಕಷ್ಟ ಎದುರಾಗಿತ್ತು. ಸರ್ವೇ ನಂಬರ್ 35/1, 35/2, 35/3, 38/2, ಮತ್ತು ಸರ್ವೇ ನಂಬರ್ 85 ರಲ್ಲಿನ ಒತ್ತುವರಿ ತೆರವು ಮಾಡುವಂತೆ ಕೋರ್ಟ್ ಆದೇಶ ಹೊರಡಿಸಿದ್ದು, ಒತ್ತುವರಿದಾರರೆ ತಮ್ಮ ಸ್ವಂತ ಖರ್ಚಿನಲ್ಲೇ ತೆರವು ಮಾಡುವಂತೆ ಸೂಚನೆ ನೀಡಿದೆ. ಇಲ್ಲವಾದಲ್ಲಿ ಬಿಬಿಎಂಪಿ ಸರ್ವೆಯರ್ ನೆರವಿನಿಂದ ತೆರವುಗೊಳಿಸಬೇಕು, ಅದಕ್ಕಾಗುವ ಖರ್ಚನ್ನು ಕೂಡ ಒತ್ತುವರಿದಾರರೇ ಭರಿಸಬೇಕು.  ಒಂದೊಮ್ಮೆ ಒತ್ತುವರಿದಾರರು ತೆರವು ಮಾಡದಿದ್ದರೆ ಸರ್ಕಾರ ತೆರವು ಕಾರ್ಯಾಚರಣೆಗೆ ಮುಂದಾಗಬೇಕು. ಅಲ್ಲದೆ ಒತ್ತುವರಿ ಮಾಡಿಕೊಂಡವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಕೋರ್ಟ್ ಹೇಳಿದೆ. ಅದರಂತೆ ಬಾಗಮಾನೆ ಮತ್ತು ಪೂರ್ವ ಪ್ರಾಕಿಡ್ಜ್​ಗೆ ಸಂಕಷ್ಟ ಎದುರಾಗಿದೆ.

ಮತ್ತಷ್ಟು ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:22 pm, Tue, 20 September 22

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ