AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore News: ವಾಹನ ದಟ್ಟಣೆಗೆ ಪರಿಹಾರ ಕಂಡುಕೊಂಡ ಬೆಂಗಳೂರು ಪೊಲೀಸರು; ಟ್ರಾಫಿಕ್ ಜಂಜಾಟಕ್ಕೆ ಬೀಳಲಿದೆ ಬ್ರೇಕ್

Bangalore Traffic: ಬೆಂಗಳೂರು ನಗರದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಪೊಲೀಸರು ಗೂಗಲ್ ಅಧ್ಯಯನ ನಡೆಸಿದ್ದಾರೆ. ಅಧ್ಯಯನದಂತೆ ಟ್ರಾಫಿಕ್ ಸಿಗ್ನಲ್ ಟೈಮಿಂಗ್​ ಅನ್ನು ಕತ್ರಿಗುಪ್ಪೆ ಸಿಗ್ನಲ್​ನಲ್ಲಿ ಅಳವಿಡಿಸಿ ಯಶಸ್ವಿಕಂಡಿದೆ. ಇತರೆ ಕಡೆಗಳಲ್ಲೂ ಟೈಮಿಂಗ್ ಅಳವಡಿಕೆಗೆ ಚಿಂತನೆ ನಡೆಸಲಾಗುತ್ತಿದೆ.

Bangalore News: ವಾಹನ ದಟ್ಟಣೆಗೆ ಪರಿಹಾರ ಕಂಡುಕೊಂಡ ಬೆಂಗಳೂರು ಪೊಲೀಸರು; ಟ್ರಾಫಿಕ್ ಜಂಜಾಟಕ್ಕೆ ಬೀಳಲಿದೆ ಬ್ರೇಕ್
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 04, 2022 | 11:45 AM

Share

ಬೆಂಗಳೂರು: ನಗರದಲ್ಲಿ ವಾಹನ ಸಂಚಾರಗಳ ಓಡಾಡ ಹೆಚ್ಚಾಗತ್ತಿದ್ದು, ದಿನನಿತ್ಯ ಜನರು ಟ್ರಾಫಿಕ್ ಕಿರಿಕಿರಿಯನ್ನು ಅನುಭವಿಸುತ್ತಿದ್ದಾರೆ. ಈ ಟ್ರಾಫಿಕ್ ಜಂಜಾಟವನ್ನು ನಿಯಂತ್ರಿಸಲು ಬೆಂಗಳೂರು ನಗರ ಪೊಲೀಸ್ ಇಲಾಖೆ ಗೂಗಲ್ ಮೊರೆಹೋಗಿದ್ದು, ಇಲ್ಲಿ ನಡೆಸಿದ ಅಧ್ಯಯನವನ್ನು ಪ್ರಯೋಗಿಸಲು ಮುಂದಾಗಿದೆ. ಈಗಾಗಲೇ ಗೂಗಲ್ ಅಧ್ಯಯನದಂತೆ ಟ್ರಾಫಿಕ್ ಸಿಗ್ನಲ್ ಟೈಮಿಂಗ್ ಅನ್ನು ಕತ್ತರಿಗುಪ್ಪೆ ಸಿಗ್ನಲ್ ಬಳಿ ಪ್ರಾಯೋಗಿಕವಾಗಿ ಅಳವಡಿಸಿತು. ಈ ಪ್ರಯೋಗದಲ್ಲಿ ಯಶಸ್ವಿ ಕಂಡ ಹಿನ್ನೆಲೆ ಇತರೆ ಕಡೆಗಳಲ್ಲೂ ಟೈಮಿಂಗ್ ಸೆಟ್ ಮಾಡಲು ಪೊಲೀಸ್ ಇಲಾಖೆ ಮುಂದಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಜಾಮ್ ಆಗುತ್ತಿರುವ ಹಿನ್ನೆಲೆ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಪರಿಹಾರ ಕಂಡುಕೊಳ್ಳಲು ನಿರ್ಧರಿಸಿದ ನಗರ ಟ್ರಾಫಿಕ್ ಪೊಲೀಸರು, ಗೂಗಲ್ ಅಧ್ಯಯ ನಡೆಸಿದ್ದಾರೆ. ಈ ಅಧ್ಯಯನದ ಮೂಲಕ ಕಂಡುಕೊಂಡ ಟ್ರಾಫಿಕ್ ಸಿಗ್ನಲ್ ಟೈಮಿಂಗ್ ಅನ್ನು ಮೊದಲ ಬಾರಿಗೆ ಕತ್ತರಿಗುಪ್ಪೆಯಲ್ಲಿ ಪ್ರಯೋಗಿಸಲಾಗಿದೆ.

ಕತ್ರಿಗುಪ್ಪೆಯ ಜಂಕ್ಷನ್ ಸಂಪರ್ಕಿಸುವ ನಾಲ್ಕು ರಸ್ತೆಗಳ ಸಿಗ್ನಲ್ ಬಗ್ಗೆ ಉಪಗ್ರಹದ ನೆರವಿನಿಂದ ವೈಜ್ಞಾನಿಕವಾಗಿ ಗೂಗಲ್​ ಅಧ್ಯಯನ ನಡೆಸಿದೆ. ನಾಲ್ಕು ರಸ್ತೆಯಲ್ಲಿ ಯಾವ ಸಮಯದಲ್ಲಿ ಎಷ್ಟು ವಾಹನ ದಟ್ಟಣೆ ಇರುತ್ತದೆ, ಯಾವ ರಸ್ತೆಯಲ್ಲಿ ವಾಹನ ದಟ್ಟಣೆ ಕಡಿಮೆ ಇರುತ್ತದೆ, ಬೆಳಗಿನ ಅವದಿಯಲ್ಲಿ ಎಷ್ಟು, ಮಧ್ಯಾಹ್ನ ಎಷ್ಟು, ಸಂಜೆ ಎಷ್ಟು ಹಾಗೂ ರಾತ್ರಿ ವೇಳೆ ಎಷ್ಟು ದಟ್ಟಣೆ ಇರುತ್ತದೆ, ಯಾವ ರಸ್ತೆಗೆ ಯಾವ ಸಮಯದಲ್ಲಿ ಎಷ್ಟು ಸೆಕೆಂಡ್ ಕಾಲಾವಧಿ ನೀಡಬೇಕು ಎಂಬಿತ್ಯಾದಿಗಳ ಬಗ್ಗೆ ವಿವರವಾಗಿ ಅಧ್ಯಯನ ನಡೆಸಲಾಗಿದೆ.

ಈ ಅಧ್ಯಯನದ ಮೂಲಕ ಕತ್ತರಿಗುಪ್ಪೆ ಸಿಗ್ನಲ್​ನಲ್ಲಿ ಟೈಮರ್ ಸೆಕೆಂಡ್ ಅನ್ನು ಪ್ರಾಯೋಗಿಕವಾಗಿ ಅಳವಡಿಸಲಾಗಿದೆ. ಟ್ರಾಫಿಕ್ ಪೊಲೀಸರ ಪ್ರಾಯೋಗಿಕ ಯೋಜನೆಯು ಯಶಸ್ವಿಯಾಗಿದ್ದು, ಸಮಸ್ಯೆಗೆ ಪರಿಹಾರ ಕಂಡುಕೊಂಡ ಟ್ರಾಫಿಕ್ ಪೊಲೀಸರ ಮುಖದಲ್ಲಿ ಮಂದಹಾಸ ಮೂಡಿದೆ.

ಕತ್ತರಿಗುಪ್ಪೆ ಸಿಗ್ನಲ್​ಗೆ ಅಳವಡಿಸಿದ ಹೊಸ ಟೈಮಿಂಗ್​ನಿಂದಾಗಿ ಸಿಗ್ನಲ್​ನಲ್ಲಿ ವಾಹನ ದಟ್ಟಣೆ ಇಳಿಕೆಯಾಗಿದೆ. ಯಶಸ್ವಿ ಪ್ರಯೋಗದ ನಂತರ ನಗರದ ಇತರೆ ಕಡೆಗಳಲ್ಲಿ ವ್ಯವಸ್ಥೆಯನ್ನು ಜಾರಿಗೊಳಿಸಲು ಪೊಲೀಸರು ಒಲವು ತೋರಿಸುತ್ತಿದ್ದಾರೆ. ಈ ಬಗ್ಗೆ ಇನ್ನಷ್ಟು ಅಧ್ಯಯನ ನಡೆಸಿ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ.

Published On - 11:44 am, Thu, 4 August 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!