AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ‌; ದ್ವಿಚಕ್ರ, ತ್ರಿಚಕ್ರ ಸೇರಿ ಕೆಲವು ವಾಹನಗಳಿಗೆ ನಿಷೇಧ, ಇನ್ನೂ ಕೆಲವು ಕಠಿಣ ನಿಯಮ

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​​ ವೇನಲ್ಲಿ ಅಪಘಾತಗಳ ತಡೆಗೆ ಮತ್ತಷ್ಟು ಕಠಿಣ ನಿಯಮ ಜಾರಿಗೊಳಿಸಲು ಮುಂದಾದ ಹೆದ್ದಾರಿ ಪ್ರಾಧಿಕಾರ. ಇಲ್ಲಿದೆ ಪೂರ್ಣ ವಿವರ

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ‌; ದ್ವಿಚಕ್ರ, ತ್ರಿಚಕ್ರ ಸೇರಿ ಕೆಲವು ವಾಹನಗಳಿಗೆ ನಿಷೇಧ, ಇನ್ನೂ ಕೆಲವು ಕಠಿಣ ನಿಯಮ
ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ‌
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Jul 24, 2023 | 9:03 PM

Share

ರಾಮನಗರ: ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​​ ವೇನಲ್ಲಿ (Bengaluru Mysuru Expressway) ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಎಕ್ಸ್‌ಪ್ರೆಸ್‌ ವೇ‌ನಲ್ಲಿ ದ್ವಿಚಕ್ರ, ತ್ರಿಚಕ್ರ ಸೇರಿದಂತೆ ಕೆಲವು ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಬೈಕ್, ಆಟೋ, ಟ್ರಾಕ್ಟರ್ ಹಾಗೂ ಇತರ ಸಣ್ಣ ವಾಹನಗಳಿಗೆ ನಿಷೇಧ ಹೇರಿ ಅಧಿಸೂಚನೆ ಹೊರಡಿಸಲಾಗಿದೆ. ಜುಲೈ 12ರಂದೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದ್ದು, ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿದೆ.

ಯಾವೆಲ್ಲಾ ವಾಹನಗಳಿಗೆ ನಿಷೇಧ?

  • ಮೋಟರ್ ಸೈಕಲ್​​ (ಸ್ಕೂಟರ್ ಮತ್ತು ಇತರೆ ದ್ವಿಚಕ್ರವಾಹನ)
  • ತ್ರಿಚಕ್ರವಾಹನ (ಆಟೋ ರಿಕ್ಷಾ ಸೇರಿದಂತೆ)
  • ಮೋಟಾರು ರಹಿತ ವಾಹನಗಳು
  • ಟ್ರಾಕ್ಟರ್‌ಗಳು, ಮಲ್ಟಿ ಆಕ್ಸೇಲ್ ಹೈಡ್ರಾಲಿಕ್ ವಾಹನಗಳು
  • ಕ್ವಾಡ್ರಿ ಚಕ್ರ ವಾಹನಗಳು

ವೇಗದ ಮಿತಿ 100 ಕಿಮೀ

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​​ ವೇನಲ್ಲಿ ಸಂಚರಿಸುವ ವಾನಗಳಿಗೆ ಗಂಟೆಗೆ 80ರಿಂದ 100 ಕಿಲೋಮೀಟರ್​ ವೇಗದ ಮಿತಿ ನಿಗದಿಪಡಿಸಲಾಗಿದೆ. ಈ ಕುರಿತೂ ಹೆದ್ದಾರಿ ಪ್ರಾಧಿಕಾರದ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

2000ಕ್ಕೂ ಹೆಚ್ಚು ವಾಹನಗಳ ಮಾಲೀಕರ ವಿರುದ್ಧ ಪ್ರಕರಣ

ಜುಲೈ ತಿಂಗಳಲ್ಲಿ 24ನೇ ತಾರೀಖಿನ ವರೆಗೆ ಎಕ್ಸ್‌ಪ್ರೆಸ್‌ವೇನಲ್ಲಿ ಅತಿವೇಗದ ಚಾಲನೆಗಾಗಿ (ಗಂಟೆಗೆ 100 ಕಿಮೀಗಿಂತ ಹೆಚ್ಚು ವೇಗದ ಚಾಲನೆ) 2,000 ಕ್ಕೂ ಹೆಚ್ಚು ವಾನಹಗಳ ಮಾಲೀಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಚಿಸಿದ ಸುರಕ್ಷತಾ ಸಮಿತಿಯು ಎಕ್ಸ್‌ಪ್ರೆಸ್‌ವೇ ಸುರಕ್ಷತೆಗೆ ಸಂಬಂಧಿಸಿದಂತೆ ವರದಿಯನ್ನು ಸಲ್ಲಿಸಿದೆ. ಏತನ್ಮಧ್ಯೆ, ಎಡಿಜಿಪಿ ಅಲೋಕ್ ಕುಮಾರ್ ಮಂಗಳವಾರ ಮತ್ತೊಮ್ಮೆ ಎಕ್ಸ್‌ಪ್ರೆಸ್‌ವೇ ಪರಿಶೀಲನೆ ನಡೆಸಲಿದ್ದಾರೆ. ಅಲೋಕ್ ಕುಮಾರ್ ಬಿಡದಿಯಿಂದ ಮೈಸೂರುವರೆಗಿನ ಎಕ್ಸ್‌ಪ್ರೆಸ್‌ವೇಯನ್ನು ಪರಿಶೀಲಿಸಲಿದ್ದಾರೆ.

ಇದನ್ನೂ ಓದಿ: Bengaluru Mysuru expressway: ಪ್ರವೇಶ, ನಿರ್ಗಮನ ಜಾಗಗಳಲ್ಲಿ ದಟ್ಟಣೆ; ಪ್ರಯಾಣದ ಸಮಯ ಹೆಚ್ಚಳ

ಅಲೋಕ್ ಕುಮಾರ್ ಅವರು ಈ ಹಿಂದೆ ಜೂನ್‌ನಲ್ಲಿ ಎಕ್ಸ್​​​ಪ್ರೆಸ್​​​ ವೇ ಪರಿಶೀಲನೆ ನಡೆಸಿದ್ದರು. ನಂತರ ಎಕ್ಸ್‌ಪ್ರೆಸ್‌ವೇಯಲ್ಲಿ ವೇಗದ ಮಿತಿಯನ್ನು ಜಾರಿಗೆ ತರಲಾಗಿತ್ತು. ಅಪಘಾತಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಮುಖ ಕಾರಣಗಳಲ್ಲಿ ಅತಿವೇಗವು ಒಂದಾಗಿದೆ ಎಂದು ಅವರು ಹೇಳಿದ್ದರು.

ಮಾರ್ಚ್‌ನಲ್ಲಿ ಲೋಕಾರ್ಪಣೆಯಾದ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ 570 ಕ್ಕೂ ಹೆಚ್ಚು ಅಪಘಾತಗಳು ವರದಿಯಾಗಿವೆ. ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 350 ಜನರು ಗಾಯಗೊಂಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:01 pm, Mon, 24 July 23

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ