AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಣ್ಣೆಯಿಂದ ತಲೆಗೆ ಹೊಡೆದು ಮಹಿಳೆಯ ಬರ್ಬರ ಹತ್ಯೆ: ಆರೋಪಿಗಾಗಿ ಪೊಲೀಸರಿಂದ ಹುಡುಕಾಟ

ಫಿರ್ಮಾಗೆ ಯಾದಗಿರಿಯ ಮೆಹಬೂಬ್ ಪರಿಚಯವಾಗಿದ್ದು, ಶನಿವಾರ ಫಿರ್ಮಾ ಮನೆಗೆ ಮೆಹಬೂಬ್ ಬಂದಿದ್ದಾನೆ. ಈ ವೇಳೆ ಇಬ್ಬರ ನಡುವೆ ಜಗಳವಾಗಿ ಕೊಲೆ ಮಾಡಿರುವ ಶಂಕೆ ಇದೆ. ಸದ್ಯ ಪರಾರಿಯಾಗಿರುವ ಮೆಹಬೂಬ್‌ಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

ದೊಣ್ಣೆಯಿಂದ ತಲೆಗೆ ಹೊಡೆದು ಮಹಿಳೆಯ ಬರ್ಬರ ಹತ್ಯೆ: ಆರೋಪಿಗಾಗಿ ಪೊಲೀಸರಿಂದ ಹುಡುಕಾಟ
ಪ್ರಾತಿನಿಧಿಕ ಚಿತ್ರ
preethi shettigar
| Edited By: |

Updated on:Mar 24, 2021 | 1:47 PM

Share

ಬೆಂಗಳೂರು: ದೊಣ್ಣೆಯಿಂದ ತಲೆಗೆ ಹೊಡೆದು ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ. ಯಾದಗಿರಿ ಮೂಲದ 38 ವರ್ಷದ ಫಿರ್ಮಾ ಕೊಲೆಯಾದ ಮಹಿಳೆ. ನಗರದಲ್ಲಿ ಕೆಲಸಕ್ಕೆ ಸೇರಿಕೊಂಡು ಪರಪ್ಪನ ಅಗ್ರಹಾರದಲ್ಲಿ ನೆಲೆಸಿದ ಫಿರ್ಮಾಳನ್ನು ಮಗ ಕೆಲಸಕ್ಕೆ ಹೋಗಿದ್ದಾಗ ಮೆಹಬೂಬ್ ಎಂಬಾತ ಕೊಲೆ ಮಾಡಿರುವ ಶಂಕೆ ಇದೆ.

ಫಿರ್ಮಾಗೆ ಯಾದಗಿರಿಯ ಮೆಹಬೂಬ್ ಪರಿಚಯವಾಗಿದ್ದು, ಶನಿವಾರ ಫಿರ್ಮಾ ಮನೆಗೆ ಮೆಹಬೂಬ್ ಬಂದಿದ್ದಾನೆ. ಈ ವೇಳೆ ಇಬ್ಬರ ನಡುವೆ ಜಗಳವಾಗಿ ಕೊಲೆ ಮಾಡಿರುವ ಶಂಕೆ ಇದೆ. ಸದ್ಯ ಪರಾರಿಯಾಗಿರುವ ಮೆಹಬೂಬ್‌ಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆ ಮಗ ಪರಪ್ಪನ ಅಗ್ರಹಾರ ಠಾಣೆಯಲ್ಲಿ ದೂರು ನೀಡಿದ್ದಾನೆ.

ಹಲವು ವರ್ಷಗಳ ಹಿಂದೆಯೇ ಫಿರ್ಮಾಳ ಗಂಡ ಆಕೆಯನ್ನು ಬಿಟ್ಟು ಹೋಗಿದ್ದ. ಹಾಗಾಗಿ ಫಿರ್ಮಾ ತನ್ನ ಊರು ಯಾದಗಿರಿ ಬಿಟ್ಟು ಬೆಂಗಳೂರಿನ ಪರಪ್ಪನ ಅಗ್ರಹಾರದ ಸಮೀಪವಿರುವ ನಾಯ್ದು ಲೇಔಟ್​ನಲ್ಲಿ ವಾಸವಾಗಿದ್ದಳು. ಈಕೆಗೆ ಮೂವರು ಮಕ್ಕಳಿದ್ದಾರೆ. ಈ ಪೈಕಿ ತನ್ನ ಎರಡನೇ ಮಗ ಹುಸೇನ್​ನೊಂದಿಗೆ ನೆಲೆಸಿದ್ದಳು. ಈಕೆ ಗಾರೆ ಕೆಲಸ ಮಾಡಿ ತನ್ನ ಜೀವನ ಸಾಗಿಸುತ್ತಿದ್ದಳು. ಈ ನಡುವೆ ಯಾದಗಿರಿ ಮೂಲಕ ಮೆಹಬೂಬ್ ಎಂಬಾತ ಆಗಾಗ ಫಿರ್ಮಾಳ ಮನೆಗೆ ಬಂದು ಹೋಗುತ್ತಿದ್ದ. ಶನಿವಾರ ಕೂಡ ಹುಸೇನ್ ಕೆಲಸಕ್ಕೆ ಹೋಗಿದ್ದಾಗ ಮೆಹಬೂಬ್ ಫಿರ್ಮಾಳ ಮನೆಗೆ ಬಂದಿದ್ದಾನೆ. ಈ ವೇಳೆ ಇವರಿಬ್ಬರ ನಡುವೆ ಜಗಳ ಶುರುವಾಗಿದೆ.  ಮೆಹಬೂಬ್  ಬಂದು ಹೋದ ಎರಡು ಗಂಟೆಗಳ ಬಳಿಕ ಮನೆಯಿಂದ ಕೂಗಾಡ, ಚೀರಾಟ ಕೇಳಿ ಬಂದಿತ್ತು. ಕೆಲ ಹೊತ್ತಾದ ಮೇಲೆ ಆ ಶಬ್ದ ನಿಂತು ಹೋಗಿದೆ. ಬಳಿಕ ಮೆಹಬೂಬ್ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಮನೆ ಬಳಿ ಬಂದು ನೋಡಿದ ಅಕ್ಕಪಕ್ಕದ ಮನೆಯವರಿಗೆ ಫಿರ್ಮಾಳ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

ತಕ್ಷಣವೇ ಹುಸೇನ್​ಗೆ ಕರೆ ಮಾಡಿ ಈ ವಿಷಯ ತಿಳಿಸಿದ್ದಾರೆ. ಬಳಿಕ ಫಿರ್ಮಾಳ ಮಗ ಹುಸೇನ್ ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಫಿರ್ಮಾಳ ಕೊಲೆ ಮುನ್ನ ಮೆಹಬೂಬ್ ಬಂದು ಹೋಗಿದ್ದು ಮೆಹಬೂಬ್ ಮೇಲೆ ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ಆರೋಪಿಯ ಹುಡುಕಾಟದಲ್ಲಿದ್ದಾರೆ.

ವಿಜಯಪುರದಲ್ಲಿ ಅಡ್ಡಬಂದ ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಕಾರು ಪಲ್ಟಿ: ರಸ್ತೆಯಲ್ಲಿ ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಕಾರ್ ಪಲ್ಟಿಯಾದ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಹೊರ ಭಾಗದಲ್ಲಿನ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ‌ ನಡೆದಿದೆ. ಕಾರಿನಲ್ಲಿದ್ದ ತಂದೆ ಮತ್ತು ಮಗ ಅದೃಷ್ಟವಶಾತ್ ಪಾರಾಗಿದ್ದಾರೆ. ಹೆದ್ದಾರಿ ಪಕ್ಕದಲ್ಲಿದ್ದ ಮರದ ಮೇಲೆ ಕಾರ್​ ಎರಗಿದ್ದರ ಪರಿಣಾಮ ಮರ ಎರಡು ಹೋಳಾಗಿ ಬಿದ್ದಿದೆ.

CAR ACCIDENT

ಕಾರು ಮರಕ್ಕೆ ದಿಕ್ಕಿ ಹೊಡೆದಿರುವ ದೃಶ್ಯ

ಕಲಬುರಗಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು, ರುದ್ರಗೌಡ ಪಾಟೀಲ್ ಹಾಗೂ ಅವರ ಪುತ್ರ ಸಾಯಿಪ್ರಸಾದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

Road Accident ಬೆಂಗಳೂರು, ಚಿತ್ರದುರ್ಗದಲ್ಲಿ ಪ್ರತ್ಯೇಕ ಅಪಘಾತ.. ಪಾರ್ಟಿ ಮುಗಿಸಿ ಸ್ನೇಹಿತನ ಹೊಸ ಬೈಕ್​ ಏರಿದ್ದವ ಅಪಘಾತದಲ್ಲಿ ಸಾವು

Accident | ಬೆಳಗಿನ ಜಾವ ಆಕ್ಸಿಡೆಂಟ್​: ನಿಂತಿದ್ದ ತೈಲ ಟ್ಯಾಂಕರ್​ಗೆ ಕಾರ್​ ಡಿಕ್ಕಿ, ಭೀಕರ ಅಪಘಾತದಲ್ಲಿ 6 ವಿದ್ಯಾರ್ಥಿಗಳ ಸಾವು

Published On - 11:19 am, Tue, 23 March 21

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ