Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡದಿಂದ ಎಸೆದು ಮಗುವಿನ ಹತ್ಯೆ ಪ್ರಕರಣ: ಮಗುವಿನ ತಂದೆ ಕಣ್ಣೀರಿಡುತ್ತಾ ಹೇಳಿದ್ದೇನು?

ಬುದ್ಧಿಮಾಂದ್ಯ ಮಗು ಎಂದು ಹೇಳಿ ಸ್ವಂತ ತಾಯಿಯೇ ಮಗುವನ್ನು ನಾಲ್ಕನೇ ಮಹಡಿಯಿಂದ ಎಸೆದು ಹತ್ಯೆ ಮಾಡಿದ ಪ್ರಕರಣ ಸಂಬಂಧ ಮೃತ ಮಗುವಿನ ತಂದೆ ಕಿರಣ್ ಪೊಲೀಸರ ಮುಂದೆ ಕಣ್ಣೀರಿಡುತ್ತಾ ಹೇಳಿಕೆಯನ್ನು ನೀಡಿದ್ದಾರೆ. ಕಿರಣ್ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಟ್ಟಡದಿಂದ ಎಸೆದು ಮಗುವಿನ ಹತ್ಯೆ ಪ್ರಕರಣ: ಮಗುವಿನ ತಂದೆ ಕಣ್ಣೀರಿಡುತ್ತಾ ಹೇಳಿದ್ದೇನು?
ಸಾಂಕೇತಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:Aug 06, 2022 | 11:05 AM

ಬೆಂಗಳೂರು: ಹೆತ್ತ ತಾಯಿಯೇ ತನ್ನ ಮಗುವನ್ನು ನಾಲ್ಕನೇ ಮಹಡಿಯಿಂದ ಎಸೆದು ಹತ್ಯೆ ಮಾಡಿದ ಪ್ರಕರಣ ಸಂಬಂಧ ಪೊಲೀಸರು ಮಗುವಿನ ತಂದೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಹೇಳಿಕೆ ನೀಡುವ ವೇಳೆ ಪೊಲೀಸರ ಮುಂದೆ ಕಣ್ಣೀರಿಟ್ಟ ಮೃತ ಮಗುವಿನ ತಂದೆ ಕಿರಣ್, ಅವಳಿಗೆ ಕಷ್ಟ ಅಂದಿದ್ದರೆ ಮಗುವನ್ನು ನಾನೇ ನೋಡಿಕೊಳ್ಳುತ್ತಿದ್ದೆ ಎಂದಿದ್ದಾರೆ. ಅಲ್ಲದೆ ಕಿರಣ್ ನೀಡಿದ ದೂರಿನದಂತೆ ಪತ್ನಿ ಸುಷ್ಮಾ ವಿರುದ್ಧ ಎಸ್​.ಆರ್​.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಪಂಗಿರಾಮನಗರದಲ್ಲಿ ನೆಲೆಸಿದ್ದ ಸುಷ್ಮಾ ಮತ್ತು ಕಿರಣ್ ದಂಪತಿಗೆ ಒಂದು ಬುದ್ಧಿಮಾಂದ್ಯ ಮುದ್ದಾಗ ಮಗುವಿತ್ತು. ಈ ಮಗುವನ್ನು ಕೊಲ್ಲಲು ನಿರ್ಧರಿಸಿದ ಸುಷ್ಮಾ, ಮಗುವನ್ನು ಆಟ ಆಡಿಸಿ ಬರುತ್ತೇನೆ ಎಂದು ಹೇಳಿ ಎರಡನೇ ಮಹಡಿಯಿಂದ ನಾಲ್ಕನೇ ಮಹಡಿಗೆ ತೆರಳಿ ಮೇಲಿಂದ ಕೆಳಗೆ ಮಗುವನ್ನು ಎಸೆದು ವಿಕೃತಿ ಮೆರೆದಿದ್ದಾಳೆ.

ಮಗುವನ್ನು ಹತ್ಯೆ ಮಾಡಲು ಸುಷ್ಮಾ ಈ ಹಿಂದೆಯೂ ಪ್ರಯತ್ನ ನಡೆಸಿದ್ದಳು ಎಂಬುದು ಮತ್ತೊಂದು ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಈ ಹಿಂದೆ ತನ್ನ ಮಗುವನ್ನು ರೈಲೊಂದಕ್ಕೆ ಹತ್ತಿಸಿ ಸುಷ್ಮಾ ವಾಪಸ್ಸಾಗಿದ್ದಳು. ಆದರೆ ತಾಯಿಯೇ ಮಗುವನ್ನು ಹೇಗೆ ಬಿಡಲು ಸಾಧ್ಯ? ಎಲ್ಲೀ ದಾರಿ ತಪ್ಪಿರಬಹುದು ಎಂದು ಕುಟುಂಬಸ್ಥರು ಅಂದುಕೊಂಡಿದ್ದರು. ರೈಲಿನಲ್ಲಿ ಬಿಟ್ಟುಬಂದ ಮಗು ಎನ್​ಜಿಓ ಒಂದರ ಸಹಾಯದಿಂದ ಮತ್ತೆ ತಂದೆಯ ಮಡಿಲು ಸೇರಿತ್ತು. ನಂತರವೂ ಆ ಮಗುವನ್ನು ಕೊಲ್ಲಲೇ ಬೇಕೆಂದು ನಿರ್ಧರಿಸಿ ನಾಲ್ಕನೇ ಮಹಡಿಯಿಂದ ಮಗುವನ್ನು ಎಸೆದು ಕೊಂದೇ ಬಿಟ್ಟಳು ಪಾಪಿ ತಾಯಿ.

ಪ್ರಕರಣದ ಹಿನ್ನೆಲೆ ಏನು?

ಸಂಪಂಗಿ ರಾಮ ನಗರದ ಅದ್ವಿತ್ ಅಪಾರ್ಟ್ ಮೆಂಟ್​ನಲ್ಲಿ ನೆಲೆಸಿದ್ದ ಸುಷ್ಮಾ ಮತ್ತು ಕಿರಣ್ ದಂಪತಿಗೆ 4 ವರ್ಷದ ಮಗು ಬುದ್ಧಿಮಾಂದ್ಯ ಮಗು ಇದೆ. ತನ್ನ ಮಗು ಬುದ್ಧಿಮಾಂದ್ಯ ಎಂಬ ಕಾರಣಕ್ಕೆ ಇದನ್ನು ಕೊಲ್ಲಲು ಸುಷ್ಮಾ ನಿರ್ಧರಿಸಿ ನಾಲ್ಕನೇ ಮಹಡಿಯಿಂದ ಎಸೆದು ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಳು. ಇದನ್ನು ನೋಡಿದ ನಾಲ್ಕನೇ ಮಹಡಿಯಲ್ಲಿದ್ದ ನಿವಾಸಿಗಳು ಕೂಡಲೇ ಆಕೆಯನ್ನು ತಡೆದಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:05 am, Sat, 6 August 22

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ