AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರಮಹಾಲಕ್ಷ್ಮಿ ಹಬ್ಬಕ್ಕೆ ಕಮಲ ಕೀಳುತ್ತಿದ್ದಾಗ ಕೆರೆಯಲ್ಲಿ ಮುಳುಗಿ ಸಾವು

ವರಮಹಾಲಕ್ಷ್ಮಿ ಹಬ್ಬಕ್ಕೆಂದು ಕಮಲ ಕೀಳುತ್ತಿದ್ದ ವೇಳೆ 70 ವರ್ಷದ ರೈತರೊಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಸಮೀಪದ ಕೋನಘಟ್ಟ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.

ವರಮಹಾಲಕ್ಷ್ಮಿ ಹಬ್ಬಕ್ಕೆ ಕಮಲ ಕೀಳುತ್ತಿದ್ದಾಗ ಕೆರೆಯಲ್ಲಿ ಮುಳುಗಿ ಸಾವು
ಸಾಂಕೇತಿಕ ಚಿತ್ರ
TV9 Web
| Edited By: Rakesh Nayak Manchi|

Updated on:Aug 06, 2022 | 7:06 AM

Share

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬಕ್ಕೆಂದು ಕಮಲ ಕೀಳುತ್ತಿದ್ದ ವೇಳೆ 70 ವರ್ಷದ ರೈತರೊಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಸಮೀಪದ ಕೋನಘಟ್ಟ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ. ಮೃತರನ್ನು ಕೊನಘಟ್ಟ ನಿವಾಸಿ ಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಈತ ಕಾಣೆಯಾಗಿರುವುದನ್ನು ಗಮನಿಸಿದ ಕುಟುಂಬಸ್ಥರು ತೀವ್ರ ಹುಡುಕಾಟ ಆರಂಭಿಸಿದ್ದಾರೆ. ಈ ವೇಳೆ ಕೃಷ್ಣಪ್ಪ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ಕೆರೆಯಿಂದ ಕಮಲ ತರುವುದಾಗಿ ಹೇಳಿದ ಕೃಷ್ಣಪ್ಪ ಮನೆಯಿಂದ ಹೋಗಿದ್ದರು. ರಾತ್ರಿಯಾದರೂ ಮನೆಗೆ ಬಾರದ್ದನ್ನು ಗಮನಿಸಿದ ಕುಟುಂಬಸ್ಥರು ತೀವ್ರ ಹಡುಕಾಟದಲ್ಲಿ ತೊಡಗಿದ್ದಾರೆ. ಈ ವೇಳೆ ಕರೆಯ ಬಳಿ ಚಪ್ಪಲಿ ಪತ್ತೆಯಾಗಿದ್ದು, ಕೆರೆಯಲ್ಲಿ ಹುಡುಕಾಟ ನಡೆಸಲು ಗ್ರಾಮಸ್ಥರು ಮುಂದಾಗಿದ್ದಾರೆ. ಅದಾಗ್ಯೂ ಕೃಷ್ಣಪ್ಪ ಅವರ ಸುಳಿವು ಸಿಗದೇ ಇದ್ದಾಗ ಘಟನೆ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಕುಟುಂಬಸ್ಥರು ಹೇಳಿದ್ದಾರೆ.

ಕುಟುಂಬಸ್ಥರ ದೂರಿನಂತೆ ಶುಕ್ರವಾರ ಬೆಳಗ್ಗೆ ಪೊಲೀಸರು ಸ್ಥಳೀಯ ಈಜುಗಾರರ ಸಹಾಯದಿಂದ ಕೊರಾಕಲ್ ಬಳಸಿ ಶೋಧ ಕಾರ್ಯ ಆರಂಭಿಸಿದ್ದು, ಮಧ್ಯಾಹ್ನ 12.30ರ ಸುಮಾರಿಗೆ ಕೃಷ್ಣಪ್ಪ ಅವರ ಮೃತದೇಹವನ್ನು ಕರೆಯಿಂದ ಹೊರತೆಗೆಯಲಾಯಿತು. ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹವನ್ನು ಪೊಲೀಸರು ಕುಟುಂಬಕ್ಕೆ ಹಸ್ತಾಂತರಿಸಿದರು. ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

Published On - 7:06 am, Sat, 6 August 22

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್