AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamarajpet Ganeshotsav: ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿಗೆ ಮನವಿ ಮಾಡಿದ ನಾಗರಿಕರ ಒಕ್ಕೂಟ

Bangalore News: ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವಂತೆ ನಾಗರಿಕರ ಒಕ್ಕೂಟವು ಸಿಎಂ ಅವರ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

Chamarajpet Ganeshotsav: ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿಗೆ ಮನವಿ ಮಾಡಿದ ನಾಗರಿಕರ ಒಕ್ಕೂಟ
ಚಾಮರಾಜಪೇಟೆ ಮೈದಾನ ಮತ್ತು ಗಣೇಶ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 23, 2022 | 1:30 PM

Share

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಸಂಬಂಧ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಮತ್ತು ಗಣೇಶೋತ್ಸವ ಸಮಿತಿ ಮಧ್ಯೆ ಹಗ್ಗಜಗ್ಗಾಟ ನಡೆಯುತ್ತಿದೆ. ಈ ಹಿಂದಿನ ಈದ್ಗಾ ಮೈದಾನವನ್ನು ಮುಸ್ಲಿಮರ ಹಿಡಿತದಿಂದ ಬಿಡಿಸಿಕೊಳ್ಳಲು ಹೋರಾಡಿದ್ದು ನಾವು ಎಂದು ಪ್ರತಿಪಾದಿಸುತ್ತಿರುವ ನಾಗರಿಕ ಒಕ್ಕೂಟವು ವಿನಾಯಕ ಪ್ರತಿಷ್ಠಾಪನೆಯ ಅವಕಾಶ ತನಗೇ ಸಿಗಬೇಕು ಎಂದು ಪಟ್ಟು ಹಿಡಿದಿದೆ. ಇದರ ಮುಂದುವರಿದ ಭಾಗವೆಂಬಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಶಾಸಕ ರೇಣುಕಾಚಾರ್ಯ ಅವರನ್ನು ಭೇಟಿಯಾದ ನಾಗರಿಕರ ಒಕ್ಕೂಟವು ಗಣೇಶ ಪ್ರತಿಷ್ಠಾಪನೆಗೆ ಹಾಗೂ 3 ದಿನ ಗಣೇಶೋತ್ಸವ ನಡೆಸಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದೆ.

ಮೈದಾನದಲ್ಲಿ ಗಣೇಶನನ್ನು ಕೂಡಿಸಲು ಅನುಮತಿ ನೀಡಬೇಕು ಎಂದು ಕೋರಿ ಹಿಂದುತ್ವಪರ ಸಂಘಟನೆಗಳು, ಚಾಮರಾಜಪೇಟೆ ನಾಗರಿಕರ ಒಕ್ಕೂಟ ಮತ್ತು ಗಣೇಶೋತ್ಸವ ಸಮಿತಿಯು ಕಂದಾಯ ಇಲಾಖೆಗೆ ಮನವಿ ಸಲ್ಲಿಸಿದೆ. ಆದರೆ ಈ ಬಗ್ಗೆ ಕಂದಾಯ ಇಲಾಖೆ ಯಾವುದೇ ಹೇಳಿಕೆಯನ್ನು ಅಥವಾ ನಿರ್ಧಾರವನ್ನು ಪ್ರಕಟಿಸಿಲ್ಲ.

ಕಂದಾಯ ಇಲಾಖೆಯೇ ಗಣೇಶೋತ್ಸವ ನಡೆಸಬೇಕು. ಇಲ್ಲದಿದ್ದರೆ ಮುಜರಾಯಿ ಇಲಾಖೆ ಗಣೇಶನ ಮೂರ್ತಿ ಪ್ರತಿಷ್ಠಾಪಿಸಬೇಕು. ಈ ಎರಡೂ ಸಾಧ್ಯವಿಲ್ಲ ಎಂದಾದರೆ ಚಾಮರಾಜಪೇಟೆ ನಾಗರಿಕರ ಒಕ್ಕೂಟಕ್ಕೆ ಅನುಮತಿ ಕೊಡಬೇಕು. ನಮ್ಮೊಂದಿಗೆ ಎಲ್ಲ ಸಂಘಟನೆಗಳು‌ ಸೇರಿ ಗಣೇಶೋತ್ಸವ ಆಚರಿಸುತ್ತೇವೆ ಎಂದು ಒಕ್ಕೂಟವು ಹೇಳುತ್ತದೆ. ಅವಕಾಶ ಸಿಕ್ಕಿದರೆ 3 ದಿನ ಗಣೇಶೋತ್ಸವವನ್ನು ಆಚರಿಸಲಾಗುವುದು, ಮೊದಲ‌ ದಿನ ಪ್ರತಿಷ್ಠಾಪನೆ ಮತ್ತು ಪೂಜಾ ವಿಧಿಗಳನ್ನು ನಡೆಸಲಾಗುವುದು. ಎರಡನೇ ದಿನ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಮೂರನೇ ದಿನ ಚಾಮರಾಜಪೇಟೆ ಸುತ್ತಮುತ್ತ ಅದ್ದೂರಿ ಮೆರವಣಿಗೆ ನಡೆಸಲು ನಿರ್ಧರಿಸಿದೆ.

ಇನ್ನೊಂದೆಡೆ ಬೆಂಗಳೂರು ಗಣೇಶೋತ್ಸವ ಸಮಿತಿಯೂ ಇದೇ ರೀತಿಯ ಮನವಿಯನ್ನು ಮಾಡುತ್ತಿದ್ದು, 10 ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಹಾಗೂ 11ನೇ ದಿನ ಚಾಮರಾಜಪೇಟೆಯ ಗಲ್ಲಿಗಲ್ಲಿಗಳಲ್ಲಿ ಅದ್ದೂರಿ ಮೆರವಣಿಗೆ ನಡೆಸಲು ನಿರ್ಧರಿಸಿದೆ. ಆದರೆ ಇದಕ್ಕೆ ಒಕ್ಕೂಟವು ವಿರೋಧ ವ್ಯಕ್ತಪಡಿಸುತ್ತಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:30 pm, Tue, 23 August 22

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ