AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rain: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಸೂಚನೆ

Bengaluru Raion Updates: ಬೆಂಗಳೂರಿನಲ್ಲೂ ಕಳೆದ ಎರಡು ದಿನದಿಂದ ಸಾಧಾರಣ ಮಳೆ ಆಗಿದೆ. ಅದರಂತೆ ಇಂದು ಗುಡುಗು ಸಮೆತ ಮಳೆಯಾಗಬಹುದೆಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

Bangalore Rain: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಸೂಚನೆ
ಪ್ರಾತಿನಿಧಿಕ ಚಿತ್ರ
sandhya thejappa
|

Updated on:Feb 22, 2021 | 2:11 PM

Share

ಬೆಂಗಳೂರು: ಮೂರು ನಾಲ್ಕು ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಇಂದು (ಫೆಬ್ರವರಿ 22) ಇಂದು ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಕೇರಳದಲ್ಲಿ ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುತ್ತದೆ ಎಂದು ತಿಳಿದುಬಂದಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಹೀಗಾಗಿ ರಾಜ್ಯದ ಹಲವೆಡೆ ಕಳೆದ ನಾಲ್ಕು ದಿನದಿಂದ ಮಳೆ ಆಗುತ್ತಿದೆ. ಬೆಂಗಳೂರಿನಲ್ಲೂ ಕಳೆದ ಎರಡು ದಿನದಿಂದ ಸಾಧಾರಣ ಮಳೆ ಆಗಿದೆ. ಅದರಂತೆ ಇಂದು ಗುಡುಗು ಸಮೆತ ಮಳೆಯಾಗಬಹುದೆಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ನಿನ್ನೆ ಬೆಳಗ್ಗೆ ಕೂಡಾ ಬೆಂಗಳೂರಿನಲ್ಲಿ ಸಾಧಾರಣ ಮಟ್ಟಿಗೆ ಮಳೆಯಾಗಿದೆ. ಇಂದು ಬೆಳಗ್ಗೆ ಹೊತ್ತಿಗೆ ಸ್ವಲ್ಪ ಚಳಿಗಾಳಿ ಮತ್ತು ಮೋಡ ಮುಸುಕಿದ ವಾತಾವರಣವೇ ಇತ್ತು. ಆದರೆ ಮಧ್ಯಾಹ್ನ ಒಂದು ಗಂಟೆಯಿಂದ ಬಿಸಿಲು ಇದೆ.

ಅಕಾಲಿಕ ಮಳೆಗೆ ಹೈರಣಾದ ರೈತರು ರಾಜ್ಯದಲ್ಲಿ ಸುಮಾರು ನಾಲ್ಕೈದು ದಿನಗಳಿಂದ ಹಲವೆಡೆ ಸುರಿದ ಮಳೆಗೆ ಬೆಳೆ ಕೂಡಾ ನಾಶವಾಗಿರುವುದು ತಿಳಿದುಬಂದಿದ್ದು, ರೈತರು ಕಂಗಲಾಗಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಇಂದು ಸುರಿದ ಅಕಾಲಿಕ ಮಳೆ ಹಿನ್ನೆಲೆ ಅಪಾರ ಪ್ರಮಾಣದ ದ್ರಾಕ್ಷಿ, ತರಕಾರಿ ಬೆಳೆ ನಾಶವಾಗಿದ್ದು, ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ಲು ಗ್ರಾಮ ಸೇರಿದಂತೆ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿರುವುದು ತಿಳಿದುಬಂದಿದೆ.

ಇನ್ನು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಭಾರಿ ಮಳೆಯಾಗಿದ್ದು, ಐದಾರು ಅಂಗಡಿಗಳಿಗೆ ಮಳೆ ನೀರು ನುಗ್ಗಿದೆ. ನೀರು ನುಗ್ಗಿದ ಹಿನ್ನೆಲೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಅಲ್ಲದೇ ಕೊಯ್ಲು ಮಾಡಿ ಒಣ ಹಾಕಿದ ನೂರಾರು ಕ್ವಿಂಟಾಲ್ ರಾಗಿ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಶಿವಮೊಗ್ಗ ನಗರದಲ್ಲಿ ಧಾರಾಕಾರ ಮಳೆಯಿಂದ ವಾಹನ ಸವಾರರು ಪರದಾಟ ಪಟ್ಟರು. ಅವಳಿ ನಗರ ಗದಗ-ಬೆಟಗೇರಿಯಲ್ಲಿ ಧೋ ಅಂತ ಸುರಿದ ಮಳೆಯಿಂದ ವಿದ್ಯುತ್ ಕಟ್ ಆಗಿದೆ. ಇದನ್ನೂ ಓದಿ:

Karnataka Weather: ಕರ್ನಾಟಕದ ಹಲವೆಡೆ ಭಾರಿ ಮಳೆ..! ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಹವಾಮಾನ ಇಲಾಖೆ ಸೂಚನೆ

ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಕೇಂದ್ರ ತೆರೆದಿದ್ದರೂ ಅತ್ತ ಕಡೆ ಸುಳಿಯದ ರೈತರು..!

Published On - 1:35 pm, Mon, 22 February 21

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!