AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಪ್ರಯಾಣ ಮಾರ್ಗದಲ್ಲಿ ಬದಲಾವಣೆ; ಈ ರಸ್ತೆಯನ್ನು ಅಗೆದಿಟ್ಟು ಪಕ್ಕದ ರಸ್ತೆಗೆ ಡಾಂಬರೀಕರಣ ಮಾಡಿದ ಬಿಬಿಎಂಪಿ

ಪ್ರಧಾನಿ ಮೋದಿ ಈ ರಸ್ತೆ ಬರುತ್ತಾರೆ ಎಂದು ಡಾಂಬರೀಕರಣಕ್ಕೆ ಸಿದ್ಧತೆ ನಡೆಸಲಾಗಿತ್ತು. ಯಾವಾಗ ಈ ರಸ್ತೆಯಲ್ಲಿ ಅವರು ಬರಲ್ಲಾ ಎಂದು ತಿಳಿಯಿತೋ ಈ ಕೆಲಸವನ್ನು ಅರ್ಧಕ್ಕೆ ಬಿಟ್ಟ ಬಿಬಿಎಂಪಿ ಅದರ ಪಕ್ಕದ ರಸ್ತೆಗೆ ಡಾಂಬರೀಕರಣ ಮಾಡಿತು.

ಮೋದಿ ಪ್ರಯಾಣ ಮಾರ್ಗದಲ್ಲಿ ಬದಲಾವಣೆ; ಈ ರಸ್ತೆಯನ್ನು ಅಗೆದಿಟ್ಟು ಪಕ್ಕದ ರಸ್ತೆಗೆ ಡಾಂಬರೀಕರಣ ಮಾಡಿದ ಬಿಬಿಎಂಪಿ
ಕೊನೇ ಕ್ಷಣದಲ್ಲಿ ಮೋದಿ ಪ್ರಯಾಣದ ಮಾರ್ಗದಲ್ಲಿ ಬದಲಾವಣೆ; ಈ ರಸ್ತೆಯನ್ನು ಅಗೆದಿಟ್ಟು ಪಕ್ಕದ ರಸ್ತೆಗೆ ಡಾಂಬರೀಕರಣ ಮಾಡಿದ ಬಿಬಿಎಂಪಿ
TV9 Web
| Edited By: |

Updated on:Nov 11, 2022 | 1:00 PM

Share

ಬೆಂಗಳೂರು: ಒಳಗೆ ಕಲ್ಮಶ ಇಟ್ಟುಕೊಂಡು ಹೊರಗಿಂದ ಸ್ನಾನ ಮಾಡಿ ತಾನು ಪರಿಶುದ್ಧ ಎಂದು ತೋರಿಸಿಕೊಳ್ಳುವಂತಿದೆ ಈ ಬಿಬಿಎಂಪಿ (BBMP)ಯ ನಡೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಬರುವ ರಸ್ತೆಗಳನ್ನಷ್ಟೇ ಸ್ವಚ್ಛಗೊಳಿಸಿದ್ದಲ್ಲದೆ, ಅಂತಹ ರಸ್ತೆಗಳನ್ನು ಡಾಂಬರೀಕರಣ ಮಾಡಿ ದುರಸ್ತಿಗೊಳಿಸಲಾಗಿದೆ. ಅದರ ಪಕ್ಕದ ರಸ್ತೆಗಳು ಹದಗೆಟ್ಟಿದ್ದರೂ ಅದನ್ನು ಸರಿಪಡಿಸುವ ಗೋಜಿಗೆ ಅಧಿಕಾರಿಗಳು ಮುಂದಾಗದಿರುವುದು ವಿಷಾದವೇ ಸರಿ. ಸದ್ಯ ಬಿಬಿಎಂಪಿ ಅಧಿಕಾರಿಗಳ ಇಂತಹ ಚಾಣಾಕ್ಷತನದಿಂದಾಗಿ ವಾಹನ ಸವಾರರು ನರಕಯಾತನೆ ಅನುಭವಿಸುವಂತಾಗಿದೆ. ಮೋದಿ ಅವರ ಪ್ರಯಾಣದ ಮಾರ್ಗದಲ್ಲಿ ಬದಲಾವಣೆ ಆದಾಗ ಮೊದಲು ನಿಗದಿಯಾಗಿದ್ದ ರಸ್ತೆ ದುರಸ್ತಿಯನ್ನು ಅರ್ಧಕ್ಕೆ ಕೈಬಿಟ್ಟು ಮೋದಿ ಸಂಚರಿಸುವ ಆ ರಸ್ತೆಯ ಪಕ್ಕದ ರಸ್ತೆಗೆ ಡಾಂಬರೀಕರಣ ಮಾಡಿ ಅಧಿಕಾರಿಗಳು ಚಾಣಾಕ್ಷತನ ಮೆರೆದಿದ್ದಾರೆ.

ಪ್ರಧಾನಿ ಮೋದಿ‌ ಬರುತ್ತಾರೆ ಎಂದು ಅವರು ಅಂಚರಿಸುವ ಮಾರ್ಗಗಳನ್ನು ದುರಸ್ತಿಗೊಳಿಸಲಾಗಿದೆ. ಸಿಟಿ ರೈಲ್ವೆ ನಿಲ್ದಾಣ ಮುಂಭಾಗ ಇರುವ ಗುಬ್ಬಿ ತೋಟದಪ್ಪ ರಸ್ತೆಯಲ್ಲಿ ಸಂಚಾರ ಮಾಡುತ್ತಾರೆ ಎಂಬ ಕಾರಣಕ್ಕೆ ಬಿಬಿಎಂಪಿ ಅಧಿಕಾರಿಗಳು ಆರಂಭದಲ್ಲಿ ರಸ್ತೆ ಡಾಂಬರೀಕರಣಕ್ಕೆ ತಯಾರಿ ನಡೆಸಿದ್ದರು. ಇದ್ದ ಡಾಂಬರ್ ಕಿತ್ತು ಹಾಕಿ ವಾಹನ ಓಡಾಟಕ್ಕೆ ಯೋಗ್ಯವಲ್ಲದಂತೆ ಮಾಡಿದ್ದ ಬಿಬಿಎಂಪಿ, ಯಾವಾಗ ಪ್ರಧಾನಿ ಆ ರಸ್ತೆಯಲ್ಲಿ ಬರಲ್ಲ ಎಂದು ಗೊತ್ತಾದಾಗ ಪಿಎಂ ಬರುವ ಪಕ್ಕದ ರಸ್ತೆಗೆ ಡಾಂಬರೀಕರಣ ಮಾಡಿದರು.

ಬಿಬಿಎಂಪಿ ಅಧಿಕಾರಿಗಳು ಮರೆದ ಈ ಚಾಣಾಕ್ಷತನವು ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ. ರಸ್ತೆಯಲ್ಲಿದ್ದ ಡಾಂಬರ್​ ಕಿತ್ತು ಹಾಕಿ ವಾಹನ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾರೆ. ವಾಹನ ಸವಾರರು ತಮ್ಮ ವಾಹನಗಳನ್ನು ಹರಸಾಹಸಪಟ್ಟು ಸಮತೋಲನ ಮಾಡಿಕೊಂಡು ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ. ಯಾವಾಗ ಬೈಕ್ ಸ್ಕಿಡ್ ಆಗುತ್ತದೆಯೋ ಎಂಬ ಭಯ ಆವರಿಸಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:00 pm, Fri, 11 November 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್