AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Mangalore Special Train: ದಸರಾ ಪ್ರಯುಕ್ತ ಮಂಗಳೂರು ಬೆಂಗಳೂರು ವಿಶೇಷ ರೈಲು, ಇಲ್ಲಿದೆ ವೇಳಾಪಟ್ಟಿ

Bangalore Ernakulam Train: ದಸರಾ ಮಹೋತ್ಸವದ ಅಂಗವಾಗಿ ಸಾರ್ವಜನಿಕರಿಗೆ ನೈಋತ್ಯ ರೈಲ್ವೆ ವಿಶೇಷ ಕೊಡುಗೆ ನೀಡಿದೆ. ಬೆಂಗಳೂರು, ಮಂಗಳೂರು ಮತ್ತು ಎರ್ನಾಕುಲಂಗಳ ನಡುವೆ ಈ ವಿಶೇಷ ರೈಲುಗಳ ಸಂಚಾರವಿರಲಿದೆ. ಸೆಪ್ಟೆಂಬರ್ 29 ರಿಂದ ಪ್ರಾರಂಭಿಸಿ ಅಕ್ಟೋಬರ್ 7 ರವರೆಗೂ ವಿವಿಧ ರೈಲುಗಳ ಸಂಚಾರವಿರಲಿದೆ. ದಸರಾ ಸಮಯದಲ್ಲಿ ದೂರದೂರಿಗೆ ಪ್ರಯಾಣಿಸುವವರಿಗಾಗಿ ಈ ವಿಶೇಷ ಸೌಲಭ್ಯ ಜಾರಿಯಾಗಿದೆ.

Bangalore Mangalore Special Train: ದಸರಾ ಪ್ರಯುಕ್ತ ಮಂಗಳೂರು ಬೆಂಗಳೂರು ವಿಶೇಷ ರೈಲು, ಇಲ್ಲಿದೆ ವೇಳಾಪಟ್ಟಿ
ದಸರಾ ಪ್ರಯುಕ್ತ ಬೆಂಗಳೂರು, ಮಂಗಳೂರು ಮತ್ತು ಎರ್ನಾಕುಲಂಗಳಲ್ಲಿ ರೈಲು ಸಂಚಾರ
ಭಾವನಾ ಹೆಗಡೆ
|

Updated on:Sep 30, 2025 | 12:48 PM

Share

ಬೆಂಗಳೂರು, ಸೆಪ್ಟೆಂಬರ್ 30: ದೇಶದ ಎಲ್ಲೆಡೆ ದಸರಾ ಸಂಭ್ರಮ ಮನೆಮಾಡಿದೆ. ಈ ಸಂದರ್ಭದಲ್ಲಿ ದೂರದೂರಿಗೆ ಪ್ರಯಾಣ ಬೆಳೆಸುವವರೂ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ದಸರಾ (Dasara) ಮಹೋತ್ಸವದ ಪ್ರಯುಕ್ತ ಹೆಚ್ಚಿನ ಜನದಟ್ಟಣೆ ಇರುವ ಕಾರಣ ನೈಋತ್ಯ ರೈಲ್ವೇಸ್ (NWS) ಹೊಸ ಕೊಡುಗೆ ನೀಡಿದೆ. ಬೆಂಗಳೂರು, ಮಂಗಳೂರು ಮತ್ತು ಎರ್ನಾಕುಲಂಗಳ ನಡುವೆ ವಿಶೇಷ ರೈಲುಗಳ ಸೇವೆಯನ್ನು ಒದಗಿಸುತ್ತಿದೆ.

ವಿಶೇಷ ರೈಲುಗಳ ವೇಳಾಪಟ್ಟಿ

06257 ಸಂಖ್ಯೆಯ ರೈಲು ಇಂದು ರಾತ್ರಿ ( ಸೆ.30) 11.55 ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 11.15 ಕ್ಕೆ ಮಂಗಳೂರಿನ ಜಂಕ್ಷನ್ ತಲುಪಲಿದೆ. ಹಾಗೆಯೆ ಮರಳಿ ಬರುವಾಗ  ಅಕ್ಟೋಬರ್ 1 ರಂದು 06258 ಸಂಖ್ಯೆಯ ರೈಲು ಮಧ್ಯಾಹ್ನ 2.35 ಕ್ಕೆ ಹೊರಟು ಅಂದಿನ ರಾತ್ರಿ 11.30 ರ ಸುಮಾರಿಗೆ ಯಶವಂತಪುರ ತಲುಪಲಿದೆ. ಈ ರೈಲುಗಳು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕಪುತ್ತೂರು ಮತ್ತು ಬಂಟ್ವಾಳದಲ್ಲಿ  ನಿಲುಗಡೆಗೊಳ್ಳಲಿವೆ.

ಇದನ್ನೂ ಓದಿ ಹುಬ್ಬಳ್ಳಿ ಶಬರಿಮಲೆ ರೈಲು: ಅಯ್ಯಪ್ಪ ಭಕ್ತರಿಗಾಗಿ ನೈಋತ್ಯ ರೈಲ್ವೇಸ್ ವಿಶೇಷ ಕೊಡುಗೆ

06147 ಸಂಖ್ಯೆಯ ರೈಲು ಅಕ್ಟೋಬರ್ 5 ರ ಸಂಜೆ 4.20ಕ್ಕೆ ಎರ್ನಾಕುಲಂನಿಂದ ಹೊರಟು ಮರುದಿನ ಬೆಳಿಗ್ಗೆ 8.15 ಕ್ಕೆ ಬೆಂಗಳೂರನ್ನು ತಲುಪಲಿದೆ.  ಮರಳಿ ಬರುವಾಗ 06148  ಸಂಖ್ಯೆಯ ರೈಲುಗಳು ಸೆ.29 ಮತ್ತು ಅ.6 ರಂದು 10.10 ರ ರಾತ್ರಿಗೆ ಬೆಂಗಳೂರಿನಿಂದ ಹೊರಟು ಸೆ.30 ಮತ್ತು ಅ.7 ರಂದು ಬೆಳಿಗ್ಗೆ 10 ಗಂಟೆಗೆ ಎರ್ನಾಕುಲಂ ಜಂಕ್ಷನ್​ ತಲುಪಲಿವೆ. ಈ ರೈಲುಗಳು ಆಲುವ, ತ್ರಿಶೂರು, ಪಾಲಕ್ಕಾಡ್ ಜಂಕ್ಷನ್, ಪೊದನೂರು ಜಂಕ್ಷನ್, ತಿರುಪ್ಪೂರು, ಈರೋಡ್ ಜಂಕ್ಷನ್, ಸಲೇಮ್ ಜಂಕ್ಷನ್, ಬಂಗಾರ್​ಪೇಟೆ, ವೈಟ್ ಫೀಲ್ಡ್ ಮತ್ತು ಕೆ. ಆರ್ ಪುರಂ ಸ್ಟೇಶನ್​ಗಳಲ್ಲಿ ನಿಲ್ಲಲಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:38 pm, Tue, 30 September 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ