AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಅಪಸ್ವರ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿ ನ ಕೋಡಿಹಳ್ಳಿ ಗ್ರಾಮದಲ್ಲಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೈಜ್ಞಾನಿಕವಾಗಿ ನಡೆಯುತ್ತಿಲ್ಲ. ಈ ಹಿಂದೆ ಸ್ಥಳ ವೀಕ್ಷಣೆ ಮಾಡಿ ಬಳಿಕ ನಿತಿನ್ ಗಡ್ಕರಿ ಅವರ ಗಮನಕ್ಕೂ ತರಲಾಗಿದೆ.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಅಪಸ್ವರ
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಸಂಸದೆ ಸುಮಲತಾ ಅಪಸ್ವರ
TV9 Web
| Updated By: ಸಾಧು ಶ್ರೀನಾಥ್​|

Updated on:Aug 18, 2021 | 12:44 PM

Share

ಮಂಡ್ಯ: ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಅಸಮಾಧಾನ ವ್ಯಕ್ತಪಡಿಸಿದ್ದು, ಸೈಂಟಿಫಿಕ್ ಆಗಿ ಹೆದ್ದಾರಿ ಕಾಮಗಾರಿ ಆಗ್ತಿಲ್ಲ. ಇದನ್ನು ಈ ಹಿಂದೆ ಸ್ಥಳ ವೀಕ್ಷಣೆ ಮಾಡಿದ ಬಳಿಕ ನಿತಿನ್ ಗಡ್ಕರಿ ಅವರ ಗಮನಕ್ಕೂ ತರಲಾಗಿದೆ ಎಂದು ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿ ನ ಕೋಡಿಹಳ್ಳಿ ಗ್ರಾಮದಲ್ಲಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೈಜ್ಞಾನಿಕವಾಗಿ ನಡೆಯುತ್ತಿಲ್ಲ. ಈ ಹಿಂದೆ ಸ್ಥಳ ವೀಕ್ಷಣೆ ಮಾಡಿ ಬಳಿಕ ನಿತಿನ್ ಗಡ್ಕರಿ ಅವರ ಗಮನಕ್ಕೂ ತರಲಾಗಿದೆ.

ಆಕ್ಸಿಸ್ ರೋಡ್ ಇಲ್ಲಾ, ಎಕ್ಸಿಟ್ ರೀಡ್ ಕೊಟ್ಟಿಲ್ಲ, ಸರ್ವಿಸ್ ರೋಡ್ ಕೊಟ್ಟಿಲ್ಲ‌. ಇದರ ಬಗ್ಗೆ ಪ್ರಶ್ನಿಸಿದಾಗಲೆಲ್ಲಾ ಭರವಸೆ ಕೊಟ್ಟುಕೊಂಡು ಬರುತ್ತಲೆ ಇದ್ದಾರೆ. ನಾನು ಇದರ ಬಗ್ಗೆ ಹೋರಾಟ ಮಾಡೋ ಭರವಸೆ ನೀಡಿದ್ದೀನಿ. ಇದರ ಬಗ್ಗೆ ಮಾತನಾಡಿದ್ರೆ ಅದನ್ನ ಬೇರೆ ರೀತಿ ಬಿಂಬಿಸಲಾಗತ್ತೆ. ಹೆದ್ದಾರಿ ಕಾಮಗಾರಿಗೆ ಸುಮಲತಾ ತಡೆ ಮಾಡ್ತಾರೆ ಅಂತ ಬಿಂಬಿಸಲಾಗತ್ತೆ ಎಂದು ಸುಮಲತಾ ತಮ್ಮಅಳಲು ತೋಡಿಕೊಂಡರು.

ಅಧಿಕಾರಿಗಳು ನಿರ್ಲಕ್ಷ್ಯ: ಶಾಲಾ ಕಟ್ಟಡ ನಿರ್ಮಿಸಿಕೊಡಿ -ಅಗರಲಿಂಗನದೊಡ್ಡಿ ಗ್ರಾಮಸ್ಥರ ಮನವಿ ಇದಕ್ಕೂ ಮುನ್ನ, ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಅಗರಲಿಂಗನದೊಡ್ಡಿ ಗ್ರಾಮಕ್ಕೆ ಸಂಸದೆ ಸುಮಲತಾ ಭೇಟಿ ಕೊಟ್ಟಿದ್ದರು. ಶಾಲಾ ಕಟ್ಟಡ ಕಟ್ಟಿಸಿಕೊಡುವಂತೆ ಗ್ರಾಮಸ್ಥರು ಈ ವೇಳೆ ಮನವಿ ಮಾಡಿದರು.

ಹೆದ್ದಾರಿ ನಿರ್ಮಾಣ ಹಿನ್ನೆಲೆ ಶಾಲಾ ಕಟ್ಟಡ ತೆರವು ಮಾಡಿದ್ದರು. ಗ್ರಾಮದಲ್ಲಿ ಶಾಲಾ ಕಟ್ಟಡಕ್ಕೆ ಹಣ ಬಿಡುಗಡೆಯಾಗಿದೆ. ಶಾಲಾ ಕಟ್ಟಡ ನಿರ್ಮಾಣ ಮಾಡದೆ ಕಳೆದ ಮೂರು ವರ್ಷಗಳಿಂದ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೆ. ಹೀಗಾಗಿ ಶಾಲಾ ಕಟ್ಟಡ ಕಟ್ಟಿಸಿಕೊಡುವಂತೆ ಸಂಸದೆಗೆ ಗ್ರಾಮಸ್ಥರು ಮನವಿ ಮಾಡಿದರು.

ಮಂಡ್ಯ: ದಿಶಾ ಸಭೆ ಆರಂಭದಲ್ಲೇ ಸಂಸದೆ ಸುಮಲತಾಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಟಾಂಗ್, ಸುಮಲತಾ ಸಿಬ್ಬಂದಿ ವಿರುದ್ಧ ಗರಂ

(bangalore mysore national highway construction not working scientifically mp sumalatha ambareesh)

Published On - 12:09 pm, Wed, 18 August 21

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ