AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಮತ್ತೊಂದು ಟೋಲ್ ಉದ್ಘಾಟನೆಗೆ ಸಜ್ಜು, ಕಾಮಗಾರಿಯೇ ಮುಗಿದಿಲ್ಲ!

ಹಾಸನದಿಂದ ಮಂಗಳೂರನ್ನು ಸಂಪರ್ಕಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯ 700 ಕೋಟಿ ರೂ. ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿ ಇನ್ನೂ ಅಪೂರ್ಣವಾಗಿದೆ. ಆದರೂ, ಆಲೂರು ತಾಲ್ಲೂಕಿನಲ್ಲಿ ಹೊಸ ಟೋಲ್ ಪ್ಲಾಜಾ ಆರಂಭಿಸಲು ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಇದರಿಂದ ಜನರ ಆಕ್ರೋಶ ಹೆಚ್ಚಾಗಿದ್ದು, ಕಾಮಗಾರಿ ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹಕ್ಕೆ ವಿರೋಧ ವ್ಯಕ್ತವಾಗಿದೆ. ಸ್ಥಳೀಯರು ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಹಾಸನ: ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಮತ್ತೊಂದು ಟೋಲ್ ಉದ್ಘಾಟನೆಗೆ ಸಜ್ಜು, ಕಾಮಗಾರಿಯೇ ಮುಗಿದಿಲ್ಲ!
ಬೈರಾಪುರ ಬಳಿಯ ಟೋಲ್ ಪ್ಲಾಜಾ
ಮಂಜುನಾಥ ಕೆಬಿ
| Edited By: |

Updated on: Dec 14, 2024 | 4:27 PM

Share

ಹಾಸನ, ಡಿಸೆಂಬರ್ 14: ರಾಜಧಾನಿ ಬೆಂಗಳೂರು ಹಾಗೂ ಬಂದರು ನಗರಿ ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ರಸ್ತೆ ಬರೊಬ್ಬರಿ ಎರಡು ದಶಕಗಳಿಂದಲೂ ಅವ್ಯವಸ್ಥೆಯ ಆಗರವಾಗಿದೆ. ಈ ವರ್ಷ ಮಳೆಗಾಲದಲ್ಲಿ ಹಲವು ಕಡೆ ಭೂ ಕುಸಿತವಾಗಿ ಸ್ವತಃ ಸಿಎಂ ಸಿದ್ದರಾಮಯ್ಯ ಕೂಡ ಸ್ಥಳ ಪರಿಶೀಲನೆ ಮಾಡಿ ಹೋಗಿದ್ದರು. ಹಾಸನದಿಂದ ಮಾರನಹಳ್ಳಿವರೆಗೆ ಸಂಪರ್ಕ ಕಲ್ಪಿಸುವ ಚತುಷ್ಪಥ ರಸ್ತೆ ಕಾಮಗಾರಿ ಆರಂಭಗೊಂಡು 8 ವರ್ಷಗಳೇ ಕಳೆದಿವೆ. ಬರೊಬ್ಬರಿ 700 ಕೋಟಿ ರೂ. ವೆಚ್ಚದ ಯೋಜನೆ ಇನ್ನೂ ಪೂರ್ಣಗೊಂಡಿಲ್ಲ. ಆದರೆ ಕಾಮಗಾರಿ ಮುಗಿಯುವ ಮುನ್ನವೇ ಟೋಲ್ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಯಾರಿ ನಡೆಸಿದ್ದು, ಜನರ ಆಕ್ರೊಶಕ್ಕೆ ಕಾರಣವಾಗಿದೆ. ಟೋಲ್ ಸಂಗ್ರಹಕ್ಕೆ ಮುಂದಾದರೆ ಹೋರಾಟ ನಡೆಸುವುದಾಗಿ ಸಾರ್ವಜನಿಕರು ಎಚ್ಚರಿಕೆ ನೀಡದ್ದಾರೆ.

ಎಲ್ಲಿದೆ ಹೊಸ ಟೋಲ್ ಪ್ಲಾಜಾ?

Bangalore Mangalore Highway: NHAI to start new toll plaza in Byrapura, Alur, Hassan from Dec 16th before cmpleting work

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಬೈರಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೊಂದು ಟೋಲ್ ತಲೆ ಎತ್ತಿದೆ. ಸೋಮವಾರದಿಂದಲೇ (ಡಿಸೆಂಬರ್ 16) ಸುಂಕ ವಸೂಲಿ ಆರಂಭಿಸುವುದಾಗಿ ಹೆದ್ದಾರಿ ಪ್ರಾದಿಕಾರದ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸತತ ಏಳು ವರ್ಷಗಳಿಂದ ಹಾಸನದಿಂದ ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿವರೆಗೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕಾಮಗಾರಿ ನಡೆಯುತ್ತಿದೆ. ಈವರೆಗೆ ಹಾಸನದಿಂದ ಸಕಲೇಶಪುರದ ವರೆಗೆ ಮಾತ್ರ ರಸ್ತೆ ಕಾಮಗಾರಿ ಮುಗಿದಿದೆ.

12 ಕಿಲೋ ಮೀಟರ್ ಕಾಮಗಾರಿ ಇನ್ನೂ ಮುಗಿದಿಲ್ಲ

ಸಕಲೇಶಪುರದಿಂದ ಮಾರನಹಳ್ಳಿವರೆಗಿನ 12 ಕಿಲೋಮೀಟರ್ ಕಾಮಗಾರಿ ಇನ್ನೂ ಆಗಿಲ್ಲ. ಜೊತೆಗೆ ಆಗಿರುವ ರಸ್ತೆ ಕಾಮಗಾರಿ ಕೂಡ ಅವೈಜ್ಞಾನಿಕ ಎಂಬ ಆರೋಪ ಕೇಳಿಬಂದಿದೆ. ಕೆಲವು ಕಡೆ ಫ್ಲೈ ಓವರ್, ಸರ್ವಿಸ್ ರಸ್ತೆ ಕಾಮಗಾರಿಯೂ ಆಗಿಲ್ಲ. ಇನ್ನು ಕೆಲವೆಡೆ ರಸ್ತೆ ಕುಸಿಯುವ ಆತಂಕ ಇದೆ. ಇಷ್ಟೆಲ್ಲ ಅಧ್ವಾನಗಳಿದ್ದರೂ ಸುಂಕ ವಸೂಲಿಗೆ ಹೆದ್ದಾರಿ ಪ್ರಾದಿಕಾರ ಅನುಮತಿ ನೀಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರತಿಭಟನೆಯ ಎಚ್ಚರಿಕೆ ನೀಡಿದ ಸಾರ್ವಜನಿಕರು

ಸೋಮವಾರದಿಂದ ಸುಂಕ ವಸೂಲಿಗೆ ಚಾಲನೆ ನೀಡಿದರೆ ತೀವ್ರ ಹೋರಾಟ ನಡೆಸುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸತೀಶ್ ಪಟೇಲ್ ಕೂಡ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ನಿಯಮ ಉಲ್ಲಂಘಿಸಿ ಟೋಲ್?

Bangalore Mangalore Highway: NHAI to start new toll plaza in Byrapura, Alur, Hassan from Dec 16th before cmpleting work

ಹಾಸನ ಜಿಲ್ಲೆಯ ಶಾಂತಿಗ್ರಾಮದ ಬಳಿ ಒಂದು ಟೋಲ್ ಈಗಾಗಲೇ ಇದೆ. ಕೇವಲ 35 ಕಿಲೋಮೀಟರ್ ದೂರದಲ್ಲಿ ಮತ್ತೊಂದು ಟೋಲ್ ಮಾಡಲಾಗುತ್ತಿದೆ. ಎರಡು ಟೋಲ್​ಗಳ ನಡುವಿನ ಅಂತರ 60 ಕಿಲೋ ಮೀಟರ್ ಎಂದು ಕೇಂದ್ರ ಸಾರಿಗೆ ಸಚಿವರು ಹೇಳಿ ವರ್ಷಗಳೇ ಕಳೆದಿವೆ. ಆದರೂ ನಿಯಮ ಉಲ್ಲಂಘನೆ ಮಾಡಿ ಟೋಲ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಅಪ್ರಾಪ್ತನಿಗೆ ಬೈಕ್ ಓಡಿಸಲು ಕೊಟ್ಟಿದ್ದ ತಂದೆಗೆ 27,000 ರೂ. ದಂಡ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ಥಳೀಯ ಶಾಸಕ ಸಿಮೆಂಟ್ ಮಂಜು, ಟೋಲ್ ಪ್ಲಾಜಾ ಉದ್ಘಾಟನೆ ಸರಿಯಲ್ಲ. ಇನ್ನೂ ಪೂರ್ಣ ಕಾಮಗಾರಿ ಮುಗಿದಿಲ್ಲ. ಮಾಡಿರುವ ಕಾಮಗಾರಿಯೂ ಸರಿಯಿಲ್ಲ. ಈ ಬಗ್ಗೆ ಕೇಂದ್ರ ಸಚಿವರಿಗೂ ಪತ್ರ ಬರೆಯಲಾಗಿದೆ. ಅಧಿಕಾರಿಗಳಿಗೂ ಪತ್ರ ಬರೆಯಲಾಗಿದೆ. ಕಾಮಗಾರಿ ಮುಗಿಸಿ ಸುಂಕ ವಸೂಲಿ ಆರಂಬಿಸಿದರೆ ಸಮಸ್ಯೆ ಇಲ್ಲ. ಆದರೆ ಇಷ್ಟು ತುರ್ತಾಗಿ ಟೋಲ್ ಸಂಗ್ರಹ ಆರಂಭಿಸಬಾರದು ಎಂದು ಹೇಳಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​