AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rain: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಸೂಚನೆ

Bengaluru Raion Updates: ಬೆಂಗಳೂರಿನಲ್ಲೂ ಕಳೆದ ಎರಡು ದಿನದಿಂದ ಸಾಧಾರಣ ಮಳೆ ಆಗಿದೆ. ಅದರಂತೆ ಇಂದು ಗುಡುಗು ಸಮೆತ ಮಳೆಯಾಗಬಹುದೆಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

Bangalore Rain: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಸೂಚನೆ
ಪ್ರಾತಿನಿಧಿಕ ಚಿತ್ರ
sandhya thejappa
|

Updated on:Feb 22, 2021 | 2:11 PM

Share

ಬೆಂಗಳೂರು: ಮೂರು ನಾಲ್ಕು ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಇಂದು (ಫೆಬ್ರವರಿ 22) ಇಂದು ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಕೇರಳದಲ್ಲಿ ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುತ್ತದೆ ಎಂದು ತಿಳಿದುಬಂದಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಹೀಗಾಗಿ ರಾಜ್ಯದ ಹಲವೆಡೆ ಕಳೆದ ನಾಲ್ಕು ದಿನದಿಂದ ಮಳೆ ಆಗುತ್ತಿದೆ. ಬೆಂಗಳೂರಿನಲ್ಲೂ ಕಳೆದ ಎರಡು ದಿನದಿಂದ ಸಾಧಾರಣ ಮಳೆ ಆಗಿದೆ. ಅದರಂತೆ ಇಂದು ಗುಡುಗು ಸಮೆತ ಮಳೆಯಾಗಬಹುದೆಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ನಿನ್ನೆ ಬೆಳಗ್ಗೆ ಕೂಡಾ ಬೆಂಗಳೂರಿನಲ್ಲಿ ಸಾಧಾರಣ ಮಟ್ಟಿಗೆ ಮಳೆಯಾಗಿದೆ. ಇಂದು ಬೆಳಗ್ಗೆ ಹೊತ್ತಿಗೆ ಸ್ವಲ್ಪ ಚಳಿಗಾಳಿ ಮತ್ತು ಮೋಡ ಮುಸುಕಿದ ವಾತಾವರಣವೇ ಇತ್ತು. ಆದರೆ ಮಧ್ಯಾಹ್ನ ಒಂದು ಗಂಟೆಯಿಂದ ಬಿಸಿಲು ಇದೆ.

ಅಕಾಲಿಕ ಮಳೆಗೆ ಹೈರಣಾದ ರೈತರು ರಾಜ್ಯದಲ್ಲಿ ಸುಮಾರು ನಾಲ್ಕೈದು ದಿನಗಳಿಂದ ಹಲವೆಡೆ ಸುರಿದ ಮಳೆಗೆ ಬೆಳೆ ಕೂಡಾ ನಾಶವಾಗಿರುವುದು ತಿಳಿದುಬಂದಿದ್ದು, ರೈತರು ಕಂಗಲಾಗಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಇಂದು ಸುರಿದ ಅಕಾಲಿಕ ಮಳೆ ಹಿನ್ನೆಲೆ ಅಪಾರ ಪ್ರಮಾಣದ ದ್ರಾಕ್ಷಿ, ತರಕಾರಿ ಬೆಳೆ ನಾಶವಾಗಿದ್ದು, ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ಲು ಗ್ರಾಮ ಸೇರಿದಂತೆ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿರುವುದು ತಿಳಿದುಬಂದಿದೆ.

ಇನ್ನು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಭಾರಿ ಮಳೆಯಾಗಿದ್ದು, ಐದಾರು ಅಂಗಡಿಗಳಿಗೆ ಮಳೆ ನೀರು ನುಗ್ಗಿದೆ. ನೀರು ನುಗ್ಗಿದ ಹಿನ್ನೆಲೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಅಲ್ಲದೇ ಕೊಯ್ಲು ಮಾಡಿ ಒಣ ಹಾಕಿದ ನೂರಾರು ಕ್ವಿಂಟಾಲ್ ರಾಗಿ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಶಿವಮೊಗ್ಗ ನಗರದಲ್ಲಿ ಧಾರಾಕಾರ ಮಳೆಯಿಂದ ವಾಹನ ಸವಾರರು ಪರದಾಟ ಪಟ್ಟರು. ಅವಳಿ ನಗರ ಗದಗ-ಬೆಟಗೇರಿಯಲ್ಲಿ ಧೋ ಅಂತ ಸುರಿದ ಮಳೆಯಿಂದ ವಿದ್ಯುತ್ ಕಟ್ ಆಗಿದೆ. ಇದನ್ನೂ ಓದಿ:

Karnataka Weather: ಕರ್ನಾಟಕದ ಹಲವೆಡೆ ಭಾರಿ ಮಳೆ..! ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಹವಾಮಾನ ಇಲಾಖೆ ಸೂಚನೆ

ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಕೇಂದ್ರ ತೆರೆದಿದ್ದರೂ ಅತ್ತ ಕಡೆ ಸುಳಿಯದ ರೈತರು..!

Published On - 1:35 pm, Mon, 22 February 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ