AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore News: ವಾಹನ ದಟ್ಟಣೆಗೆ ಪರಿಹಾರ ಕಂಡುಕೊಂಡ ಬೆಂಗಳೂರು ಪೊಲೀಸರು; ಟ್ರಾಫಿಕ್ ಜಂಜಾಟಕ್ಕೆ ಬೀಳಲಿದೆ ಬ್ರೇಕ್

Bangalore Traffic: ಬೆಂಗಳೂರು ನಗರದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಪೊಲೀಸರು ಗೂಗಲ್ ಅಧ್ಯಯನ ನಡೆಸಿದ್ದಾರೆ. ಅಧ್ಯಯನದಂತೆ ಟ್ರಾಫಿಕ್ ಸಿಗ್ನಲ್ ಟೈಮಿಂಗ್​ ಅನ್ನು ಕತ್ರಿಗುಪ್ಪೆ ಸಿಗ್ನಲ್​ನಲ್ಲಿ ಅಳವಿಡಿಸಿ ಯಶಸ್ವಿಕಂಡಿದೆ. ಇತರೆ ಕಡೆಗಳಲ್ಲೂ ಟೈಮಿಂಗ್ ಅಳವಡಿಕೆಗೆ ಚಿಂತನೆ ನಡೆಸಲಾಗುತ್ತಿದೆ.

Bangalore News: ವಾಹನ ದಟ್ಟಣೆಗೆ ಪರಿಹಾರ ಕಂಡುಕೊಂಡ ಬೆಂಗಳೂರು ಪೊಲೀಸರು; ಟ್ರಾಫಿಕ್ ಜಂಜಾಟಕ್ಕೆ ಬೀಳಲಿದೆ ಬ್ರೇಕ್
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 04, 2022 | 11:45 AM

Share

ಬೆಂಗಳೂರು: ನಗರದಲ್ಲಿ ವಾಹನ ಸಂಚಾರಗಳ ಓಡಾಡ ಹೆಚ್ಚಾಗತ್ತಿದ್ದು, ದಿನನಿತ್ಯ ಜನರು ಟ್ರಾಫಿಕ್ ಕಿರಿಕಿರಿಯನ್ನು ಅನುಭವಿಸುತ್ತಿದ್ದಾರೆ. ಈ ಟ್ರಾಫಿಕ್ ಜಂಜಾಟವನ್ನು ನಿಯಂತ್ರಿಸಲು ಬೆಂಗಳೂರು ನಗರ ಪೊಲೀಸ್ ಇಲಾಖೆ ಗೂಗಲ್ ಮೊರೆಹೋಗಿದ್ದು, ಇಲ್ಲಿ ನಡೆಸಿದ ಅಧ್ಯಯನವನ್ನು ಪ್ರಯೋಗಿಸಲು ಮುಂದಾಗಿದೆ. ಈಗಾಗಲೇ ಗೂಗಲ್ ಅಧ್ಯಯನದಂತೆ ಟ್ರಾಫಿಕ್ ಸಿಗ್ನಲ್ ಟೈಮಿಂಗ್ ಅನ್ನು ಕತ್ತರಿಗುಪ್ಪೆ ಸಿಗ್ನಲ್ ಬಳಿ ಪ್ರಾಯೋಗಿಕವಾಗಿ ಅಳವಡಿಸಿತು. ಈ ಪ್ರಯೋಗದಲ್ಲಿ ಯಶಸ್ವಿ ಕಂಡ ಹಿನ್ನೆಲೆ ಇತರೆ ಕಡೆಗಳಲ್ಲೂ ಟೈಮಿಂಗ್ ಸೆಟ್ ಮಾಡಲು ಪೊಲೀಸ್ ಇಲಾಖೆ ಮುಂದಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಜಾಮ್ ಆಗುತ್ತಿರುವ ಹಿನ್ನೆಲೆ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಪರಿಹಾರ ಕಂಡುಕೊಳ್ಳಲು ನಿರ್ಧರಿಸಿದ ನಗರ ಟ್ರಾಫಿಕ್ ಪೊಲೀಸರು, ಗೂಗಲ್ ಅಧ್ಯಯ ನಡೆಸಿದ್ದಾರೆ. ಈ ಅಧ್ಯಯನದ ಮೂಲಕ ಕಂಡುಕೊಂಡ ಟ್ರಾಫಿಕ್ ಸಿಗ್ನಲ್ ಟೈಮಿಂಗ್ ಅನ್ನು ಮೊದಲ ಬಾರಿಗೆ ಕತ್ತರಿಗುಪ್ಪೆಯಲ್ಲಿ ಪ್ರಯೋಗಿಸಲಾಗಿದೆ.

ಕತ್ರಿಗುಪ್ಪೆಯ ಜಂಕ್ಷನ್ ಸಂಪರ್ಕಿಸುವ ನಾಲ್ಕು ರಸ್ತೆಗಳ ಸಿಗ್ನಲ್ ಬಗ್ಗೆ ಉಪಗ್ರಹದ ನೆರವಿನಿಂದ ವೈಜ್ಞಾನಿಕವಾಗಿ ಗೂಗಲ್​ ಅಧ್ಯಯನ ನಡೆಸಿದೆ. ನಾಲ್ಕು ರಸ್ತೆಯಲ್ಲಿ ಯಾವ ಸಮಯದಲ್ಲಿ ಎಷ್ಟು ವಾಹನ ದಟ್ಟಣೆ ಇರುತ್ತದೆ, ಯಾವ ರಸ್ತೆಯಲ್ಲಿ ವಾಹನ ದಟ್ಟಣೆ ಕಡಿಮೆ ಇರುತ್ತದೆ, ಬೆಳಗಿನ ಅವದಿಯಲ್ಲಿ ಎಷ್ಟು, ಮಧ್ಯಾಹ್ನ ಎಷ್ಟು, ಸಂಜೆ ಎಷ್ಟು ಹಾಗೂ ರಾತ್ರಿ ವೇಳೆ ಎಷ್ಟು ದಟ್ಟಣೆ ಇರುತ್ತದೆ, ಯಾವ ರಸ್ತೆಗೆ ಯಾವ ಸಮಯದಲ್ಲಿ ಎಷ್ಟು ಸೆಕೆಂಡ್ ಕಾಲಾವಧಿ ನೀಡಬೇಕು ಎಂಬಿತ್ಯಾದಿಗಳ ಬಗ್ಗೆ ವಿವರವಾಗಿ ಅಧ್ಯಯನ ನಡೆಸಲಾಗಿದೆ.

ಈ ಅಧ್ಯಯನದ ಮೂಲಕ ಕತ್ತರಿಗುಪ್ಪೆ ಸಿಗ್ನಲ್​ನಲ್ಲಿ ಟೈಮರ್ ಸೆಕೆಂಡ್ ಅನ್ನು ಪ್ರಾಯೋಗಿಕವಾಗಿ ಅಳವಡಿಸಲಾಗಿದೆ. ಟ್ರಾಫಿಕ್ ಪೊಲೀಸರ ಪ್ರಾಯೋಗಿಕ ಯೋಜನೆಯು ಯಶಸ್ವಿಯಾಗಿದ್ದು, ಸಮಸ್ಯೆಗೆ ಪರಿಹಾರ ಕಂಡುಕೊಂಡ ಟ್ರಾಫಿಕ್ ಪೊಲೀಸರ ಮುಖದಲ್ಲಿ ಮಂದಹಾಸ ಮೂಡಿದೆ.

ಕತ್ತರಿಗುಪ್ಪೆ ಸಿಗ್ನಲ್​ಗೆ ಅಳವಡಿಸಿದ ಹೊಸ ಟೈಮಿಂಗ್​ನಿಂದಾಗಿ ಸಿಗ್ನಲ್​ನಲ್ಲಿ ವಾಹನ ದಟ್ಟಣೆ ಇಳಿಕೆಯಾಗಿದೆ. ಯಶಸ್ವಿ ಪ್ರಯೋಗದ ನಂತರ ನಗರದ ಇತರೆ ಕಡೆಗಳಲ್ಲಿ ವ್ಯವಸ್ಥೆಯನ್ನು ಜಾರಿಗೊಳಿಸಲು ಪೊಲೀಸರು ಒಲವು ತೋರಿಸುತ್ತಿದ್ದಾರೆ. ಈ ಬಗ್ಗೆ ಇನ್ನಷ್ಟು ಅಧ್ಯಯನ ನಡೆಸಿ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ.

Published On - 11:44 am, Thu, 4 August 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್