AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore News: ಶಾಲೆಗಳಿಂದ ಹೆಚ್ಚಾಗುತ್ತಿರುವ ಟ್ರಾಫಿಕ್; ವಾಹನ ದಟ್ಟಣೆ ನಿಯಂತ್ರಣಕ್ಕೆ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಸೂಚನೆ

ಬೆಂಗಳೂರು ನಗರದಲ್ಲಿನ ಖಾಸಗಿ ಶಾಲೆಗಳ ವ್ಯಾಪ್ತಿಯಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಹೀಗಾಗಿ ಸೆಕ್ಯೂರಿಟಿ ಗಾರ್ಡ್​ಗಳನ್ನೇ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ನಿಯೋಜನೆ ಮಾಡಬೇಕು ಎಂದು ಪೊಲೀಸರು ಶಾಲೆಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Bangalore News: ಶಾಲೆಗಳಿಂದ ಹೆಚ್ಚಾಗುತ್ತಿರುವ ಟ್ರಾಫಿಕ್; ವಾಹನ ದಟ್ಟಣೆ ನಿಯಂತ್ರಣಕ್ಕೆ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಸೂಚನೆ
ಸಿಬ್ಬಂದಿಗಳಿಗೆ ತರಬೇತಿ
TV9 Web
| Edited By: |

Updated on:Jul 21, 2022 | 7:47 AM

Share

ಬೆಂಗಳೂರು: ಅತಿ ಹೆಚ್ಚು ವಾಹನ ಓಡಾಟ ಇರುವ ನಗರದಲ್ಲಿ ಇದೀಗ ಶಾಲಾ ಕಾಲೇಜುಗಳಿಂದಲೂ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ತಮ್ಮ ಮಕ್ಕಳನ್ನು ಶಾಲಾ ಕಾಲೇಜುಗಳಿಗೆ ಬಿಡಲು ಬರುವ ಪೋಷಕರು ವಾಹನಗಳನ್ನು ಮುಖ್ಯ ರಸ್ತೆಗಳಲ್ಲಿಯೇ ಪಾರ್ಕ್ ಮಾಡುವುದರಿಂದ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ. ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಬೆಂಗಳೂರು ನಗರ ಸಂಚಾರ ಪೊಲೀಸರು, ಖಾಸಗಿ ಶಾಲೆಗಳಿಗೆ ಎಚ್ಚರಿಕೆ ನೀಡಿದ್ದಾರೆ. ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಶಾಲೆಗಳು ಸಿಬ್ಬಂದಿಗಳನ್ನು ನೇಮಿಸುವಂತೆ ಸೂಚನೆ ನೀಡಿದ್ದಾರೆ.

ನಗರದಲ್ಲಿ ಸರಿಯಾದ ವಾಹನ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಹಿನ್ನೆಲೆ  ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕ್ ಮಾಡಲಾಗುತ್ತಿದೆ. ಈ ಸಮಸ್ಯೆ ಶಾಲಾ ಕಾಲೇಜುಗಳಿಂದಲೂ ಉದ್ಭವಿಸಲು ಆರಂಭವಾಗಿದೆ. ಶಾಲಾ ವಾಹನ ಸೇರಿದಂತೆ ಮಕ್ಕಳನ್ನು ಬಿಡಲು ಬರುವ ಪೋಷಕರು ವಾಹನಗಳನ್ನು ಮುಖ್ಯರಸ್ತೆಗಳಲ್ಲಿಯೇ ಪಾರ್ಕ್ ಮಾಡುತ್ತಿದ್ದಾರೆ. ಇದರಿಂದಾಗಿ ಇತರೆ ವಾಹನ ಸವಾರರಿಗೆ ಅಡಚಣೆ ಉಂಟಾಗುತ್ತಿದೆ. ಇದೇ ಕಾರಣಕ್ಕೆ ಪೊಲೀಸರು ಶಾಲೆಗಳಿಗೆ ನೋಟಿಸ್ ಜಾರಿ ಮಾಡಿದೆ.

ಶಾಲಾ ಕಾಲೇಜುಗಳು ಮಾರ್ಗಸೂಚಿಗಳನ್ನು ಪಾಲಿಸುವಂತೆ ನೋಟಿಸ್ ಜಾರಿ ಮಾಡಿದ ನಗರ ಪೊಲೀಸ್ ಇಲಾಖೆ, ಎಲ್ಲಾ ಶಾಲೆಗಳಿಗೆ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡುವುದು ಅಸಾಧ್ಯವಾಗಿರುವುದರಿಂದ ಟ್ರಾಫಿಕ್ ನಿಯಂತ್ರಣಕ್ಕೆ ಶಾಲೆಗಳೆ ಸಿಬ್ಬಂದಿಗಳನ್ನು ನಿಯೋಜನೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ವಾಹನ ದಟ್ಟಣೆ ನಿಯಂತ್ರಣಕ್ಕೆ ತರಲು ಶಾಲೆಗಳ ಸೆಕ್ಯೂರಿಟಿ ಗಾರ್ಡ್​ಗಳನ್ನೇ ನೇಮಿಸಬೇಕು. ಸಿಬ್ಬಂದಿಗಳಿಗೆ ತರಬೇತಿ ನೀಡಲು ಪೊಲೀಸ್ ಇಲಾಖೆ ಸಿದ್ಧವಿದೆ ಎಂದಿದೆ.

ಎಲ್ಲಾ ಶಾಲೆಗಳು ಈ ನಿಯಮವನ್ನು ಪಾಲಿಸಲೇಬೇಕು. ಶಾಲಾ ವಾಹನಗಳನ್ನು ಆಯಾ ಶಾಲೆಗಳ ಪಾರ್ಕಿಂಗ್ ಸ್ಥಳದಲ್ಲಿಯೇ  ಪಾರ್ಕ್ ಮಾಡಬೇಕು. ರಸ್ತೆಯಲ್ಲಿ ನಿಲ್ಲಿಸಬಾರದು. ಒಂದು ವೇಳೆ ಶಾಲಾ ವಾಹನಗಳನ್ನು ಮತ್ತು ಖಾಸಗಿ ವಾಹನಗಳನ್ನು ರಸ್ತೆ ಪಕ್ಕದಲ್ಲಿಯೇ ಪಾರ್ಕ್ ಮಾಡಿದರೆ ಅಂತಹ ವಾಹನಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Published On - 7:39 am, Thu, 21 July 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?