AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ಸಿಗ್ನಲ್‌ ಜಂಪ್‌ ಮಾಡಿದ ವ್ಯಕ್ತಿಗೆ ಕಾಡಿದ ಪಾಪ ಪ್ರಜ್ಞೆ, ಟ್ವೀಟ್ ನೋಡಿ ಶಾಕ್ ಆದ ಪೊಲೀಸರು; ಮುಂದೇನಾಯ್ತು?

ಸಿಗ್ನಲ್ ಜಂಪ್ ಮಾಡಿದ ನಂತರ ವ್ಯಕ್ತಿಯೊಬ್ಬರು ಟ್ವಿಟರ್​ನಲ್ಲಿ ತಾನು ದಂಡ ಕಟ್ಟುತ್ತೇನೆ ಎಂದು ಪೊಲೀಸರಲ್ಲಿ ಮನವಿ ಮಾಡಿದ್ದಾನೆ. ಈ ಟ್ವೀಟ್ ನೋಡಿದ ಬೆಂಗಳೂರು ಪೊಲೀಸರು ಶಾಕ್ ಆಗಿದ್ದಾರೆ.

Bangalore: ಸಿಗ್ನಲ್‌ ಜಂಪ್‌ ಮಾಡಿದ ವ್ಯಕ್ತಿಗೆ ಕಾಡಿದ ಪಾಪ ಪ್ರಜ್ಞೆ, ಟ್ವೀಟ್ ನೋಡಿ ಶಾಕ್ ಆದ ಪೊಲೀಸರು; ಮುಂದೇನಾಯ್ತು?
ಸಿಗ್ನಲ್‌ ಜಂಪ್‌ ಮಾಡಿದ ಪಾಪ ಪ್ರಜ್ಞೆ ಮೂಡಿ ದಂಡ ಪಾವತಿಸಲು ಮುಂದಾದ ವಾಹನ ಸವಾರ
TV9 Web
| Edited By: |

Updated on:Sep 29, 2022 | 3:16 PM

Share

ಬೆಂಗಳೂರು: ನಗರದಲ್ಲಿ ಸಂಚಾರ ನಿಮಯಗಳನ್ನು ಉಲ್ಲಂಘಿಸಿಕೊಂಡು ಹೋಗುವುದು ಸಾಮಾನ್ಯ. ಒಂದಷ್ಟು ಮಂದಿಗೆ ಫೈನ್ ಬಿದ್ದರೆ ಇನ್ನೊಂದಷ್ಟು ಮಂದಿ ಇದರಿಂದ ತಪ್ಪಿಕೊಳ್ಳುತ್ತಾರೆ. ಹೀಗಿದ್ದಾಗ ವಾಹನ ಸವಾರನೊಬ್ಬ ಸಿಗ್ನಲ್ ಜಂಪ್ (Signal Jump) ಮಾಡಿ ಮನೆಗೆ ತೆರಳಿದಾಗ ನಿಯಮ ಉಲ್ಲಂಘನೆಯ ಪಾಪಾ ಪ್ರಜ್ಞೆ ಕಾಡಲು ಆರಂಭವಾಗಿದೆ. ಈ ಬಗ್ಗೆ ಸ್ವತಃ ನಿಯಮ ಉಲ್ಲಂಘನೆ ಮಾಡಿದಾತನೇ ತನ್ನ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪೂರ್ವಭಾವಿಯಾಗಿ ದಂಡದ ಮೊತ್ತವನ್ನು ಕಟ್ಟಲು ಸಿದ್ಧರಿರುವುದಾಗಿ ಹೇಳಿದ್ದಾರೆ. ಈ ಟ್ವೀಟ್ ಅನ್ನು ನೋಡಿದ ಬೆಂಗಳೂರು ಪೊಲೀಸರು (Bangalore Police) ಶಾಕ್ ಆಗಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆ ಮಾಡಿದ ನಂತರವೂ ಪ್ರಾಮಾಣಿಕತೆ ಮರೆಯಲು ಮುಂದಾದ ಘಟನೆ ಶಾಂತಿನಗರದಲ್ಲಿ ನಡೆದಿದೆ. ಅದೇನು ಅರ್ಜೆಂಟ್ ಇತ್ತೋ ಏನೋ ಗೊತ್ತಿಲ್ಲ, ಬಾಲ ಕೃಷ್ಣ್‌ ಬಿರ್ಲಾ ಎಂಬ ವ್ಯಕ್ತಿ ಶಾಂತಿನಗರದಲ್ಲಿ ಸಿಗ್ನಲ್‌ ಜಂಪ್ ಮಾಡಿ ಮನೆಗೆ ತೆರಳಿದ್ದಾರೆ. ಅಷ್ಟರಲ್ಲಾಗಲೇ ಸಿಗ್ನಲ್‌ ಜಂಪ್‌ ಮಾಡಿ ನಿಯಮ ಉಲ್ಲಂಘಿಸಿರುವ ಬಗ್ಗೆ ಪಾಪಾ ಪ್ರಜ್ಞೆ ಕಾಡಲು ಆರಂಭವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿದ ಬಾಲ ಕೃಷ್ಣ್‌ ಬಿರ್ಲಾ, ಪ್ರಾಯಶ್ಚಿತವಾಗಿ ಫೈನ್ ಕಟ್ಟಬೇಕೆಂದು ಮುಂದೆ ಬಂದಿದ್ದಾರೆ.

ಅಷ್ಟೇ ಅಲ್ಲದೆ, ಪೂರ್ವಭಾವಿಯಾಗಿ ನಾನು ದಂಡ ಪಾವತಿಬಹುದೇ ಎಂದು ಬಾಲ ಕೃಷ್ಣ್‌ ಟ್ರಾಫಿಕ್‌ ಪೊಲೀಸರನ್ನು ಟ್ಯಾಗ್ ಮಾಡಿ ಪ್ರಶ್ನಿಸಿದ್ದಾರೆ. ಈ ಟ್ವೀಟ್ ನೋಡಿದ ಬೆಂಗಳೂರು ಪೊಲೀಸರು, ಇವರ ಪ್ರಾಮಾಣಿಕತೆ ನೋಡಿ ಶಾಕ್ ಆಗಿದ್ದಾರೆ. ಅಲ್ಲದೆ ಬಹಳ ನಾಜೂಕಾಗಿ ರಿಪ್ಲೇ ಕೂಡ ನೀಡಿದ್ದಾರೆ. ಪೂರ್ವಭಾವಿಯಾಗಿ ದಂಡ ಕಟ್ಟಬಹುದೇ ಎಂಬ ಬಿರ್ಲಾ ಅವರ ಪ್ರಶ್ನೆಗೆ ಉತ್ತರಿಸಿದ ಪೊಲೀಸರು,  ನಾವು ನೊಟೀಸ್‌ ಕೊಟ್ಟ ಮೇಲೆ ದಂಡದ ಮೊತ್ತ ಪಾವತಿಸಿ ಎಂದು ಹೇಳಿದ್ದಾರೆ.

ಪೊಲೀಸರು ಏನೋ ನೋಟಿಸ್ ಮನೆಗೆ ತಲುಪಿದ ನಂತರ ದಂಡ ಕಟ್ಟಲು ಸೂಚಿಸಿದ್ದಾರೆ. ಆದರೆ ಬಿರ್ಲಾ ಸಿಗ್ನಲ್ ಜಂಪ್ ಮಾಡಿದ್ದಲ್ಲಿ ಸಿಸಿ ಕ್ಯಾಮರಾ ಇತ್ತೇ? ಅಥವಾ ಸಿಸಿ ಕ್ಯಾಮರಾದಲ್ಲಿ ಜಿಗ್ನಲ್ ಜಂಪ್ ಮಾಡಿರುವುದು ಸೆರೆಯಾಗಿದೆಯೇ? ಎಂಬುದು ಮುಂದಿರುವ ಪ್ರಶ್ನೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:16 pm, Thu, 29 September 22

Follow Us
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ